ಸುತ್ತೂರು ನಂಜುಂಡನಾಯಕ
ಸುತ್ತೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ತಾಯಮ್ಮನವರು ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಬಂದ ೩-೪ ತಿಂಗಳ ಹಣವನ್ನು ಕೂಡಿಟ್ಟುಕೊಂಡು ಮೊದಲಿಗೆ ಎರಡು ಮೇಕೆಗಳನ್ನು ಖರೀದಿಸಿ, ನಂತರ ಅದರಿಂದ ಬಂದ ಲಾಭದಲ್ಲಿ ಮತ್ತೆ ೨ ಮೇಕೆ ಗಳನ್ನು ಖರೀದಿಸಿದೆ. ಅವುಗಳು ಮರಿ ಹಾಕಿ ೬ರಿಂದ ೮ ಮೇಕೆಗಳಾದ ಬಳಿಕ ಕೆಲವನ್ನು ಬೇರೆಯವರಿಗೆ ಮಾರಾಟ ಮಾಡಿ ಲಾಭ ಗಳಿಸಿದೆ.
ಹೀಗೆ ಬಂದ ಹಣವನ್ನು ನಾನು ಜೀವನೋಪಾಯಕ್ಕೆ ಬಳಸಿದ್ದೇನೆ. ಮೊದಲು ಬಂದ ೨ ಸಾವಿರ ರೂ. ಗಳನ್ನು ಕೂಡಿಟ್ಟುಕೊಂಡು ಮತ್ತೆ ೩ ತಿಂಗಳ ಹಣವನ್ನು ಸೇರಿಸಿ ಮೇಕೆಗಳನ್ನು ಖರೀದಿಸಿ ಅವುಗಳ ಮೂಲಕ ಜೀವನ ಕಟ್ಟಿಕೊಂಡಿದ್ದೇನೆ. ನನ್ನ ಮೊಮ್ಮಕ್ಕಳನ್ನು ಓದಿಸಲು ಈ ಹಣವನ್ನೇ ಬಳಸಿ ಕೊಂಡಿದ್ದೇನೆ.
ನನ್ನಂತಹ ಅನೇಕ ಬಡವರು ಬದುಕಲು ಸಿದ್ದರಾಮಯ್ಯ ಅವರು ಜಾರಿಗೊಳಿಸಿರುವ ಗೃಹ ಲಕ್ಷ್ಮಿ ಯೋಜನೆ ನೆರವಾಗುತ್ತಿದೆ ಎಂದು ಸುತ್ತೂರು ತಾಯಮ್ಮ ತಿಳಿಸಿದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…