Andolana originals

ಒಳಚರಂಡಿ ಅವ್ಯವಸ್ಥೆ ಸರಿಪಡಿಸಿದ ತಿ.ನರಸೀಪುರ ಪುರಸಭೆ

ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯ ಪುರಸಭೆ ಅಧಿಕಾರಿಗಳು ಒಳಚರಂಡಿ ವ್ಯವಸ್ಥೆ ಸರಿಪಡಿಸಿದ್ದಾರೆ.

‘ಆಂದೋಲನ’ದೊಂದಿಗೆ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್‌ರವರು, ವಾರ್ಡ್ ನಂಬರ್ ೧೦ರ ವಿದ್ಯಾನಗರದ ಒಳಚರಂಡಿ ಕಟ್ಟಿಕೊಳ್ಳಲು ಅಲ್ಲಿನ ನಿವಾಸಿಗಳು ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬಾತ್‌ರೂಮ್ ಒಳಗೆ ಹಾಕಿರುವುದು ಕಾರಣವಾಗಿದೆ. ಆದ್ದರಿಂದ ಮಹಿಳೆಯರು ಸ್ಯಾನಿಟರಿ ಪ್ಯಾಡ್‌ಗಳನ್ನು ಪ್ರತಿನಿತ್ಯ ಬರುವ ಕಸದ ವಾಹನಗಳಿಗೆ ನೀಡಿ ಸಹಕರಿಸಬೇಕು ಎಂದರು.

ಪುರಸಭೆ ವ್ಯಾಪ್ತಿಯೊಳಗೆ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನನ್ನೇ ಸಂಪರ್ಕಿಸಬಹುದು. ನಾನು ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ತ್ವರಿತವಾಗಿ ಕೆಲಸ ಮಾಡಿ ಕೊಡುತ್ತೇನೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೆಲವು ನೌಕರರು ರಜೆ ಹಾಕಿದ್ದರಿಂದ ಸಮಸ್ಯೆಗೆ ಸ್ಪಂದಿಸಲು ವಿಳಂಬವಾಗಿದೆ. ತ್ವರಿತವಾಗಿ ಸ್ಪಂದಿಸಲು ನೌಕರರಿಗೆ ಸಲಹೆ ನೀಡಿದ್ದೇನೆ. ಅವರು ಸ್ಪಂದಿಸದಿದ್ದರೆ ನೇರವಾಗಿ ನನಗೆ ದೂರು ನೀಡಿ ಎಂದು ಮನವಿ ಮಾಡಿದರು. ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಸಮಸ್ಯೆ ಉದ್ಭವವಾದರೆ ಅದಕ್ಕಾಗಿ ಪ್ರತ್ಯೇಕ ವಾಹನ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು ಅವರು ತಕ್ಷಣವೇ ಸ್ಪಂದಿಸಲಿದ್ದಾರೆ. ಸಾರ್ವಜನಿಕರು ಕಚೇರಿಯ ವೇಳೆ ಭೇಟಿ ಮಾಡಿ ಮಾಹಿತಿ ನೀಡಿದರೆ, ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

7 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

8 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

8 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

14 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

14 hours ago