ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ಸಂಪ್ನಿಂದ ಮಕ್ಕಳಿಂದಲೇ ನೀರೆತ್ತುವ ಕಾಯಕ
ಶ್ರೀಧರ್ ಆರ್. ಭಟ್
ವರುಣ: ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ೧೦ ಅಡಿ ಆಳದ ಸಂಪಿನಿಂದ ವಿದ್ಯಾರ್ಥಿಗಳು ತಲೆ ಬಗ್ಗಿಸಿ ನೀರೆತ್ತುವ ಕೆಲಸ ಮಾಡುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಳಿಗೆರೆ ಶಾಲೆಯಲ್ಲಿ ಮಕ್ಕಳು ಸಂಪಿನೊಳಗೆ ತಲೆ ಸಹಿತ ನಡು ಬಗ್ಗಿಸಿ ನೀರು ಎತ್ತುವ ಕೆಲಸವನ್ನು ಪ್ರತಿನಿತ್ಯ ಮಾಡುತ್ತಿದ್ದಾರೆ.
೧೦ ಅಡಿ ಆಳ, ಅಷ್ಟೇ ಅಗಲದ ನೀರು ತುಂಬಿರುವ ಸಂಪಿನಿಂದ ವಿದ್ಯಾರ್ಥಿಗಳೇ ಕೊಡ ಹಿಡಿದು ಸಂಪಿನೊಳಗೆ ಬಗ್ಗಿ ನೀರೆತ್ತಿ ಕೊಟ್ಟು ಬಿಸಿ ಯೂಟ ಪಡೆಯಬೇಕಾದ ಪರಿಪಾಠ ಬೆಳೆದು ಬಂದಿದೆ. ಬಿಸಿಯೂಟ ಬೇಕು ಎಂದಾದರೆ ನೀರು ಬೇಕೇ ಬೇಕು. ಹಾಗಾಗಿ ಇಲ್ಲಿ ಮಕ್ಕಳೇ ಬಿಸಿಯೂಟಕ್ಕೆ ಸಂಪಿನಿಂದ ನೀರು ಎತ್ತಬೇಕಾದ ಅಪಾಯಕಾರಿ ಕೆಲಸ ಮಾಡಬೇಕಿದೆ. ಇಲ್ಲಿ ನಲ್ಲಿ ಅಳವಡಿಸದೇ ಇರುವುದರಿಂದ ಸಂಪನ್ನೇ ಅವಲಂಬಿಸಬೇಕಿದೆ.
ಬಗ್ಗಿ ಸಂಪಿನಿಂದ ನೀರು ಎತ್ತುವಾಗ ಸ್ವಲ್ಪ ಎಚ್ಚರ ತಪ್ಪಿದರೂ ಆ ವಿದ್ಯಾರ್ಥಿ ತಲೆ ಕೆಳಗಾಗಿ ಸಂಪಿನೊಳಗೆ ಬಿದ್ದು ನೀರಿನಲ್ಲಿ ಮುಳುಗುವುದು ಖಚಿತ. ಹಾಗಾಗಿ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಈ ಕೆಲಸ ಮಾಡಿಸುವುದು ನಿಲ್ಲಬೇಕು ಎಂಬುದು ಸಾರ್ವಜನಿಕರು ಹಾಗೂ ಪೋಷಕರ ಆಗ್ರಹವಾಗಿದೆ.
ಮಕ್ಕಳಿಂದ ಶಾಲೆಯಲ್ಲಿ ಕೆಲಸ ಮಾಡಿಸುವಂತಿಲ್ಲ. ಹಾಗಿದ್ದೂ ಇಂಥ ಅಪಾಯಕಾರಿ ಕೆಲಸ ಮಾಡಿಸುತ್ತಿರುವುದು ಅಪರಾಧವಾಗಿದ್ದು, ನೀರು ಎತ್ತಿಕೊಳ್ಳುವುದು ಅಡುಗೆ ಸಿಬ್ಬಂದಿಯ ಕೆಲಸವಾಗಿದ್ದು ಅದನ್ನು ಮಕ್ಕಳಿಂದ ಮಾಡಿಸುತ್ತಿರುವುದರ ಕುರಿತಂತೆ ಇಂದೇ ವರದಿ ನೀಡಲು ಬಿಆರ್ಪಿಯವರನ್ನು ಬಿಳಿಗೆರೆ ಶಾಲೆಗೆ ಕಳಿಸುತ್ತಿದ್ದೇನೆ. -ಮಹೇಶ್, ಬಿಇಒ, ನಂಜನಗೂಡು ತಾಲ್ಲೂಕು
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…