Andolana originals

ಮಳೆ ಅನಾಹುತ ತಡೆಯಲು ತಾಲ್ಲೂಕು ಆಡಳಿತ ಸನ್ನದ್ಧ

  • ತಡಿಮಾಲಂಗಿಯಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸಿದ್ಧತೆ
  • ಸೇಂಟ್ ಮೇರಿಸ್ ಶಾಲೆ ರಸ್ತೆ ದುರಸ್ತಿಗೆ ಆಗ್ರಹ

ತಿ. ನರಸೀಪುರ: ಮುಂಗಾರು ಮಳೆಯಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಅನಾಹುತಗಳು ಆಗದಂತೆ ಕ್ರಮ ವಹಿಸಲಾಗಿದೆ.

ತಾಲ್ಲೂಕಿನಲ್ಲಿ ಭಾರೀ ಮಳೆ ಆದರೆ ಮನೆಗಳಿಗೆ ಹಾನಿ, ಬೆಳೆ ಹಾನಿ ಹಾಗೂ ಜಾನುವಾರುಗಳಿಗೆ ತೊಂದರೆ ಯಾಗುವುದನ್ನು ತಪ್ಪಿಸಲು ಗ್ರಾಮಸೇವಕರುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಮಾಹಿತಿ ನೀಡಲಾಗಿದ್ದು ಬೆಳೆ ಹಾನಿಯಾದ ಬಗ್ಗೆ ಗಮನಕ್ಕೆ ತಂದ ಕೂಡಲೇ ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳು ಜಂಟಿಯಾಗಿ ಸರ್ವೆ ನಡೆಸಿ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗುತ್ತದೆ. ಮನೆಗೆ ಹಾನಿಯಾದರೆ ಎಸ್‌ಡಿಎಫ್‌ಆರ್ ಯೋಜನೆಯಡಿ ಪರಿಹಾರ ನೀಡಲಾಗುವುದು. ಮಳೆ ಹಾಗೂ ಭೂಕುಸಿತದಿಂದ ಪ್ರಾಣ ಹಾನಿಯಾದರೆ ೫ ಲಕ್ಷ ರೂ. ಪರಿಹಾರ ನೀಡಲಾಗುವುದು. ಒಟ್ಟಾರೆ ಮಳೆಯಿಂದ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ತಡಿಮಾಲಂಗಿಯಲ್ಲಿ ಎಚ್ಚರಿಕೆ: ಹೆಚ್ಚಾಗಿ ಮಳೆಯಾದರೆ ಕಾವೇರಿ ಹಾಗೂ ಕಪಿಲ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವುದರಿಂದ ತಡಿಮಾಲಂಗಿ ಗ್ರಾಮದಲ್ಲಿ ಅನಾಹುತಗಳು ಆಗುತ್ತವೆ. ಈ ಹಿನ್ನೆಲೆಯಲ್ಲಿ ಗ್ರಾಮದ ಸುತ್ತ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರದಿಂದ ೧ ಕೋಟಿ ರೂ. ಮಂಜೂರಾಗಿದ್ದು, ಲೋಕೋಪಯೋಗಿ ಇಲಾಖೆ ವತಿಯಿಂದ ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ತಹಸಿಲ್ದಾರ್ ಸುರೇಶಾಚಾರ್ ಪತ್ರಿಕೆಗೆ ತಿಳಿಸಿದ್ದಾರೆ.

ಕೆಸರು ಗುಂಡಿಯಾಗುವ ರಸ್ತೆಗಳು: ತಿ. ನರಸೀಪುರದ ಸೇಂಟ್ ಮೇರಿಸ್ ಶಾಲೆ ರಸ್ತೆಯು ಮಳೆ ಬಿದ್ದಾಗ ಕೆಸರುಗದ್ದೆಯಂತಾಗುತ್ತದೆ. ನಂಜನಗೂಡು, ಕೊಳ್ಳೇಗಾಲದ ರಸ್ತೆಗಳು ಹಳ್ಳ ಕೊಳ್ಳಗಳಿಂದ ಕೂಡಿದ್ದು, ಮಳೆಯಾದರೆ ರಸ್ತೆಯಲ್ಲಿ ವಾಹನ ಸವಾರರು ಬೀಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಂಸದ ಸುನಿಲ್ ಬೋಸ್ ಅವರು ಭೂಮಿ ಪೂಜೆ ಮಾಡಿ ತಿಂಗಳುಗಳೇ ಕಳೆದರೂ ಕಾಮಗಾರಿ ಇನ್ನೂ ಆರಂಭವಾಗಿಲ್ಲ.

ಮಳೆಗಾಲ ಆರಂಭವಾಗಿರುವುದರಿಂದ ತಾಲ್ಲೂಕಿನಲ್ಲಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಗ್ರಾಮ ಸಹಾಯಕರುಗಳಿಗೆ ಸೂಚನೆ ನೀಡಲಾಗಿದ್ದು, ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಹಾನಿ ಉಂಟಾದ ಕೂಡಲೇ ಮಾಹಿತಿ ನೀಡುವಂತೆ ಸಲಹೆ ನೀಡಲಾಗಿದೆ. ಹಾನಿ ಉಂಟಾದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಏಳು ದಿನಗಳ ಒಳಗೆ ಪರಿಹಾರ ನೀಡಲಾಗುವುದು. – ಸುರೇಶಾಚಾರ್, ತಹಸಿಲ್ದಾರ್

ಮಳೆಗಾಲ ಆರಂಭವಾಗಿರುವುದರಿಂದ ಮನೆಗಳಲ್ಲಿ ಸಂಗ್ರಹಿಸಿದ ನೀರನ್ನು ಆಶಾ ಕಾರ್ಯಕರ್ತರ ಮೂಲಕ ಪರಿಶೀಲಿಸಿ, ಸೊಳ್ಳೆ, ಕ್ರಿಮಿಕೀಟಗಳು ಕೂರದಂತೆ ಹಾಗೂ ನೀರನ್ನು ಬದಲಾಯಿಸುವಂತೆ ತಿಳಿಸಲಾಗು ತ್ತದೆ. ಬಿಸಿನೀರು ಸೇವನೆ ಮಾಡಲು ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯಿತಿಯ ವರು ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. -ಡಾ. ರವಿಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ

ಪಟ್ಟಣದ ಸೇಂಟ್ ಮೇರಿಸ್ ಶಾಲೆ ರಸ್ತೆಯಲ್ಲಿ ಮಳೆ ಬಂದಾಗ ಶಾಲೆಗೆ ರಜೆ ನೀಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಳೆ ಬಿದ್ದರೆ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗು ವುದು ಅಸಾಧ್ಯ ಎಂಬಂತಾಗಿದೆ. ಹೀಗಿದ್ದರೂ ಪುರಸಭೆಯ ಅಧಿಕಾರಿಗಳು ಗಮಹರಿಸದಿರುವುದು ವಿಷಾದನೀಯ. – ಪರಮೇಶ್, ವಕೀಲರು, ತಿ. ನರಸೀಪುರ

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

4 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

4 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

6 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

6 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

7 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

7 hours ago