Andolana originals

ಮಕ್ಕಳನ್ನು ಅಪಾಯಕ್ಕೆ ತಳ್ಳುತ್ತಿರುವ ಶಿಕ್ಷಕರು !

ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ಸಂಪ್‌ನಿಂದ ಮಕ್ಕಳಿಂದಲೇ ನೀರೆತ್ತುವ ಕಾಯಕ

ಶ್ರೀಧರ್ ಆರ್. ಭಟ್

ವರುಣ: ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ೧೦ ಅಡಿ ಆಳದ ಸಂಪಿನಿಂದ ವಿದ್ಯಾರ್ಥಿಗಳು ತಲೆ ಬಗ್ಗಿಸಿ ನೀರೆತ್ತುವ ಕೆಲಸ ಮಾಡುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಶಾಲೆಯಲ್ಲಿ ಮಕ್ಕಳು ಸಂಪಿನೊಳಗೆ ತಲೆ ಸಹಿತ ನಡು ಬಗ್ಗಿಸಿ ನೀರು ಎತ್ತುವ ಕೆಲಸವನ್ನು ಪ್ರತಿನಿತ್ಯ ಮಾಡುತ್ತಿದ್ದಾರೆ.

೧೦ ಅಡಿ ಆಳ, ಅಷ್ಟೇ ಅಗಲದ ನೀರು ತುಂಬಿರುವ ಸಂಪಿನಿಂದ ವಿದ್ಯಾರ್ಥಿಗಳೇ ಕೊಡ ಹಿಡಿದು ಸಂಪಿನೊಳಗೆ ಬಗ್ಗಿ ನೀರೆತ್ತಿ ಕೊಟ್ಟು ಬಿಸಿ ಯೂಟ ಪಡೆಯಬೇಕಾದ ಪರಿಪಾಠ ಬೆಳೆದು ಬಂದಿದೆ. ಬಿಸಿಯೂಟ ಬೇಕು ಎಂದಾದರೆ ನೀರು ಬೇಕೇ ಬೇಕು. ಹಾಗಾಗಿ ಇಲ್ಲಿ ಮಕ್ಕಳೇ ಬಿಸಿಯೂಟಕ್ಕೆ ಸಂಪಿನಿಂದ ನೀರು ಎತ್ತಬೇಕಾದ ಅಪಾಯಕಾರಿ ಕೆಲಸ ಮಾಡಬೇಕಿದೆ.  ಇಲ್ಲಿ ನಲ್ಲಿ ಅಳವಡಿಸದೇ ಇರುವುದರಿಂದ ಸಂಪನ್ನೇ ಅವಲಂಬಿಸಬೇಕಿದೆ.

ಬಗ್ಗಿ ಸಂಪಿನಿಂದ ನೀರು ಎತ್ತುವಾಗ ಸ್ವಲ್ಪ ಎಚ್ಚರ ತಪ್ಪಿದರೂ ಆ ವಿದ್ಯಾರ್ಥಿ ತಲೆ ಕೆಳಗಾಗಿ ಸಂಪಿನೊಳಗೆ ಬಿದ್ದು ನೀರಿನಲ್ಲಿ ಮುಳುಗುವುದು ಖಚಿತ. ಹಾಗಾಗಿ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಈ ಕೆಲಸ ಮಾಡಿಸುವುದು ನಿಲ್ಲಬೇಕು ಎಂಬುದು ಸಾರ್ವಜನಿಕರು ಹಾಗೂ ಪೋಷಕರ ಆಗ್ರಹವಾಗಿದೆ.

ಮಕ್ಕಳಿಂದ ಶಾಲೆಯಲ್ಲಿ ಕೆಲಸ ಮಾಡಿಸುವಂತಿಲ್ಲ. ಹಾಗಿದ್ದೂ ಇಂಥ ಅಪಾಯಕಾರಿ ಕೆಲಸ ಮಾಡಿಸುತ್ತಿರುವುದು ಅಪರಾಧವಾಗಿದ್ದು, ನೀರು ಎತ್ತಿಕೊಳ್ಳುವುದು ಅಡುಗೆ ಸಿಬ್ಬಂದಿಯ ಕೆಲಸವಾಗಿದ್ದು ಅದನ್ನು ಮಕ್ಕಳಿಂದ ಮಾಡಿಸುತ್ತಿರುವುದರ ಕುರಿತಂತೆ ಇಂದೇ ವರದಿ ನೀಡಲು ಬಿಆರ್‌ಪಿಯವರನ್ನು ಬಿಳಿಗೆರೆ ಶಾಲೆಗೆ ಕಳಿಸುತ್ತಿದ್ದೇನೆ. -ಮಹೇಶ್, ಬಿಇಒ, ನಂಜನಗೂಡು ತಾಲ್ಲೂಕು

 

ಆಂದೋಲನ ಡೆಸ್ಕ್

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

6 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

6 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

7 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

7 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

7 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

7 hours ago