ತಿ.ನರಸೀಪುರ: ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆಯಲ್ಲಿ ಶನಿವಾರ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯ ಪುರಸಭೆ ಅಧಿಕಾರಿಗಳು ಒಳಚರಂಡಿ ವ್ಯವಸ್ಥೆ ಸರಿಪಡಿಸಿದ್ದಾರೆ.
‘ಆಂದೋಲನ’ದೊಂದಿಗೆ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ರವರು, ವಾರ್ಡ್ ನಂಬರ್ ೧೦ರ ವಿದ್ಯಾನಗರದ ಒಳಚರಂಡಿ ಕಟ್ಟಿಕೊಳ್ಳಲು ಅಲ್ಲಿನ ನಿವಾಸಿಗಳು ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್ಗಳನ್ನು ಬಾತ್ರೂಮ್ ಒಳಗೆ ಹಾಕಿರುವುದು ಕಾರಣವಾಗಿದೆ. ಆದ್ದರಿಂದ ಮಹಿಳೆಯರು ಸ್ಯಾನಿಟರಿ ಪ್ಯಾಡ್ಗಳನ್ನು ಪ್ರತಿನಿತ್ಯ ಬರುವ ಕಸದ ವಾಹನಗಳಿಗೆ ನೀಡಿ ಸಹಕರಿಸಬೇಕು ಎಂದರು.
ಪುರಸಭೆ ವ್ಯಾಪ್ತಿಯೊಳಗೆ ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನನ್ನೇ ಸಂಪರ್ಕಿಸಬಹುದು. ನಾನು ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ತ್ವರಿತವಾಗಿ ಕೆಲಸ ಮಾಡಿ ಕೊಡುತ್ತೇನೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೆಲವು ನೌಕರರು ರಜೆ ಹಾಕಿದ್ದರಿಂದ ಸಮಸ್ಯೆಗೆ ಸ್ಪಂದಿಸಲು ವಿಳಂಬವಾಗಿದೆ. ತ್ವರಿತವಾಗಿ ಸ್ಪಂದಿಸಲು ನೌಕರರಿಗೆ ಸಲಹೆ ನೀಡಿದ್ದೇನೆ. ಅವರು ಸ್ಪಂದಿಸದಿದ್ದರೆ ನೇರವಾಗಿ ನನಗೆ ದೂರು ನೀಡಿ ಎಂದು ಮನವಿ ಮಾಡಿದರು. ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಸಮಸ್ಯೆ ಉದ್ಭವವಾದರೆ ಅದಕ್ಕಾಗಿ ಪ್ರತ್ಯೇಕ ವಾಹನ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು ಅವರು ತಕ್ಷಣವೇ ಸ್ಪಂದಿಸಲಿದ್ದಾರೆ. ಸಾರ್ವಜನಿಕರು ಕಚೇರಿಯ ವೇಳೆ ಭೇಟಿ ಮಾಡಿ ಮಾಹಿತಿ ನೀಡಿದರೆ, ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…