ಓದುಗರ ಪತ್ರ
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕು ವ್ಯಾಪ್ತಿಗೆ ಸೇರಿದ ನುಗು ಜಲಾಶಯದಿಂದ ಹೆಡಿಯಾಲ ಗ್ರಾಮದ ವರೆಗೂ ರಸ್ತೆ ಹಾಳಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗಿದೆ.
ಎಚ್.ಡಿ.ಕೋಟೆ ಹಾಗೂ ಸರಗೂರು ಕಡೆಯಿಂದ ನಂಜನಗೂಡು- ಹುರ-ಹುಲ್ಲಹಳ್ಳಿ- ಚಾಮರಾಜನಗರ ಮತ್ತಿತರ ಊರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ತೀರ ಹದಗೆಟ್ಟಿದೆ. ಬಡಗಲಪುರ, ಹಾದನೂರು, ಬೇಲದಕುಪ್ಪೆ ದೇವಸ್ಥಾನ ಹಾಗೂ ನುಗು ಜಲಾಶಯದ ಕಡೆಗೆ ಪ್ರತಿನಿತ್ಯ ಪ್ರವಾಸಿಗರು ಬರುತ್ತಾರೆ. ಆದರೆ ಈ ರಸ್ತೆಯಲ್ಲಿ ಪ್ರಯಾಣಿಸಬೇಕಾದರೆ ಹರಸಾಹಸಪಡಬೇಕಿದೆ.
ಮಳೆಗಾಲದಲ್ಲಿ ನುಗು ಜಲಾಶಯದ ಬಳಿ ಕೆಸರು ಗದ್ದೆಯಂತಾಗುತ್ತದೆ. ಇಲ್ಲಿ ವಾಹನ ಸವಾರರು ವಾಹನ ಚಾಲನೆ ಮಾಡಲು ಸರ್ಕಸ್ ಮಾಡುವಂತಾಗಿದೆ. ರಾತ್ರಿ ಸಮಯದಲ್ಲಂತೂ ಇಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕು. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು, ನಂಜನಗೂಡು ಹಾಗೂ ಎಚ್.ಡಿ.ಕೋಟೆ ಶಾಸಕರು ಹಾಗೂ ಚಾಮರಾಜನಗರ ಜಿಲ್ಲೆಯ ಸಂಸದರು ಕೂಡಲೆ ರಸ್ತೆ ದುರಸ್ತಿಗೆ ಕ್ರಮವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ.
-ಸಿದ್ದಲಿಂಗೇಗೌಡ. ಹೈರಿಗೆ, ಎಚ್.ಡಿ.ಕೋಟೆ ತಾಲ್ಲೂಕು
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…