Andolana originals

ಗೃಹಲಕ್ಷ್ಮೀ ಹಣದಿಂದ ಬದುಕು ಕಟ್ಟಿಕೊಂಡ ತಾಯಮ್ಮ

ಸುತ್ತೂರು ನಂಜುಂಡನಾಯಕ

ಸುತ್ತೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ತಾಯಮ್ಮನವರು ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ಬಂದ ೩-೪ ತಿಂಗಳ ಹಣವನ್ನು ಕೂಡಿಟ್ಟುಕೊಂಡು ಮೊದಲಿಗೆ ಎರಡು ಮೇಕೆಗಳನ್ನು ಖರೀದಿಸಿ, ನಂತರ ಅದರಿಂದ ಬಂದ ಲಾಭದಲ್ಲಿ ಮತ್ತೆ ೨ ಮೇಕೆ ಗಳನ್ನು ಖರೀದಿಸಿದೆ. ಅವುಗಳು ಮರಿ ಹಾಕಿ ೬ರಿಂದ ೮ ಮೇಕೆಗಳಾದ ಬಳಿಕ ಕೆಲವನ್ನು ಬೇರೆಯವರಿಗೆ ಮಾರಾಟ ಮಾಡಿ ಲಾಭ ಗಳಿಸಿದೆ.

ಹೀಗೆ ಬಂದ ಹಣವನ್ನು ನಾನು ಜೀವನೋಪಾಯಕ್ಕೆ ಬಳಸಿದ್ದೇನೆ. ಮೊದಲು ಬಂದ ೨ ಸಾವಿರ ರೂ. ಗಳನ್ನು ಕೂಡಿಟ್ಟುಕೊಂಡು ಮತ್ತೆ ೩ ತಿಂಗಳ ಹಣವನ್ನು ಸೇರಿಸಿ ಮೇಕೆಗಳನ್ನು ಖರೀದಿಸಿ ಅವುಗಳ ಮೂಲಕ ಜೀವನ ಕಟ್ಟಿಕೊಂಡಿದ್ದೇನೆ. ನನ್ನ ಮೊಮ್ಮಕ್ಕಳನ್ನು ಓದಿಸಲು ಈ ಹಣವನ್ನೇ ಬಳಸಿ ಕೊಂಡಿದ್ದೇನೆ.

ನನ್ನಂತಹ ಅನೇಕ ಬಡವರು ಬದುಕಲು ಸಿದ್ದರಾಮಯ್ಯ ಅವರು ಜಾರಿಗೊಳಿಸಿರುವ ಗೃಹ ಲಕ್ಷ್ಮಿ ಯೋಜನೆ ನೆರವಾಗುತ್ತಿದೆ ಎಂದು ಸುತ್ತೂರು ತಾಯಮ್ಮ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

4 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

5 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

6 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

7 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

7 hours ago