Andolana originals

ಶಾಲಾವರಣಕ್ಕೆ ಬರುವ ನಾಯಿಗಳ ವರದಿ ಶಿಕ್ಷಕರ ಹೆಗಲಿಗೆ!

ಎಸ್.ಎಸ್.ಭಟ್

ನಾಯಿಗಳ ಪಟ್ಟಿ ಮಾಡಿ ನೋಡಲ್ ಅಧಿಕಾರಿಗಳಿಗೆ ವರದಿ ಮಾಡಲು ಶಿಕ್ಷಕರಿಗೆ ಸೂಚನೆ

ನಂಜನಗೂಡು: ಶಾಲೆ ಆವರಣಕ್ಕೆ ಬರುವ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವ ಹೊಣೆ ಇದೀಗ ಪ್ರಾಥಮಿಕ ಶಾಲಾ ಶಿಕ್ಷಕರ ಹೆಗಲೇರಿದ್ದು, ಅವರು ಈಗ ಮಕ್ಕಳೊಂದಿಗೆ ನಾಯಿಗಳನ್ನೂ ಗಮನಿಸಿ ಪಟ್ಟಿ ಮಾಡಿ ವರದಿ ಸಲ್ಲಿಸಬೇಕಿದೆ.

ಸುಪ್ರೀಂ ಕೋರ್ಟ್ ಬೀದಿನಾಯಿಗಳ ನಿಯಂತ್ರಣಕ್ಕೆ ಆದೇಶ ನೀಡಿದ್ದು, ಆ ಆದೇಶದ ಪರಿಪಾಲನೆಯನ್ನು ಆಯಾ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ವಹಿಸಿದೆ. ಆದರೆ ಸ್ಥಳೀಯ ಸಂಸ್ಥೆಗಳು ಶಾಲಾ ಆವರಣಕ್ಕೆ ಬರುವ ಬೀದಿ ನಾಯಿಗಳ ಬಗ್ಗೆ ನಿಗಾ ವಹಿಸಲು ಶಿಕ್ಷಣ ಇಲಾಖೆಗೆ ಜವಾಬ್ದಾರಿ ವಹಿಸಿದೆ. ಹಾಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲಾ ಆವರಣಕ್ಕೆ ಬರುವ ಶ್ವಾನಗಳ ಮೇಲೆ ನಿಗಾ ಇರಿಸಬೇಕಿದೆ. ಸ್ಥಳೀಯ ಸಂಸ್ಥೆಗಳು ಈ ಕುರಿತಂತೆ ತಮ್ಮ ವ್ಯಾಪ್ತಿಯ ಪ್ರತಿಯೊಂದು ಕಿರಿಯ ಹಾಗೂ ಹಿರಿಯ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೂ ನೋಟಿಸ್ ನೀಡಿದೆ

ಪ್ರಾಥಮಿಕ ಶಾಲಾ ಆವರಣ ಹಾಗೂ ಸುತ್ತಲಿನ ಪ್ರದೇಶಗಳ ನಾಯಿಗಳನ್ನು ಪಟ್ಟಿ ಮಾಡಿ ನೋಡಲ್ ಅಽಕಾರಿಗಳಿಗೆ ವರದಿ ಮಾಡುವುದೂ ಸೇರಿದಂತೆ ಅವುಗಳ ಸ್ಥಳಾಂತರಕ್ಕೆ ಸಹಕರಿಸಬೇಕು. ಸ್ಥಳಾಂತರದ ನಂತರವೂ ಅವುಗಳು ಮತ್ತೆ ಅದೇ ಸ್ಥಳದಲ್ಲಿ ನಾಯಿಗಳು ಕಾಣಿಸಿಕೊಂಡರೆ ನಿಮ್ಮನ್ನೇ ಹೊಣೆಗಾರರನ್ನಾಗಿಸಲಾಗುತ್ತದೆ ಎನ್ನುವುದು ಆ ನೋಟಿಸ್‌ನಲ್ಲಿರುವುದು ಶಿಕ್ಷಕರನ್ನು ತಲ್ಲಣಗೊಳಿಸಿದೆ. ಶೈಕ್ಷಣಿಕ ವರ್ಷ ಮುಗಿಯುತ್ತಿದ್ದು, ಮಕ್ಕಳ ವಾರ್ಷಿಕ ಪರೀಕ್ಷೆ ಹತ್ತಿರ ಬರುತ್ತಿದೆ. ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮುಗಿಸಬೇಕಾದ ನಮ್ಮನ್ನು ನಾಯಿ ಕಾಯಲು ನೇಮಿಸಿದರೆ ಆ ಮಕ್ಕಳ ಪಾಠದ ಗತಿ ಏನು ಎಂಬುದು ಶಿಕ್ಷಕರ ಅಳಲಾಗಿದೆ.

” ಮನೆಗಣತಿ, ಜನಗಣತಿ, ಬಿಸಿಯೂಟ, ಅಕ್ಷರ ದಾಸೋಹ ಸೇರಿದಂತೆ ಸರ್ಕಾರ ವಹಿಸಿರುವ ವಿವಿಧ ಜವಾಬ್ದಾರಿಗಳನ್ನು ಹೊತ್ತು ಬಸವಳಿಯುತ್ತಿರುವ ಶಿಕ್ಷಕರ ಪಾಲಿಗೆ ಈಗಲೇ ನೆಮ್ಮದಿ ಇಲ್ಲ. ಈಗ ಬೀದಿನಾಯಿಗಳನ್ನೂ ಇವರ ಹೆಗಲೇರಿಸಿದರೆ ಶಿಕ್ಷಕರ ಪಾಡೇ ನಾಯಿಪಾಡಾಗುತ್ತದೆ. ಈ ಬಗ್ಗೆ ಸಂಘದ ರಾಜ್ಯ ಪದಾಧಿಕಾರಿಗಳ ಜೊತೆ ಮಾತನಾಡಲಾಗುತ್ತಿದೆ.”

-ಸೋಮೇಗೌಡ, ಮೈಸೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ

” ಸರ್ಕಾರದ ಆದೇಶವನ್ನು ಸ್ಥಳೀಯ ಸಂಸ್ಥೆಗಳು ತಪ್ಪಾಗಿ ಅರ್ಥೈಸಿಕೊಂಡಿವೆ. ಶಿಕ್ಷಕರು ನಾಯಿಗಳ ಸಾಗಾಣಿಕೆಗಾಗಲಿ, ನಾಯಿಗಳನ್ನು ಹಿಡಿಯಲಾಗಲಿ ಹೋಗಬೇಕಿಲ್ಲ. ಶಾಲೆಯ ಸಮೀಪ ಬರುವ ನಾಯಿಗಳ ಬಗ್ಗೆ ಅಧಿಕೃತವಾಗಿ ಸ್ಥಳೀಯ ಸಂಸ್ಥೆಗಳ ನೋಡಲ್ ಅಧಿಕಾರಿಗಳಿಗೆ ತಿಳಿಸುವುದು ಮಾತ್ರ ಶಿಕ್ಷಕರ ಜವಾಬ್ದಾರಿಯಾಗಿದೆ. ಈಕುರಿತು ಇಲಾಖೆಯ ಉನ್ನತಾಧಿಕಾರಿಗಳ ಜೊತೆಯೂ ಚರ್ಚಿಸಲಾಗಿದೆ. ಕಳೆದ ವರ್ಷ ಮೈಸೂರು ಜಿಲ್ಲೆಯಲ್ಲೇ ೨೩,೦೦೦ ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ.”

-ಡಿ.ಉದಯಕುಮಾರ್, ಡಿಡಿಪಿಐ, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago