ಓದುಗರ ಪತ್ರ
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕು ವ್ಯಾಪ್ತಿಗೆ ಸೇರಿದ ನುಗು ಜಲಾಶಯದಿಂದ ಹೆಡಿಯಾಲ ಗ್ರಾಮದ ವರೆಗೂ ರಸ್ತೆ ಹಾಳಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ವಾಹನ ಸವಾರರಿಗೆ ಬಹಳ ತೊಂದರೆ ಉಂಟಾಗಿದೆ.
ಎಚ್.ಡಿ.ಕೋಟೆ ಹಾಗೂ ಸರಗೂರು ಕಡೆಯಿಂದ ನಂಜನಗೂಡು- ಹುರ-ಹುಲ್ಲಹಳ್ಳಿ- ಚಾಮರಾಜನಗರ ಮತ್ತಿತರ ಊರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ತೀರ ಹದಗೆಟ್ಟಿದೆ. ಬಡಗಲಪುರ, ಹಾದನೂರು, ಬೇಲದಕುಪ್ಪೆ ದೇವಸ್ಥಾನ ಹಾಗೂ ನುಗು ಜಲಾಶಯದ ಕಡೆಗೆ ಪ್ರತಿನಿತ್ಯ ಪ್ರವಾಸಿಗರು ಬರುತ್ತಾರೆ. ಆದರೆ ಈ ರಸ್ತೆಯಲ್ಲಿ ಪ್ರಯಾಣಿಸಬೇಕಾದರೆ ಹರಸಾಹಸಪಡಬೇಕಿದೆ.
ಮಳೆಗಾಲದಲ್ಲಿ ನುಗು ಜಲಾಶಯದ ಬಳಿ ಕೆಸರು ಗದ್ದೆಯಂತಾಗುತ್ತದೆ. ಇಲ್ಲಿ ವಾಹನ ಸವಾರರು ವಾಹನ ಚಾಲನೆ ಮಾಡಲು ಸರ್ಕಸ್ ಮಾಡುವಂತಾಗಿದೆ. ರಾತ್ರಿ ಸಮಯದಲ್ಲಂತೂ ಇಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕು. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು, ನಂಜನಗೂಡು ಹಾಗೂ ಎಚ್.ಡಿ.ಕೋಟೆ ಶಾಸಕರು ಹಾಗೂ ಚಾಮರಾಜನಗರ ಜಿಲ್ಲೆಯ ಸಂಸದರು ಕೂಡಲೆ ರಸ್ತೆ ದುರಸ್ತಿಗೆ ಕ್ರಮವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ.
-ಸಿದ್ದಲಿಂಗೇಗೌಡ. ಹೈರಿಗೆ, ಎಚ್.ಡಿ.ಕೋಟೆ ತಾಲ್ಲೂಕು
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…