Andolana originals

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ

ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ

ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು ಮಹಾ ನಗರಪಾಲಿಕೆಯಲ್ಲಿ ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಂಗ್ರಹಿಸಿದ ತೆರಿಗೆಯು ಹಣಕಾಸಿನ ಬರವನ್ನು ನೀಗಿಸಿದೆ.

ಚುನಾಯಿತ ಜನಪ್ರತಿನಿಧಿಗಳು ಇಲ್ಲದ ಕಾರಣ ೨ ವರ್ಷಗಳಿಂದ ೧೫ನೇ ಹಣಕಾಸು ಆಯೋಗದ ಅನು ದಾನ ಬಿಡುಗಡೆ ಮಾಡದೆ ಬ್ರೇಕ್ ಹಾಕಿದ್ದರಿಂದ ಹಲವು ಸಮಸ್ಯೆಗಳಿಗೆ ಸಿಲುಕಿದ್ದ ನಗರ ಪಾಲಿಕೆಯನ್ನು ಆಸ್ತಿ ಮಾಲೀಕರು ತಮ್ಮ ತೆರಿಗೆ ಪಾವತಿಸುವ ಮೂಲಕ ಸಂಕಷ್ಟದಿಂದ ಪಾರು ಮಾಡಿದ್ದಾರೆ. ಪಾಲಿಕೆ ಆಯುಕ್ತರು, ಉಪ ಆಯುಕ್ತರು ಕೈಗೊಂಡ ಹಲವು ಸುಧಾರಣಾ ಕ್ರಮಗಳು ವರ್ಕ್‌ಔಟ್ ಆಗುವ ಜತೆಗೆ ರಾಜ್ಯ ಸರ್ಕಾರ ಶೇ.೫ರಷ್ಟು ರಿಯಾಯಿತಿಯನ್ನು ಸೆಪ್ಟೆಂಬರ್ ತಿಂಗಳವರೆಗೆ ವಿಸ್ತರಿಸಿದ್ದರಿಂದ ನಿರೀಕ್ಷೆಗೂ ಮೀರಿ ತೆರಿಗೆ ಸಂಗ್ರಹವಾಗಿದೆ

ಕಳೆದ ನಾಲ್ಕು ವರ್ಷಗಳನ್ನು ಗಣನೆಗೆ ತೆಗೆದುಕೊಂಡರೆ ಅಕ್ಟೋಬರ್ ತಿಂಗಳಲ್ಲಿ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಆಗಿದ್ದು, ಡಿಸೆಂಬರ್ ಅಂತ್ಯಕ್ಕೆ ಶೇ.೧೦೦ರಷ್ಟು ಗುರಿ ಸಾಧಿಸುವ ಲೆಕ್ಕಾಚಾರ ಹಾಕಲಾಗಿದೆ. ನಗರಪಾಲಿಕೆಯಲ್ಲಿ ಘೋಷಿತ ಮತ್ತು ಅಘೋಷಿತ ಸೇರಿದಂತೆ ೨.೩೦ ಲಕ್ಷ ಆಸ್ತಿಗಳು ಇದ್ದು, ಇದರಲ್ಲಿ ವಸತಿ-೧,೪೮,೫೮೯, ವಾಣಿಜ್ಯ-೭,೧೮೪, ಖಾಲಿ-೨೩,೨೫೨, ಕೈಗಾರಿಕೆ-೩೨೮ ಆಸ್ತಿಗಳಿಂದ ವರ್ಷಕ್ಕೆ ೧೫೦ರಿಂದ ೨೦೦ ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿತ್ತು. ಆದರೆ, ನಿರೀಕ್ಷೆಯಂತೆ ತೆರಿಗೆ ವಸೂಲಾತಿಯಾಗದ ಕಾರಣ ನಗರಪಾಲಿಕೆಯಲ್ಲಿ ಅಭಿವೃದ್ಧಿಗೆ ದೊಡ್ಡ ಹೊಡೆತ ಬಿದ್ದಿತ್ತು.

ಗುತ್ತಿಗೆದಾರರು ನಿರ್ವಹಿಸಿದ್ದ ಕಾಮಗಾರಿಗಳ ಬಿಲ್ ಪಾವತಿ ಮಾಡಲು ಕೂಡ ಸಾಧ್ಯವಾಗದ ಕಾರಣ ಗುತ್ತಿಗೆದಾರರು ಪ್ರತಿಭಟನೆ ನಡೆಸಿ ಬಾಕಿ ಹಣ ಬಿಡುಗಡೆಗೆ ಒತ್ತಡ ಹೇರಿದ್ದರು. ಇದಲ್ಲದೆ, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ, ಮುಖ್ಯಮಂತ್ರಿಗಳ ನಗರೋತ್ಥಾನದಿಂದ ಅನುದಾನ ಕೂಡ ಬಿಡುಗಡೆ ಮಾಡದ ಕಾರಣ ಮತ್ತಷ್ಟು ಸಮಸ್ಯೆಯಾಗಿತ್ತು. ಹೀಗಾಗಿ, ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ನಗರಪಾಲಿಕೆ ಆಯುಕ್ತರಾಗಿದ್ದಾಗ ತೆರಿಗೆ ಪಾವತಿ ಸರಳೀಕರಣಗೊಳಿಸುವ ಮೂಲಕ ತೆರಿಗೆ ಪಾವತಿದಾರರಿಗೆ ಅನುಕೂಲ ಕಲ್ಪಿಸಿದ್ದರು. ನಂತರ ಬಂದ ಆಯುಕ್ತರೂ ಅದನ್ನೇ ಮುಂದುವರಿಸಿದ್ದರಿಂದಾಗಿ ಕಳೆದ ಮೂರು ವರ್ಷಗಳಲ್ಲಿ ತೆರಿಗೆ ಸಂಗ್ರಹದಲ್ಲಿ ಹೆಚ್ಚಾಗುತ್ತಿರುವುದು ಕಂಡುಬಂದಿದೆ.

” ತೆರಿಗೆ ವಸೂಲಿಗೆ ಕೈಗೊಂಡ ಹಲವು ಕ್ರಮಗಳು, ಸರ್ಕಾರ ಶೇ.೫ರಷ್ಟು ರಿಯಾಯಿತಿಯನ್ನು ಸೆಪ್ಟೆಂಬರ್ ವರೆಗೆ ವಿಸ್ತರಿಸಿದ್ದರಿಂದಾಗಿ ಆಸ್ತಿ ಮಾಲೀಕರು ತೆರಿಗೆಪಾವತಿಸಲು ಅನುಕೂಲವಾಗಿದೆ. ಆಯುಕ್ತರ ಮುತುವರ್ಜಿಯಿಂದ ಇದು ಸಾಧ್ಯವಾಗಿದೆ.”

-ಜಿ.ಎಸ್.ಸೋಮಶೇಖರ್, ಉಪ ಆಯುಕ್ತರು (ಕಂದಾಯ)

ಆಂದೋಲನ ಡೆಸ್ಕ್

Recent Posts

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

25 mins ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

48 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

1 hour ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

2 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

3 hours ago