Andolana originals

ಗೃಹಲಕ್ಷ್ಮೀ ಹಣದಿಂದ ಬದುಕು ಕಟ್ಟಿಕೊಂಡ ತಾಯಮ್ಮ

ಸುತ್ತೂರು ನಂಜುಂಡನಾಯಕ

ಸುತ್ತೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ತಾಯಮ್ಮನವರು ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಬಂದ ೩-೪ ತಿಂಗಳ ಹಣವನ್ನು ಕೂಡಿಟ್ಟುಕೊಂಡು ಮೊದಲಿಗೆ ಎರಡು ಮೇಕೆಗಳನ್ನು ಖರೀದಿಸಿ, ನಂತರ ಅದರಿಂದ ಬಂದ ಲಾಭದಲ್ಲಿ ಮತ್ತೆ ೨ ಮೇಕೆ ಗಳನ್ನು ಖರೀದಿಸಿದೆ. ಅವುಗಳು ಮರಿ ಹಾಕಿ ೬ರಿಂದ ೮ ಮೇಕೆಗಳಾದ ಬಳಿಕ ಕೆಲವನ್ನು ಬೇರೆಯವರಿಗೆ ಮಾರಾಟ ಮಾಡಿ ಲಾಭ ಗಳಿಸಿದೆ.

ಹೀಗೆ ಬಂದ ಹಣವನ್ನು ನಾನು ಜೀವನೋಪಾಯಕ್ಕೆ ಬಳಸಿದ್ದೇನೆ. ಮೊದಲು ಬಂದ ೨ ಸಾವಿರ ರೂ. ಗಳನ್ನು ಕೂಡಿಟ್ಟುಕೊಂಡು ಮತ್ತೆ ೩ ತಿಂಗಳ ಹಣವನ್ನು ಸೇರಿಸಿ ಮೇಕೆಗಳನ್ನು ಖರೀದಿಸಿ ಅವುಗಳ ಮೂಲಕ ಜೀವನ ಕಟ್ಟಿಕೊಂಡಿದ್ದೇನೆ. ನನ್ನ ಮೊಮ್ಮಕ್ಕಳನ್ನು ಓದಿಸಲು ಈ ಹಣವನ್ನೇ ಬಳಸಿ ಕೊಂಡಿದ್ದೇನೆ.

ನನ್ನಂತಹ ಅನೇಕ ಬಡವರು ಬದುಕಲು ಸಿದ್ದರಾಮಯ್ಯ ಅವರು ಜಾರಿಗೊಳಿಸಿರುವ ಗೃಹ ಲಕ್ಷ್ಮಿ ಯೋಜನೆ ನೆರವಾಗುತ್ತಿದೆ ಎಂದು ಸುತ್ತೂರು ತಾಯಮ್ಮ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

9 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

9 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

10 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

12 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

15 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

15 hours ago