Andolana originals

ಶಾಲಾವರಣಕ್ಕೆ ಬರುವ ನಾಯಿಗಳ ವರದಿ ಶಿಕ್ಷಕರ ಹೆಗಲಿಗೆ!

ಎಸ್.ಎಸ್.ಭಟ್

ನಾಯಿಗಳ ಪಟ್ಟಿ ಮಾಡಿ ನೋಡಲ್ ಅಧಿಕಾರಿಗಳಿಗೆ ವರದಿ ಮಾಡಲು ಶಿಕ್ಷಕರಿಗೆ ಸೂಚನೆ

ನಂಜನಗೂಡು: ಶಾಲೆ ಆವರಣಕ್ಕೆ ಬರುವ ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವ ಹೊಣೆ ಇದೀಗ ಪ್ರಾಥಮಿಕ ಶಾಲಾ ಶಿಕ್ಷಕರ ಹೆಗಲೇರಿದ್ದು, ಅವರು ಈಗ ಮಕ್ಕಳೊಂದಿಗೆ ನಾಯಿಗಳನ್ನೂ ಗಮನಿಸಿ ಪಟ್ಟಿ ಮಾಡಿ ವರದಿ ಸಲ್ಲಿಸಬೇಕಿದೆ.

ಸುಪ್ರೀಂ ಕೋರ್ಟ್ ಬೀದಿನಾಯಿಗಳ ನಿಯಂತ್ರಣಕ್ಕೆ ಆದೇಶ ನೀಡಿದ್ದು, ಆ ಆದೇಶದ ಪರಿಪಾಲನೆಯನ್ನು ಆಯಾ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ವಹಿಸಿದೆ. ಆದರೆ ಸ್ಥಳೀಯ ಸಂಸ್ಥೆಗಳು ಶಾಲಾ ಆವರಣಕ್ಕೆ ಬರುವ ಬೀದಿ ನಾಯಿಗಳ ಬಗ್ಗೆ ನಿಗಾ ವಹಿಸಲು ಶಿಕ್ಷಣ ಇಲಾಖೆಗೆ ಜವಾಬ್ದಾರಿ ವಹಿಸಿದೆ. ಹಾಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲಾ ಆವರಣಕ್ಕೆ ಬರುವ ಶ್ವಾನಗಳ ಮೇಲೆ ನಿಗಾ ಇರಿಸಬೇಕಿದೆ. ಸ್ಥಳೀಯ ಸಂಸ್ಥೆಗಳು ಈ ಕುರಿತಂತೆ ತಮ್ಮ ವ್ಯಾಪ್ತಿಯ ಪ್ರತಿಯೊಂದು ಕಿರಿಯ ಹಾಗೂ ಹಿರಿಯ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೂ ನೋಟಿಸ್ ನೀಡಿದೆ

ಪ್ರಾಥಮಿಕ ಶಾಲಾ ಆವರಣ ಹಾಗೂ ಸುತ್ತಲಿನ ಪ್ರದೇಶಗಳ ನಾಯಿಗಳನ್ನು ಪಟ್ಟಿ ಮಾಡಿ ನೋಡಲ್ ಅಽಕಾರಿಗಳಿಗೆ ವರದಿ ಮಾಡುವುದೂ ಸೇರಿದಂತೆ ಅವುಗಳ ಸ್ಥಳಾಂತರಕ್ಕೆ ಸಹಕರಿಸಬೇಕು. ಸ್ಥಳಾಂತರದ ನಂತರವೂ ಅವುಗಳು ಮತ್ತೆ ಅದೇ ಸ್ಥಳದಲ್ಲಿ ನಾಯಿಗಳು ಕಾಣಿಸಿಕೊಂಡರೆ ನಿಮ್ಮನ್ನೇ ಹೊಣೆಗಾರರನ್ನಾಗಿಸಲಾಗುತ್ತದೆ ಎನ್ನುವುದು ಆ ನೋಟಿಸ್‌ನಲ್ಲಿರುವುದು ಶಿಕ್ಷಕರನ್ನು ತಲ್ಲಣಗೊಳಿಸಿದೆ. ಶೈಕ್ಷಣಿಕ ವರ್ಷ ಮುಗಿಯುತ್ತಿದ್ದು, ಮಕ್ಕಳ ವಾರ್ಷಿಕ ಪರೀಕ್ಷೆ ಹತ್ತಿರ ಬರುತ್ತಿದೆ. ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮುಗಿಸಬೇಕಾದ ನಮ್ಮನ್ನು ನಾಯಿ ಕಾಯಲು ನೇಮಿಸಿದರೆ ಆ ಮಕ್ಕಳ ಪಾಠದ ಗತಿ ಏನು ಎಂಬುದು ಶಿಕ್ಷಕರ ಅಳಲಾಗಿದೆ.

” ಮನೆಗಣತಿ, ಜನಗಣತಿ, ಬಿಸಿಯೂಟ, ಅಕ್ಷರ ದಾಸೋಹ ಸೇರಿದಂತೆ ಸರ್ಕಾರ ವಹಿಸಿರುವ ವಿವಿಧ ಜವಾಬ್ದಾರಿಗಳನ್ನು ಹೊತ್ತು ಬಸವಳಿಯುತ್ತಿರುವ ಶಿಕ್ಷಕರ ಪಾಲಿಗೆ ಈಗಲೇ ನೆಮ್ಮದಿ ಇಲ್ಲ. ಈಗ ಬೀದಿನಾಯಿಗಳನ್ನೂ ಇವರ ಹೆಗಲೇರಿಸಿದರೆ ಶಿಕ್ಷಕರ ಪಾಡೇ ನಾಯಿಪಾಡಾಗುತ್ತದೆ. ಈ ಬಗ್ಗೆ ಸಂಘದ ರಾಜ್ಯ ಪದಾಧಿಕಾರಿಗಳ ಜೊತೆ ಮಾತನಾಡಲಾಗುತ್ತಿದೆ.”

-ಸೋಮೇಗೌಡ, ಮೈಸೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ

” ಸರ್ಕಾರದ ಆದೇಶವನ್ನು ಸ್ಥಳೀಯ ಸಂಸ್ಥೆಗಳು ತಪ್ಪಾಗಿ ಅರ್ಥೈಸಿಕೊಂಡಿವೆ. ಶಿಕ್ಷಕರು ನಾಯಿಗಳ ಸಾಗಾಣಿಕೆಗಾಗಲಿ, ನಾಯಿಗಳನ್ನು ಹಿಡಿಯಲಾಗಲಿ ಹೋಗಬೇಕಿಲ್ಲ. ಶಾಲೆಯ ಸಮೀಪ ಬರುವ ನಾಯಿಗಳ ಬಗ್ಗೆ ಅಧಿಕೃತವಾಗಿ ಸ್ಥಳೀಯ ಸಂಸ್ಥೆಗಳ ನೋಡಲ್ ಅಧಿಕಾರಿಗಳಿಗೆ ತಿಳಿಸುವುದು ಮಾತ್ರ ಶಿಕ್ಷಕರ ಜವಾಬ್ದಾರಿಯಾಗಿದೆ. ಈಕುರಿತು ಇಲಾಖೆಯ ಉನ್ನತಾಧಿಕಾರಿಗಳ ಜೊತೆಯೂ ಚರ್ಚಿಸಲಾಗಿದೆ. ಕಳೆದ ವರ್ಷ ಮೈಸೂರು ಜಿಲ್ಲೆಯಲ್ಲೇ ೨೩,೦೦೦ ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ.”

-ಡಿ.ಉದಯಕುಮಾರ್, ಡಿಡಿಪಿಐ, ಮೈಸೂರು

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

21 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago