ಸುತ್ತೂರು ನಂಜುಂಡನಾಯಕ
ಸುತ್ತೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ತಾಯಮ್ಮನವರು ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಬಂದ ೩-೪ ತಿಂಗಳ ಹಣವನ್ನು ಕೂಡಿಟ್ಟುಕೊಂಡು ಮೊದಲಿಗೆ ಎರಡು ಮೇಕೆಗಳನ್ನು ಖರೀದಿಸಿ, ನಂತರ ಅದರಿಂದ ಬಂದ ಲಾಭದಲ್ಲಿ ಮತ್ತೆ ೨ ಮೇಕೆ ಗಳನ್ನು ಖರೀದಿಸಿದೆ. ಅವುಗಳು ಮರಿ ಹಾಕಿ ೬ರಿಂದ ೮ ಮೇಕೆಗಳಾದ ಬಳಿಕ ಕೆಲವನ್ನು ಬೇರೆಯವರಿಗೆ ಮಾರಾಟ ಮಾಡಿ ಲಾಭ ಗಳಿಸಿದೆ.
ಹೀಗೆ ಬಂದ ಹಣವನ್ನು ನಾನು ಜೀವನೋಪಾಯಕ್ಕೆ ಬಳಸಿದ್ದೇನೆ. ಮೊದಲು ಬಂದ ೨ ಸಾವಿರ ರೂ. ಗಳನ್ನು ಕೂಡಿಟ್ಟುಕೊಂಡು ಮತ್ತೆ ೩ ತಿಂಗಳ ಹಣವನ್ನು ಸೇರಿಸಿ ಮೇಕೆಗಳನ್ನು ಖರೀದಿಸಿ ಅವುಗಳ ಮೂಲಕ ಜೀವನ ಕಟ್ಟಿಕೊಂಡಿದ್ದೇನೆ. ನನ್ನ ಮೊಮ್ಮಕ್ಕಳನ್ನು ಓದಿಸಲು ಈ ಹಣವನ್ನೇ ಬಳಸಿ ಕೊಂಡಿದ್ದೇನೆ.
ನನ್ನಂತಹ ಅನೇಕ ಬಡವರು ಬದುಕಲು ಸಿದ್ದರಾಮಯ್ಯ ಅವರು ಜಾರಿಗೊಳಿಸಿರುವ ಗೃಹ ಲಕ್ಷ್ಮಿ ಯೋಜನೆ ನೆರವಾಗುತ್ತಿದೆ ಎಂದು ಸುತ್ತೂರು ತಾಯಮ್ಮ ತಿಳಿಸಿದರು.
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…
ಮೈಸೂರು : ಸಾಂಸ್ಕೃತಿಕ ನಗರಿಯ ಅರಮನೆಗೆ ಡಿ.20ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳ…