ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ಸಂಪ್ನಿಂದ ಮಕ್ಕಳಿಂದಲೇ ನೀರೆತ್ತುವ ಕಾಯಕ
ಶ್ರೀಧರ್ ಆರ್. ಭಟ್
ವರುಣ: ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ೧೦ ಅಡಿ ಆಳದ ಸಂಪಿನಿಂದ ವಿದ್ಯಾರ್ಥಿಗಳು ತಲೆ ಬಗ್ಗಿಸಿ ನೀರೆತ್ತುವ ಕೆಲಸ ಮಾಡುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಶಾಲೆಯಲ್ಲಿ ಮಕ್ಕಳು ಸಂಪಿನೊಳಗೆ ತಲೆ ಸಹಿತ ನಡು ಬಗ್ಗಿಸಿ ನೀರು ಎತ್ತುವ ಕೆಲಸವನ್ನು ಪ್ರತಿನಿತ್ಯ ಮಾಡುತ್ತಿದ್ದಾರೆ.
೧೦ ಅಡಿ ಆಳ, ಅಷ್ಟೇ ಅಗಲದ ನೀರು ತುಂಬಿರುವ ಸಂಪಿನಿಂದ ವಿದ್ಯಾರ್ಥಿಗಳೇ ಕೊಡ ಹಿಡಿದು ಸಂಪಿನೊಳಗೆ ಬಗ್ಗಿ ನೀರೆತ್ತಿ ಕೊಟ್ಟು ಬಿಸಿ ಯೂಟ ಪಡೆಯಬೇಕಾದ ಪರಿಪಾಠ ಬೆಳೆದು ಬಂದಿದೆ. ಬಿಸಿಯೂಟ ಬೇಕು ಎಂದಾದರೆ ನೀರು ಬೇಕೇ ಬೇಕು. ಹಾಗಾಗಿ ಇಲ್ಲಿ ಮಕ್ಕಳೇ ಬಿಸಿಯೂಟಕ್ಕೆ ಸಂಪಿನಿಂದ ನೀರು ಎತ್ತಬೇಕಾದ ಅಪಾಯಕಾರಿ ಕೆಲಸ ಮಾಡಬೇಕಿದೆ. ಇಲ್ಲಿ ನಲ್ಲಿ ಅಳವಡಿಸದೇ ಇರುವುದರಿಂದ ಸಂಪನ್ನೇ ಅವಲಂಬಿಸಬೇಕಿದೆ.
ಬಗ್ಗಿ ಸಂಪಿನಿಂದ ನೀರು ಎತ್ತುವಾಗ ಸ್ವಲ್ಪ ಎಚ್ಚರ ತಪ್ಪಿದರೂ ಆ ವಿದ್ಯಾರ್ಥಿ ತಲೆ ಕೆಳಗಾಗಿ ಸಂಪಿನೊಳಗೆ ಬಿದ್ದು ನೀರಿನಲ್ಲಿ ಮುಳುಗುವುದು ಖಚಿತ. ಹಾಗಾಗಿ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಈ ಕೆಲಸ ಮಾಡಿಸುವುದು ನಿಲ್ಲಬೇಕು ಎಂಬುದು ಸಾರ್ವಜನಿಕರು ಹಾಗೂ ಪೋಷಕರ ಆಗ್ರಹವಾಗಿದೆ.
ಮಕ್ಕಳಿಂದ ಶಾಲೆಯಲ್ಲಿ ಕೆಲಸ ಮಾಡಿಸುವಂತಿಲ್ಲ. ಹಾಗಿದ್ದೂ ಇಂಥ ಅಪಾಯಕಾರಿ ಕೆಲಸ ಮಾಡಿಸುತ್ತಿರುವುದು ಅಪರಾಧವಾಗಿದ್ದು, ನೀರು ಎತ್ತಿಕೊಳ್ಳುವುದು ಅಡುಗೆ ಸಿಬ್ಬಂದಿಯ ಕೆಲಸವಾಗಿದ್ದು ಅದನ್ನು ಮಕ್ಕಳಿಂದ ಮಾಡಿಸುತ್ತಿರುವುದರ ಕುರಿತಂತೆ ಇಂದೇ ವರದಿ ನೀಡಲು ಬಿಆರ್ಪಿಯವರನ್ನು ಬಿಳಿಗೆರೆ ಶಾಲೆಗೆ ಕಳಿಸುತ್ತಿದ್ದೇನೆ. -ಮಹೇಶ್, ಬಿಇಒ, ನಂಜನಗೂಡು ತಾಲ್ಲೂಕು
ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ತಮ್ಮ ಗೆಲುವಿನ…
ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…