Andolana originals

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ

ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ

ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು ಮಹಾ ನಗರಪಾಲಿಕೆಯಲ್ಲಿ ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಂಗ್ರಹಿಸಿದ ತೆರಿಗೆಯು ಹಣಕಾಸಿನ ಬರವನ್ನು ನೀಗಿಸಿದೆ.

ಚುನಾಯಿತ ಜನಪ್ರತಿನಿಧಿಗಳು ಇಲ್ಲದ ಕಾರಣ ೨ ವರ್ಷಗಳಿಂದ ೧೫ನೇ ಹಣಕಾಸು ಆಯೋಗದ ಅನು ದಾನ ಬಿಡುಗಡೆ ಮಾಡದೆ ಬ್ರೇಕ್ ಹಾಕಿದ್ದರಿಂದ ಹಲವು ಸಮಸ್ಯೆಗಳಿಗೆ ಸಿಲುಕಿದ್ದ ನಗರ ಪಾಲಿಕೆಯನ್ನು ಆಸ್ತಿ ಮಾಲೀಕರು ತಮ್ಮ ತೆರಿಗೆ ಪಾವತಿಸುವ ಮೂಲಕ ಸಂಕಷ್ಟದಿಂದ ಪಾರು ಮಾಡಿದ್ದಾರೆ. ಪಾಲಿಕೆ ಆಯುಕ್ತರು, ಉಪ ಆಯುಕ್ತರು ಕೈಗೊಂಡ ಹಲವು ಸುಧಾರಣಾ ಕ್ರಮಗಳು ವರ್ಕ್‌ಔಟ್ ಆಗುವ ಜತೆಗೆ ರಾಜ್ಯ ಸರ್ಕಾರ ಶೇ.೫ರಷ್ಟು ರಿಯಾಯಿತಿಯನ್ನು ಸೆಪ್ಟೆಂಬರ್ ತಿಂಗಳವರೆಗೆ ವಿಸ್ತರಿಸಿದ್ದರಿಂದ ನಿರೀಕ್ಷೆಗೂ ಮೀರಿ ತೆರಿಗೆ ಸಂಗ್ರಹವಾಗಿದೆ

ಕಳೆದ ನಾಲ್ಕು ವರ್ಷಗಳನ್ನು ಗಣನೆಗೆ ತೆಗೆದುಕೊಂಡರೆ ಅಕ್ಟೋಬರ್ ತಿಂಗಳಲ್ಲಿ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಆಗಿದ್ದು, ಡಿಸೆಂಬರ್ ಅಂತ್ಯಕ್ಕೆ ಶೇ.೧೦೦ರಷ್ಟು ಗುರಿ ಸಾಧಿಸುವ ಲೆಕ್ಕಾಚಾರ ಹಾಕಲಾಗಿದೆ. ನಗರಪಾಲಿಕೆಯಲ್ಲಿ ಘೋಷಿತ ಮತ್ತು ಅಘೋಷಿತ ಸೇರಿದಂತೆ ೨.೩೦ ಲಕ್ಷ ಆಸ್ತಿಗಳು ಇದ್ದು, ಇದರಲ್ಲಿ ವಸತಿ-೧,೪೮,೫೮೯, ವಾಣಿಜ್ಯ-೭,೧೮೪, ಖಾಲಿ-೨೩,೨೫೨, ಕೈಗಾರಿಕೆ-೩೨೮ ಆಸ್ತಿಗಳಿಂದ ವರ್ಷಕ್ಕೆ ೧೫೦ರಿಂದ ೨೦೦ ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿತ್ತು. ಆದರೆ, ನಿರೀಕ್ಷೆಯಂತೆ ತೆರಿಗೆ ವಸೂಲಾತಿಯಾಗದ ಕಾರಣ ನಗರಪಾಲಿಕೆಯಲ್ಲಿ ಅಭಿವೃದ್ಧಿಗೆ ದೊಡ್ಡ ಹೊಡೆತ ಬಿದ್ದಿತ್ತು.

ಗುತ್ತಿಗೆದಾರರು ನಿರ್ವಹಿಸಿದ್ದ ಕಾಮಗಾರಿಗಳ ಬಿಲ್ ಪಾವತಿ ಮಾಡಲು ಕೂಡ ಸಾಧ್ಯವಾಗದ ಕಾರಣ ಗುತ್ತಿಗೆದಾರರು ಪ್ರತಿಭಟನೆ ನಡೆಸಿ ಬಾಕಿ ಹಣ ಬಿಡುಗಡೆಗೆ ಒತ್ತಡ ಹೇರಿದ್ದರು. ಇದಲ್ಲದೆ, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ, ಮುಖ್ಯಮಂತ್ರಿಗಳ ನಗರೋತ್ಥಾನದಿಂದ ಅನುದಾನ ಕೂಡ ಬಿಡುಗಡೆ ಮಾಡದ ಕಾರಣ ಮತ್ತಷ್ಟು ಸಮಸ್ಯೆಯಾಗಿತ್ತು. ಹೀಗಾಗಿ, ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ನಗರಪಾಲಿಕೆ ಆಯುಕ್ತರಾಗಿದ್ದಾಗ ತೆರಿಗೆ ಪಾವತಿ ಸರಳೀಕರಣಗೊಳಿಸುವ ಮೂಲಕ ತೆರಿಗೆ ಪಾವತಿದಾರರಿಗೆ ಅನುಕೂಲ ಕಲ್ಪಿಸಿದ್ದರು. ನಂತರ ಬಂದ ಆಯುಕ್ತರೂ ಅದನ್ನೇ ಮುಂದುವರಿಸಿದ್ದರಿಂದಾಗಿ ಕಳೆದ ಮೂರು ವರ್ಷಗಳಲ್ಲಿ ತೆರಿಗೆ ಸಂಗ್ರಹದಲ್ಲಿ ಹೆಚ್ಚಾಗುತ್ತಿರುವುದು ಕಂಡುಬಂದಿದೆ.

” ತೆರಿಗೆ ವಸೂಲಿಗೆ ಕೈಗೊಂಡ ಹಲವು ಕ್ರಮಗಳು, ಸರ್ಕಾರ ಶೇ.೫ರಷ್ಟು ರಿಯಾಯಿತಿಯನ್ನು ಸೆಪ್ಟೆಂಬರ್ ವರೆಗೆ ವಿಸ್ತರಿಸಿದ್ದರಿಂದಾಗಿ ಆಸ್ತಿ ಮಾಲೀಕರು ತೆರಿಗೆಪಾವತಿಸಲು ಅನುಕೂಲವಾಗಿದೆ. ಆಯುಕ್ತರ ಮುತುವರ್ಜಿಯಿಂದ ಇದು ಸಾಧ್ಯವಾಗಿದೆ.”

-ಜಿ.ಎಸ್.ಸೋಮಶೇಖರ್, ಉಪ ಆಯುಕ್ತರು (ಕಂದಾಯ)

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

4 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

12 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

12 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

12 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

12 hours ago