Andolana originals

ಶಾಲಾವರಣಕ್ಕೆ ಬರುವ ನಾಯಿಗಳ ವರದಿ ಶಿಕ್ಷಕರ ಹೆಗಲಿಗೆ!

ಎಸ್.ಎಸ್.ಭಟ್

ನಾಯಿಗಳ ಪಟ್ಟಿ ಮಾಡಿ ನೋಡಲ್ ಅಧಿಕಾರಿಗಳಿಗೆ ವರದಿ ಮಾಡಲು ಶಿಕ್ಷಕರಿಗೆ ಸೂಚನೆ

ನಂಜನಗೂಡು: ಶಾಲೆ ಆವರಣಕ್ಕೆ ಬರುವ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವ ಹೊಣೆ ಇದೀಗ ಪ್ರಾಥಮಿಕ ಶಾಲಾ ಶಿಕ್ಷಕರ ಹೆಗಲೇರಿದ್ದು, ಅವರು ಈಗ ಮಕ್ಕಳೊಂದಿಗೆ ನಾಯಿಗಳನ್ನೂ ಗಮನಿಸಿ ಪಟ್ಟಿ ಮಾಡಿ ವರದಿ ಸಲ್ಲಿಸಬೇಕಿದೆ.

ಸುಪ್ರೀಂ ಕೋರ್ಟ್ ಬೀದಿನಾಯಿಗಳ ನಿಯಂತ್ರಣಕ್ಕೆ ಆದೇಶ ನೀಡಿದ್ದು, ಆ ಆದೇಶದ ಪರಿಪಾಲನೆಯನ್ನು ಆಯಾ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ವಹಿಸಿದೆ. ಆದರೆ ಸ್ಥಳೀಯ ಸಂಸ್ಥೆಗಳು ಶಾಲಾ ಆವರಣಕ್ಕೆ ಬರುವ ಬೀದಿ ನಾಯಿಗಳ ಬಗ್ಗೆ ನಿಗಾ ವಹಿಸಲು ಶಿಕ್ಷಣ ಇಲಾಖೆಗೆ ಜವಾಬ್ದಾರಿ ವಹಿಸಿದೆ. ಹಾಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲಾ ಆವರಣಕ್ಕೆ ಬರುವ ಶ್ವಾನಗಳ ಮೇಲೆ ನಿಗಾ ಇರಿಸಬೇಕಿದೆ. ಸ್ಥಳೀಯ ಸಂಸ್ಥೆಗಳು ಈ ಕುರಿತಂತೆ ತಮ್ಮ ವ್ಯಾಪ್ತಿಯ ಪ್ರತಿಯೊಂದು ಕಿರಿಯ ಹಾಗೂ ಹಿರಿಯ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೂ ನೋಟಿಸ್ ನೀಡಿದೆ

ಪ್ರಾಥಮಿಕ ಶಾಲಾ ಆವರಣ ಹಾಗೂ ಸುತ್ತಲಿನ ಪ್ರದೇಶಗಳ ನಾಯಿಗಳನ್ನು ಪಟ್ಟಿ ಮಾಡಿ ನೋಡಲ್ ಅಽಕಾರಿಗಳಿಗೆ ವರದಿ ಮಾಡುವುದೂ ಸೇರಿದಂತೆ ಅವುಗಳ ಸ್ಥಳಾಂತರಕ್ಕೆ ಸಹಕರಿಸಬೇಕು. ಸ್ಥಳಾಂತರದ ನಂತರವೂ ಅವುಗಳು ಮತ್ತೆ ಅದೇ ಸ್ಥಳದಲ್ಲಿ ನಾಯಿಗಳು ಕಾಣಿಸಿಕೊಂಡರೆ ನಿಮ್ಮನ್ನೇ ಹೊಣೆಗಾರರನ್ನಾಗಿಸಲಾಗುತ್ತದೆ ಎನ್ನುವುದು ಆ ನೋಟಿಸ್‌ನಲ್ಲಿರುವುದು ಶಿಕ್ಷಕರನ್ನು ತಲ್ಲಣಗೊಳಿಸಿದೆ. ಶೈಕ್ಷಣಿಕ ವರ್ಷ ಮುಗಿಯುತ್ತಿದ್ದು, ಮಕ್ಕಳ ವಾರ್ಷಿಕ ಪರೀಕ್ಷೆ ಹತ್ತಿರ ಬರುತ್ತಿದೆ. ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮುಗಿಸಬೇಕಾದ ನಮ್ಮನ್ನು ನಾಯಿ ಕಾಯಲು ನೇಮಿಸಿದರೆ ಆ ಮಕ್ಕಳ ಪಾಠದ ಗತಿ ಏನು ಎಂಬುದು ಶಿಕ್ಷಕರ ಅಳಲಾಗಿದೆ.

” ಮನೆಗಣತಿ, ಜನಗಣತಿ, ಬಿಸಿಯೂಟ, ಅಕ್ಷರ ದಾಸೋಹ ಸೇರಿದಂತೆ ಸರ್ಕಾರ ವಹಿಸಿರುವ ವಿವಿಧ ಜವಾಬ್ದಾರಿಗಳನ್ನು ಹೊತ್ತು ಬಸವಳಿಯುತ್ತಿರುವ ಶಿಕ್ಷಕರ ಪಾಲಿಗೆ ಈಗಲೇ ನೆಮ್ಮದಿ ಇಲ್ಲ. ಈಗ ಬೀದಿನಾಯಿಗಳನ್ನೂ ಇವರ ಹೆಗಲೇರಿಸಿದರೆ ಶಿಕ್ಷಕರ ಪಾಡೇ ನಾಯಿಪಾಡಾಗುತ್ತದೆ. ಈ ಬಗ್ಗೆ ಸಂಘದ ರಾಜ್ಯ ಪದಾಧಿಕಾರಿಗಳ ಜೊತೆ ಮಾತನಾಡಲಾಗುತ್ತಿದೆ.”

-ಸೋಮೇಗೌಡ, ಮೈಸೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ

” ಸರ್ಕಾರದ ಆದೇಶವನ್ನು ಸ್ಥಳೀಯ ಸಂಸ್ಥೆಗಳು ತಪ್ಪಾಗಿ ಅರ್ಥೈಸಿಕೊಂಡಿವೆ. ಶಿಕ್ಷಕರು ನಾಯಿಗಳ ಸಾಗಾಣಿಕೆಗಾಗಲಿ, ನಾಯಿಗಳನ್ನು ಹಿಡಿಯಲಾಗಲಿ ಹೋಗಬೇಕಿಲ್ಲ. ಶಾಲೆಯ ಸಮೀಪ ಬರುವ ನಾಯಿಗಳ ಬಗ್ಗೆ ಅಧಿಕೃತವಾಗಿ ಸ್ಥಳೀಯ ಸಂಸ್ಥೆಗಳ ನೋಡಲ್ ಅಧಿಕಾರಿಗಳಿಗೆ ತಿಳಿಸುವುದು ಮಾತ್ರ ಶಿಕ್ಷಕರ ಜವಾಬ್ದಾರಿಯಾಗಿದೆ. ಈಕುರಿತು ಇಲಾಖೆಯ ಉನ್ನತಾಧಿಕಾರಿಗಳ ಜೊತೆಯೂ ಚರ್ಚಿಸಲಾಗಿದೆ. ಕಳೆದ ವರ್ಷ ಮೈಸೂರು ಜಿಲ್ಲೆಯಲ್ಲೇ ೨೩,೦೦೦ ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ.”

-ಡಿ.ಉದಯಕುಮಾರ್, ಡಿಡಿಪಿಐ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

29 mins ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

47 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

1 hour ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

1 hour ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

2 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

3 hours ago