Andolana originals

ಬೆಳೆ ಹಾನಿ ಸಂಬಂಧ ಜಂಟಿ ಸಮೀಕ್ಷೆಗೆ ತಂಡ ರಚನೆ

ನವೀನ್ ಡಿಸೋಜ

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಾಫಿ ಮಂಡಳಿ ಅಧಿಕಾರಿಗಳು, ತಹಸಿಲ್ದಾರ್ ನೇತೃತ್ವದ ತಂಡ; ಶೀಘ್ರ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ಅತಿವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಿ, ಗ್ರಾಮವಾರು, ಹೋಬಳಿವಾರು ಎಷ್ಟು ಹಾನಿಯಾಗಿರುತ್ತದೆ ಎಂಬುದನ್ನು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಹಾಗೂ ಸಂಬಂಧಪಟ್ಟ ಸಂತ್ರಸ್ತರಿಗೆ ಪರಿಹಾರ ಪಾವತಿಸುವ ಸಲುವಾಗಿ ತಂಡ ರಚಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಮೇ ಅಂತ್ಯದಿಂದಲೇ ಮಳೆ-ಶೀತಗಾಳಿ ವಾತಾವರಣ ಕಂಡುಬಂದಿದೆ. ಇದು ಜಿಲ್ಲೆಯ ತೋಟಗಾರಿಕಾ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡಿದ್ದು, ಮುಖ್ಯವಾಗಿ ಕಾಫಿ ಬೆಳೆಗಾರರಿಗೆ ನಷ್ಟದ ಭೀತಿ ಎದುರಾಗಿದೆ. ಇದಲ್ಲದೆ ಕಾಳು ಮೆಣಸು, ಅಡಕೆ, ಇನ್ನಿತರೆ ತೋಟಗಾರಿಕಾ ಬೆಳೆಗಳಿಗೆ ಸಮಸ್ಯೆ ಉಂಟಾಗಿದೆ. ಅತಿಯಾದ ಮಳೆ, ತೇವಾಂಶದ ಪರಿಣಾಮವಾಗಿ ಶಿಲೀಂಧ್ರಗಳು ನಾಶವಾಗಿ ಕೊಳೆರೋಗ ಕಂಡುಬಂದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಸೂರ್ಲಬ್ಬಿ, ಶಾಂತಳ್ಳಿ, ಬಿರುನಾಣಿ, ಗರ್ವಾಲೆ ಮತ್ತು ಮುಕ್ಕೋಡ್ಲು ಸೇರಿದಂತೆ ಪ್ರತಿ ವರ್ಷ ಹೆಚ್ಚು ಮಳೆ ದಾಖಲಾಗುವ ಪ್ರದೇಶಗಳಲ್ಲಿ ಶೇ.೧೫೬ರಷ್ಟು ಮಳೆಯಾಗಿದೆ. ಆದರೆ ಭಾಗಮಂಡಲ, ಕೆಲವು ಕಡೆ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿದೆ. ಈಗ ಹೆಚ್ಚು ಮಳೆಯಾಗಿರುವ ಪ್ರದೇಶಗಳಲ್ಲಿ ಕಾಫಿಗೆ ಕೊಳೆರೋಗ ಬಾಧಿಸಿದ್ದು, ಇಲ್ಲೆಲ್ಲ ಶೇ.೧೫ ಕಾಫಿ ಬೆಳೆ ಉದುರಿದೆ ಎಂದು ಕಾಫಿ ಮಂಡಳಿ ಅಂದಾಜಿಸಿದೆ.

ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲು ತಂಡ ರಚಿಸಲಾಗಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ವಿರಾಜಪೇಟೆಯ ಕಾಫಿ ಮಂಡಳಿ ಉಪ ನಿರ್ದೇಶಕರು ಹಾಗೂ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ಈ ತಾಲ್ಲೂಕುಗಳ ತಹಸಿಲ್ದಾರರು ತಂಡದಲ್ಲಿದ್ದಾರೆ.ಈ ತಂಡವು ಬೆಳೆಹಾನಿಯಾದ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಜತೆ ಜಂಟಿ ಸ್ಥಳ ಪರಿಶೀಲನೆ ನಡೆಸಿ ಛಾಯಾಚಿತ್ರದೊಂದಿಗೆ ಬೆಳೆ ಹಾನಿಯ ಬಗ್ಗೆ ಖಚಿತ ವರದಿ ಸಲ್ಲಿಸಬೇಕಾಗಿದೆ. ತಾಲ್ಲೂಕುವಾರು ತಂಡಗಳನ್ನು ಇಲಾಖೆಗಳ ಸಹಯೋಗದೊಂದಿಗೆ ರಚಿಸಿಕೊಂಡು ವರದಿಯನ್ನು ಕ್ರೋಢೀಕರಿಸಿ ಅ.೬ರೊಳಗೆ ಸಂಬಂಧಿಸಿದ ತಹಸಿಲ್ದಾರರು ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ.

ಇದರೊಂದಿಗೆ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರು ಕಾಫಿ ಬೆಳೆ ಹಾನಿ ಸಮೀಕ್ಷೆಯೊಂದಿಗೆ ಕರಿಮೆಣಸು ಬೆಳೆ ಹಾನಿಯನ್ನೂ ಅಂದಾಜಿಸಿ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

” ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅತಿವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಲು ತಂಡ ರಚಿಸಲಾಗಿದೆ. ಗ್ರಾಮವಾರು, ಹೋಬಳಿವಾರು ಎಷ್ಟೆಷ್ಟು ಹಾನಿಯಾಗಿರುತ್ತದೆ ಎಂಬುದನ್ನು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಅ.೬ರೊಳಗೆ ಸಮೀಕ್ಷೆ ವರದಿಯನ್ನು ಕ್ರೋಢೀಕರಿಸಿ ಸಲ್ಲಿಸಲು ಆದೇಶಿಸಲಾಗಿದೆ.”

-ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

3 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

3 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

4 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

5 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

6 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

7 hours ago