Andolana originals

ಸುತ್ತೂರು ಜಾತ್ರೆ ಕೃಷಿ ಮೇಳ: ಕೃಷಿ ಉದ್ಯಮಿಗಳಾಗುವವರಿಗೆ ಮುಕ್ತ ವೇದಿಕೆ

ಎಸ್.ಎಸ್.ಭಟ್

ನಂಜನಗೂಡು: ತ್ರಿವಿಧ ದಾಸೋಹಕ್ಕೆ ಹೆಸರಾದ ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿರುವ ಕೃಷಿ ಮೇಳ, ಸಮಗ್ರ ಕೃಷಿಯಲ್ಲಿ ಆಸಕ್ತಿ ಹೊಂದಿರುವವರು ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಕೃಷಿ ಉದ್ಯಮಿಗಳಾಗ ಬಯಸುವವರಿಗೆ ಹೇಳಿ ಮಾಡಿಸಿದ ವೇದಿಕೆಯಾಗಿದೆ.

ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿಗೊಳಿಸಿದ ನಂಜನಗೂಡು ರಸಬಾಳೆ, ಮೈಸೂರು ಮಲ್ಲಿಗೆ, ಮೈಸೂರು ವೀಳ್ಯದೆಲೆ, ಈರನಗೆರೆ ಬದನೆಯಂತಹ ಬೆಳೆಗಳನ್ನು ಬೆಳೆಯುವೆಡೆಗೆ ರೈತರು ಹಾಗೂ ರೈತ ಮಹಿಳೆಯರನ್ನು ಆಕರ್ಷಿಸುವಲ್ಲಿ ಸಫಲವಾಗಿದೆ.

ಕೃಷಿ ಬ್ರಹ್ಮಾಂಡದತ್ತ ರೈತರ ಸೆಳೆತ: ಪ್ರತಿ ವರ್ಷದಂತೆ ಕೃಷಿ ಮೇಳ ಆಯೋಜಿಸುವ ಐದುಎಕರೆ ಪ್ರದೇಶದ ಪೈಕಿ ಒಂದು ಎಕರೆ ಪ್ರದೇಶದಲ್ಲಿ ಸಮಗ್ರ ಕೃಷಿ,ಯಲ್ಲಿ ಬೆಳೆಯಲಾಗಿರುವ ಟೊಮೆಟೋ,ಬದನೆ, ಹೈನುಗಾರಿಕೆ ಮತ್ತು ಪಶು ಸಂಗೋಪನೆ ಜಾತ್ರೆಗೆ ಬಂದವರನ್ನು ತನ್ನತ್ತ ಸೆಳೆಯುತ್ತಿದೆ. ಸುತ್ತೂರು ಕೃಷಿ ವಿಜ್ಞಾನ ಕೇಂದ್ರ ಆವಿಷ್ಕರಿಸಿರುವ ಮೂರ ರಿಂದ ಆರು ತಿಂಗಳವರೆಗೆ ಫಲ ನೀಡುವ ಟೊಮೆಟೋ ಮತ್ತು ಬದನೆ ಬೆಳೆಗಳು ಜನಾಕರ್ಷಣೆಯ ಕೇಂದ್ರವಾಗಿದೆ. ಈ ಬದನೆಗೆ ಕಾಡು ಬದನೆ ಅಥವಾ ಸೊಂಡು ಬದನೆಯೊಂದಿಗೆ ಕಸಿ ಮಾಡಲಾಗಿದ್ದು, ಈ ಗಿಡದಿಂದ ಮೂರು ವರ್ಷಗಳವರೆಗೂ ಉತ್ತಮ ಇಳುವರಿ ನಿರೀಕ್ಷಿಸಬಹುದಾಗಿದೆ ಎನ್ನುತ್ತಾರೆ ಸುತ್ತೂರು ಕೃಷಿ ವಿಜ್ಞಾನ ಕೇಂದ್ರದ ಡಾ.ವಿನಯ, ಟೊಮೆಟೋ ಕಸಿಯಿಂದಲೂ ಗಿಡಗಳಲ್ಲಿ ಗೊಂಚಲು ಗೊಂಚಲು ಹಣ್ಣುಗಳು ಬಿಟ್ಟಿದ್ದು, ಈ ಗಿಡಗಳು ಏಳರಿಂದ ಎಂಟು ತಿಂಗಳುಗಳ ಕಾಲ ಫಸಲು ನೀಡುತ್ತದೆ.

ಕೃಷಿ ಮೇಳದಲ್ಲಿ ಸ್ಟೆಪ್…:  ಕೃಷಿ ಮೇಳದಲ್ಲಿ ವಿಜ್ಞಾನಿಗಳ ಪ್ರಯತ್ನದ -ಲವಾಗಿ ಉತ್ತಮ ಫಸಲು ಬಿಟ್ಟಿರುವ ಬೆಳೆಗಳನ್ನು ಕಣ್ತುಂಬಿಕೊಂಡು ಹೋಗುವುದು ಮಾತ್ರವಲ್ಲದೇ ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಗಳನ್ನು ಪರಿಚಯಿಸುವ ಮೂಲಕ ರೈತರನ್ನು ಕೃಷಿ ಉದ್ಯಮಿಗಳನ್ನಾಗಿಸುವ ನಿಟ್ಟಿನಲ್ಲೂ ಇಲ್ಲಿ ಪ್ರಯತ್ನ ನಡೆದಿದೆ. ಕೃಷಿ ಉದ್ಯಮಿಗಳಾಗಲು ಬಯಸಿ ಇಲ್ಲಿ ಹೆಸರು ನೋಂದಾಯಿಸಿದರೆ ಜೆಎಸ್‌ಎಸ್‌ನ ಈ ಅಂಗಸಂಸ್ಥೆ ಸೂಕ್ತ ಮಾರ್ಗದರ್ಶನ ನೀಡಲಿದೆ. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಸ್ಟೆಪ್ ಯೋಜನೆಯಡಿ ಕೃಷಿಕರನ್ನು ಕೃಷಿ ಉದ್ಯಮಿಗಳಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆದಿದೆ.

” ರೈತರನ್ನು ಉದ್ದಿಮೆದಾರರಾಗಿಸಲು ಈ ಕೃಷಿ ಮೇಳದಲ್ಲಿ ಕೃಷಿ ತಜ್ಞರಿಂದ ಸಂವಾದಯುಕ್ತ ಮಾರ್ಗದರ್ಶನ, ಸ್ಟಾರ್ಟ್‌ಆಪ್ ಪ್ರದರ್ಶನ, ಮಹಿಳಾ ಉದ್ದಿಮೆ ದಾರರಿಗೆ ಹೆಚ್ಚಿನ ಉತ್ತೇಶನ ನೀಡಲಾಗುತ್ತಿದೆ”

-ಬಿ.ಎನ್.ಜ್ಞಾನೇಶ್, ಮುಖ್ಯಸ್ಥರು, ಸುತ್ತೂರು

” ರೈತರ ಆಸಕ್ತಿಯ ಬೆಳೆಗಳ ಕುರಿತಾದ ಸಂಪೂರ್ಣ ಮಾಹಿತಿಯೊಂದಿಗೆ ಮಾರುಕಟ್ಟೆಗಾಗಿ ನಿಮ್ಮ ಹೆಸರನ್ನು ನೋಂದಾಯಿಸುವುದರೊಂದಿಗೆ ಆ ಬೆಳೆಗಳ ಮಾರುಕಟ್ಟೆವರೆಗಿನ ಎಲ್ಲ ಹಂತಗಳನ್ನೂ ದಾಟಿ ವರ್ಷದೊಳಗೆ ಕೃಷಿ ಉದ್ಯಮಿಗಳಾಗಿಸುವ ಜವಾಬ್ದಾರಿ ನಮ್ಮದು.”

-ಡಾ. ಶಿವಶಂಕರ್, ಎಸ್‌ಜೆಸಿಇ ಸ್ಟೆಪ್ ಸಂಸ್ಥೆ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

24 mins ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

33 mins ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

44 mins ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

52 mins ago

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…

1 hour ago

ಇರಾನ್-‌ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಭಾರತದ ಭಾಸುಮತಿ ರಫ್ತು ಉದ್ಯಮಕ್ಕೆ ಹೊಡೆತ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…

1 hour ago