Andolana originals

ತಿ.ನರಸೀಪುರ ಪುರಸಭೆ ಅಧ್ಯಕ್ಷರಾಗಿ ವಸಂತ ಆಯ್ಕೆ

ಉಪಾಧ್ಯಕ್ಷರಾಗಿ ರಾಜೇಶ್ವರಿ ರಾಘವೇಂದ್ರ ಆಯ್ಕೆ; ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ

ತಿ.ನರಸೀಪುರ: ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷೆಯಾಗಿ ಬಿ.ವಸಂತ ಶ್ರೀಕಂಠ, ಉಪಾಧ್ಯಕ್ಷೆಯಾಗಿ ಎಂ.ರಾಜೇಶ್ವರಿ ರಾಘವೇಂದ್ರ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಹಿಂದುಳಿದ ವರ್ಗಗಳ ಎ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ 12ನೇ ವಾರ್ಡಿನ ಸದಸ್ಯೆ ಬಿ.ವಸಂತ ಶ್ರೀಕಂಠ ಹಾಗೂ ಪ.ಪಂಗಡ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡಿನ ಸದಸ್ಯೆ ಎಂ. ರಾಜೇಶ್ವರಿ ರಾಘವೇಂದ್ರ ಅವರಿಬ್ಬರೇ ನಾಮಪತ್ರವನ್ನು ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಪುರಸಭೆಯ 23 ಸದಸ್ಯರಲ್ಲಿ 20 ಮಂದಿ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಎಸ್‌. ಮದನ್‌ರಾಜ್, ರೂಪ ಕರಿಯಪ್ಪ ಹಾಗೂ ಮಾದೇವಿ ಗೈರು ಹಾಜರಾಗಿದ್ದರು.

ಚುನಾವಣಾಧಿಕಾರಿಯಾಗಿ ತಹಸಿಲ್ದಾರ್ ಟಿ.ಜಿ.ಸುರೇಶಾಚಾರ್ ಕಾರ್ಯನಿರ್ವಹಿಸಿದರು. ಅವಿರೋಧ ಆಯ್ಕೆ ಪ್ರಕಟಗೊಳ್ಳುತ್ತಿದ್ದಂತೆ ಪುರಸಭೆ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನೂತನ ಅಧ್ಯಕ್ಷೆ ಬಿ.ವಸಂತ ಶ್ರೀಕಂಠ ಮಾತನಾಡಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಸಂಸದ ಸುನಿಲ್ ಬೋಸ್ ಹಾಗೂ ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಪುರಸಭೆ ಸದಸ್ಯರೆಲ್ಲರೂ ತಮ್ಮ ಮೇಲೆ ನಂಬಿಕೆಯಿಟ್ಟು, ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಕುಡಿಯುವ ನೀರು ಮತ್ತು ನೈರ್ಮಲ್ಯವನ್ನು ಕಾಪಾಡಲು ಆದ್ಯತೆ ನೀಡುತ್ತೇನೆ. ಅಭಿವೃದ್ಧಿಗೆ ಆದ್ಯತೆ ಕೊಟ್ಟು ದುಡಿಯುತ್ತೇನೆ ಎಂದು ತಿಳಿಸಿದರು.

ಉಪಾಧ್ಯಕ್ಷೆ ಎಂ.ರಾಜೇಶ್ವರಿ ರಾಘವೇಂದ್ರ ಮಾತನಾಡಿ, ತಮ್ಮ ಅವಿರೋಧ ಆಯ್ಕೆಗೆ ಸಹಕರಿಸಿದ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿ, ಅಧ್ಯಕ್ಷರ ಜೊತೆ ಸಹಕಾರ ನೀಡುವ ಮೂಲಕ ರಸ್ತೆ ವಿದ್ಯುತ್ ಹಾಗೂ ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದರು.

ಪಟ್ಟಣದಲ್ಲಿ ಬಾಕಿ ಉಳಿದಿರುವ ಕಾಮಗಾರಿಗೆ ಕ್ಷೇತ್ರದ ಶಾಸಕರೂ ಆದ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಸಂಸದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಲು ಪ್ರಯತ್ನ ಪಡುವುದಾಗಿ ತಿಳಿಸಿದರು.

ಮಾಜಿ ಅಧ್ಯಕ್ಷರಾದ ಟಿ.ಎಂ.ನಂಜುಂಡಸ್ವಾಮಿ, ಎನ್. ಸೋಮಣ್ಣ, ಸದಸ್ಯರಾದ ಎಂ.ಸಿದ್ದು, ಪ್ರೇಮ, ಎಲ್.ಮಂಜುನಾಥ್, ಅಹಮ್ಮದ್ ಸಯೀದ್, ಬಿ.ಬೇಬಿ, ಸಿ.ಪ್ರಕಾಶ್, ಜಿ.ರೂಪಶ್ರೀ, ನಾಗರಾಜು, ಮಹದೇವಮ್ಮ, ಆರ್.ಅರ್ಜುನ್, ಪಿ.ಶೋಭರಾಣಿ, ಆರ್.ತೇಜಸ್ವಿನಿ, ವಿ.ಮೋಹನ್, ಬಾದಾಮಿ ಮಂಜು, ನಾಗರತ್ನ ಮಾದೇಶ, ಕೆ.ಕಿರಣ್, ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ, ತಾಪಂ ಮಾಜಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಸ್ವಾಮಿ, ಮಾಜಿಸದಸ್ಯ ಎಂ ರಮೇಶ್, ಬಿ. ಮರಯ್ಯ, ಕುರುಬರ ಸಂಘದ ಅಧ್ಯಕ್ಷ ಎಂ.ಎಸ್. ಮಹದೇವಸ್ವಾಮಿ,
ನಿರ್ದೇಶಕ ಹೆಚ್.ಸಿ. ಅರುಣ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕುಷ್ಯ ಭಾಗ್ಯಮ್ಮ, ವಾಟಾಳು ನಾಗೇಶ್, ಮುಖಂಡರಾದ ತಿರುಮಕೂಡಲು ಪುಟ್ಟು, ಆರ್.ಮಹದೇವು, ಕೆ.ಗಣೇಶ್, ಎಂ.ಮಿಥುನ್, ಪಿಎಸಿಸಿಎಸ್ ನಿರ್ದೇಶಕ ಚಿಕ್ಕನಂಜಯ್ಯ, ಸಂತೃಪ್ತಿ ಕುಮಾರ್, ಕನಕ ಪಾಪು ಎಲ್‌ಐಸಿ ಲಿಂಗರಾಜು, ಗಾರೆ ಹುಚ್ಚಯ್ಯ, ಅಶ್ವಥ್, ಅಮಾವಾಸ್ಯೆ ಲಿಂಗರಾಜು, ಆರ್.ರಮೇಶ್, ದೊಡ್ಡಮಾದಯ್ಯ, ಬಾಗಳಿ ಯೋಗೇಶ್, ಏಳುಮಲೈ ಮಂಜು, ಅಕ್ಕೂರು ರಾಜೇಗೌಡ, ಸಂದೇಶ್, ಮುರಳಿ, ವೆಂಕು, ಇನ್ನಿತರರು ಹಾಜರಿದ್ದರು.

ಚಿತ್ರನಟ ಹಾಗೂ ಸದಸ್ಯ ಅರ್ಜುನ್ ರಮೇಶ್ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಶುಭಕೋರಿ ಪಟ್ಟಣದ ಅಭಿವೃದ್ಧಿಗೆ ಉಪಯುಕ್ತ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮ ಆಡಳಿತ ನಡೆಸುವಂತೆ ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

59 mins ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

1 hour ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

1 hour ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

2 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

2 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

2 hours ago