ಸುತ್ತೂರು ನಂಜುಂಡನಾಯಕ
ಸುತ್ತೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ತಾಯಮ್ಮನವರು ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಬಂದ ೩-೪ ತಿಂಗಳ ಹಣವನ್ನು ಕೂಡಿಟ್ಟುಕೊಂಡು ಮೊದಲಿಗೆ ಎರಡು ಮೇಕೆಗಳನ್ನು ಖರೀದಿಸಿ, ನಂತರ ಅದರಿಂದ ಬಂದ ಲಾಭದಲ್ಲಿ ಮತ್ತೆ ೨ ಮೇಕೆ ಗಳನ್ನು ಖರೀದಿಸಿದೆ. ಅವುಗಳು ಮರಿ ಹಾಕಿ ೬ರಿಂದ ೮ ಮೇಕೆಗಳಾದ ಬಳಿಕ ಕೆಲವನ್ನು ಬೇರೆಯವರಿಗೆ ಮಾರಾಟ ಮಾಡಿ ಲಾಭ ಗಳಿಸಿದೆ.
ಹೀಗೆ ಬಂದ ಹಣವನ್ನು ನಾನು ಜೀವನೋಪಾಯಕ್ಕೆ ಬಳಸಿದ್ದೇನೆ. ಮೊದಲು ಬಂದ ೨ ಸಾವಿರ ರೂ. ಗಳನ್ನು ಕೂಡಿಟ್ಟುಕೊಂಡು ಮತ್ತೆ ೩ ತಿಂಗಳ ಹಣವನ್ನು ಸೇರಿಸಿ ಮೇಕೆಗಳನ್ನು ಖರೀದಿಸಿ ಅವುಗಳ ಮೂಲಕ ಜೀವನ ಕಟ್ಟಿಕೊಂಡಿದ್ದೇನೆ. ನನ್ನ ಮೊಮ್ಮಕ್ಕಳನ್ನು ಓದಿಸಲು ಈ ಹಣವನ್ನೇ ಬಳಸಿ ಕೊಂಡಿದ್ದೇನೆ.
ನನ್ನಂತಹ ಅನೇಕ ಬಡವರು ಬದುಕಲು ಸಿದ್ದರಾಮಯ್ಯ ಅವರು ಜಾರಿಗೊಳಿಸಿರುವ ಗೃಹ ಲಕ್ಷ್ಮಿ ಯೋಜನೆ ನೆರವಾಗುತ್ತಿದೆ ಎಂದು ಸುತ್ತೂರು ತಾಯಮ್ಮ ತಿಳಿಸಿದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…