Andolana originals

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ

ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ

ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು ಮಹಾ ನಗರಪಾಲಿಕೆಯಲ್ಲಿ ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಂಗ್ರಹಿಸಿದ ತೆರಿಗೆಯು ಹಣಕಾಸಿನ ಬರವನ್ನು ನೀಗಿಸಿದೆ.

ಚುನಾಯಿತ ಜನಪ್ರತಿನಿಧಿಗಳು ಇಲ್ಲದ ಕಾರಣ ೨ ವರ್ಷಗಳಿಂದ ೧೫ನೇ ಹಣಕಾಸು ಆಯೋಗದ ಅನು ದಾನ ಬಿಡುಗಡೆ ಮಾಡದೆ ಬ್ರೇಕ್ ಹಾಕಿದ್ದರಿಂದ ಹಲವು ಸಮಸ್ಯೆಗಳಿಗೆ ಸಿಲುಕಿದ್ದ ನಗರ ಪಾಲಿಕೆಯನ್ನು ಆಸ್ತಿ ಮಾಲೀಕರು ತಮ್ಮ ತೆರಿಗೆ ಪಾವತಿಸುವ ಮೂಲಕ ಸಂಕಷ್ಟದಿಂದ ಪಾರು ಮಾಡಿದ್ದಾರೆ. ಪಾಲಿಕೆ ಆಯುಕ್ತರು, ಉಪ ಆಯುಕ್ತರು ಕೈಗೊಂಡ ಹಲವು ಸುಧಾರಣಾ ಕ್ರಮಗಳು ವರ್ಕ್‌ಔಟ್ ಆಗುವ ಜತೆಗೆ ರಾಜ್ಯ ಸರ್ಕಾರ ಶೇ.೫ರಷ್ಟು ರಿಯಾಯಿತಿಯನ್ನು ಸೆಪ್ಟೆಂಬರ್ ತಿಂಗಳವರೆಗೆ ವಿಸ್ತರಿಸಿದ್ದರಿಂದ ನಿರೀಕ್ಷೆಗೂ ಮೀರಿ ತೆರಿಗೆ ಸಂಗ್ರಹವಾಗಿದೆ

ಕಳೆದ ನಾಲ್ಕು ವರ್ಷಗಳನ್ನು ಗಣನೆಗೆ ತೆಗೆದುಕೊಂಡರೆ ಅಕ್ಟೋಬರ್ ತಿಂಗಳಲ್ಲಿ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಆಗಿದ್ದು, ಡಿಸೆಂಬರ್ ಅಂತ್ಯಕ್ಕೆ ಶೇ.೧೦೦ರಷ್ಟು ಗುರಿ ಸಾಧಿಸುವ ಲೆಕ್ಕಾಚಾರ ಹಾಕಲಾಗಿದೆ. ನಗರಪಾಲಿಕೆಯಲ್ಲಿ ಘೋಷಿತ ಮತ್ತು ಅಘೋಷಿತ ಸೇರಿದಂತೆ ೨.೩೦ ಲಕ್ಷ ಆಸ್ತಿಗಳು ಇದ್ದು, ಇದರಲ್ಲಿ ವಸತಿ-೧,೪೮,೫೮೯, ವಾಣಿಜ್ಯ-೭,೧೮೪, ಖಾಲಿ-೨೩,೨೫೨, ಕೈಗಾರಿಕೆ-೩೨೮ ಆಸ್ತಿಗಳಿಂದ ವರ್ಷಕ್ಕೆ ೧೫೦ರಿಂದ ೨೦೦ ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿತ್ತು. ಆದರೆ, ನಿರೀಕ್ಷೆಯಂತೆ ತೆರಿಗೆ ವಸೂಲಾತಿಯಾಗದ ಕಾರಣ ನಗರಪಾಲಿಕೆಯಲ್ಲಿ ಅಭಿವೃದ್ಧಿಗೆ ದೊಡ್ಡ ಹೊಡೆತ ಬಿದ್ದಿತ್ತು.

ಗುತ್ತಿಗೆದಾರರು ನಿರ್ವಹಿಸಿದ್ದ ಕಾಮಗಾರಿಗಳ ಬಿಲ್ ಪಾವತಿ ಮಾಡಲು ಕೂಡ ಸಾಧ್ಯವಾಗದ ಕಾರಣ ಗುತ್ತಿಗೆದಾರರು ಪ್ರತಿಭಟನೆ ನಡೆಸಿ ಬಾಕಿ ಹಣ ಬಿಡುಗಡೆಗೆ ಒತ್ತಡ ಹೇರಿದ್ದರು. ಇದಲ್ಲದೆ, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ, ಮುಖ್ಯಮಂತ್ರಿಗಳ ನಗರೋತ್ಥಾನದಿಂದ ಅನುದಾನ ಕೂಡ ಬಿಡುಗಡೆ ಮಾಡದ ಕಾರಣ ಮತ್ತಷ್ಟು ಸಮಸ್ಯೆಯಾಗಿತ್ತು. ಹೀಗಾಗಿ, ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ನಗರಪಾಲಿಕೆ ಆಯುಕ್ತರಾಗಿದ್ದಾಗ ತೆರಿಗೆ ಪಾವತಿ ಸರಳೀಕರಣಗೊಳಿಸುವ ಮೂಲಕ ತೆರಿಗೆ ಪಾವತಿದಾರರಿಗೆ ಅನುಕೂಲ ಕಲ್ಪಿಸಿದ್ದರು. ನಂತರ ಬಂದ ಆಯುಕ್ತರೂ ಅದನ್ನೇ ಮುಂದುವರಿಸಿದ್ದರಿಂದಾಗಿ ಕಳೆದ ಮೂರು ವರ್ಷಗಳಲ್ಲಿ ತೆರಿಗೆ ಸಂಗ್ರಹದಲ್ಲಿ ಹೆಚ್ಚಾಗುತ್ತಿರುವುದು ಕಂಡುಬಂದಿದೆ.

” ತೆರಿಗೆ ವಸೂಲಿಗೆ ಕೈಗೊಂಡ ಹಲವು ಕ್ರಮಗಳು, ಸರ್ಕಾರ ಶೇ.೫ರಷ್ಟು ರಿಯಾಯಿತಿಯನ್ನು ಸೆಪ್ಟೆಂಬರ್ ವರೆಗೆ ವಿಸ್ತರಿಸಿದ್ದರಿಂದಾಗಿ ಆಸ್ತಿ ಮಾಲೀಕರು ತೆರಿಗೆಪಾವತಿಸಲು ಅನುಕೂಲವಾಗಿದೆ. ಆಯುಕ್ತರ ಮುತುವರ್ಜಿಯಿಂದ ಇದು ಸಾಧ್ಯವಾಗಿದೆ.”

-ಜಿ.ಎಸ್.ಸೋಮಶೇಖರ್, ಉಪ ಆಯುಕ್ತರು (ಕಂದಾಯ)

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

9 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

12 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

14 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

14 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

14 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

14 hours ago