Andolana originals

ಸುತ್ತೂರು ಜಾತ್ರೆ ಸಂಪನ್ನ

ಆರು ದಿನಗಳ ವೈಭವದ ಜಾತ್ರಾ ಮಹೋತ್ಸವ

ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ೬ ದಿನಗಳ ಕಾಲ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ಸಾಮಾಜಿಕ ಕ್ಷೇತ್ರಗಳ ಸಮ್ಮಿಲನವಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಗಳವರ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ತೆರೆ ಬಿದ್ದಿತು.

ಒಂದು ವಾರದಿಂದ ಲಕ್ಷೋ ಪಲಕ್ಷ ಜನರು ಆಗಮಿಸಿ ಜಾತ್ರೆಯ ಸಡಗರದಲ್ಲಿ ಭಾಗಿಯಾದರು.

ಅಂದಾಜು ೨೦ರಿಂದ ೨೫ ಲಕ್ಷ ಮಂದಿ ದಾಸೋಹದ ಸವಿ ಸವಿದರು. ಮಹಾ ದಾಸೋಹಕ್ಕೆ ಅಡುಗೆ ಸಿದ್ಧ ಪಡಿಸಿದ ಬಾಣಸಿಗರು, ಉಣ ಬಡಿಸಲು ನೆರವಾದ ಸ್ವಯಂ ಸೇವಕರ ಶ್ರಮ ಮೆಚ್ಚುಗೆಗೆ ಪಾತ್ರವಾಯಿತು.

ಸಹಸ್ರ ವರ್ಷಗಳಿಗೂ ಹೆಚ್ಚು ಇತಿಹಾಸವುಳ್ಳ ಸುತ್ತೂರಿನಲ್ಲಿ ಈ ಬಾರಿ ೨೬ರಿಂದ ೩೧ರವರೆಗೆ ಆಯೋಜಿಸಿದ್ದ ಜಾತ್ರಾ ಮಹೋತ್ಸವದಲ್ಲಿ ಪ್ರತಿದಿನ ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಿ ಆಧ್ಯಾತ್ಮಿಕತೆ, ಕೃಷಿ, ಶೈಕ್ಷಣಿಕ ಹಾಗೂ ವೈಜ್ಞಾನಿಕ ವಿಚಾರಗಳ ಬಗ್ಗೆ ಅರಿವು ಪಡೆದುಕೊಂಡರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ನೇತೃತ್ವದಲ್ಲಿ ಎಲ್ಲ ಕಾರ್ಯಕ್ರಮಗಳೂ ಅಚ್ಚುಕಟ್ಟಾಗಿ ನಡೆದವು.

ಈ ಬಾರಿ ನಡೆದ ಸಾಮೂಹಿಕ ವಿವಾಹದಲ್ಲಿ ೧೫೫ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದರಲ್ಲಿ ಎಲ್ಲ ಸಮುದಾಯದ ಜೋಡಿಗಳೂ ಇದ್ದವು. ಇದರಲ್ಲಿ ಅಂತರ್ಜಾತಿಯ ೨೩ ಜೋಡಿ, ಅಂತರ್ ಧರ್ಮೀಯ ೧ ಜೋಡಿ, ತಮಿಳುನಾಡಿನ ೧೭ ಜೋಡಿಗಳು ಇದ್ದದ್ದು ವಿಶೇಷ ವಾಗಿತ್ತು.

ಕೃಷಿ ಮೇಳ ಜಾತ್ರೆಗೆ ಆಕರ್ಷಣೆ ತಂದುಕೊಟ್ಟಿದ್ದಲ್ಲದೆ, ಸಾರ್ವಜನಿಕರ ಮೆಚ್ಚುಗೆಯನ್ನೂ ಪಡೆದುಕೊಂಡಿತು. ೫೪ನೇ ದನಗಳ ಜಾತ್ರೆಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಸೇರಿ ಇನ್ನಿತರ ಜಿಲ್ಲೆಗಳಿಂದ ಹಳ್ಳೀಕಾರ್ ತಳಿಗಳ ರಾಸುಗಳು ಪಾಲ್ಗೊಂಡು ಗಮನ ಸೆಳೆದಿದ್ದವು. ಇದಲ್ಲದೆ, ಸಾಂಸ್ಕೃತಿಕ ಮೇಳ, ಭಜನಾ ಮೇಳ, ಕುಸ್ತಿ, ಗಾಳಿಪಟ, ದೋಣಿ ವಿಹಾರ, ದೇಸಿ ಆಟಗಳು ಮೊದಲಾದ ಹತ್ತು ಹಲವು ಕಾರ್ಯಕ್ರಮ ಗಳು ನೋಡುಗರನ್ನು ರಂಜಿಸಿದ್ದವು. ಲಕ್ಷದೀಪೋತ್ಸವ ದಲ್ಲಿ ಲಕ್ಷಾಂತರ ಜನರು ಪಾಲ್ಗೊಂಡರೆ, ತೆಪ್ಪೋತ್ಸವ ದಿನದಂದು ಅಂದಾಜು ಲಕ್ಷಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು.

ಜಾತ್ರಾ ಮಹೋತ್ಸವದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲಾತಂಡಗಳು ಮನಮೋಹಕ ನೃತ್ಯದ ಮೂಲಕ ಸಹಸ್ರಾರು ಜನರ ಮನತಣಿಸಲು ಸಫಲವಾದವು.

ಚಿತ್ರಸಂತೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್, ರಾಯಚೂರು, ಹಂಪಿ, ಮೈಸೂರು, ಬೆಂಗಳೂರು, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹೊರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದ ೧೩೦ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿ ಅತ್ಯುತ್ತಮ ಮತ್ತು ಅಪರೂಪದ ಕೃತಿಗಳನ್ನು ಪ್ರದರ್ಶನ ಮಾಡಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಆಯೋಜಿಸಿದ್ದ ವಸ್ತುಪ್ರದರ್ಶನ, ವಿದ್ಯಾರ್ಥಿಗಳ ಮಲ್ಲಕಂಬ ಕಸರತ್ತು ರೈತರು, ಸಾರ್ವಜನಿಕರನ್ನು ಆಕರ್ಷಿಸಿತು.

ಕೊನೆಯ ದಿನ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಜಾತ್ರಾ ಮಹೋತ್ಸವದ ಸಂಭ್ರಮ ಇಮ್ಮಡಿಗೊಳಿಸುವಂತೆ ಮಾಡಿದರು. ಜಾತ್ರೆಗೆ ಆಗಮಿಸಿದ್ದ ಜನರಿಗೆ ಊಟ, ತಿಂಡಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡ ಮಠದ ಹಿತೈಷಿಗಳು, ಆರು ದಿಗಳ ಕಾಲ ಜಾತ್ರೆಯ ಸಂಭ್ರಮ ಸವಿದ ಜನರು ಶುಕ್ರವಾರ ಭಾರದ ಮನಸ್ಸಿನಿಂದಲೇ ತವರಿನತ್ತ ತೆರಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago