Andolana originals

ಬೆಳೆ ಹಾನಿ ಸಂಬಂಧ ಜಂಟಿ ಸಮೀಕ್ಷೆಗೆ ತಂಡ ರಚನೆ

ನವೀನ್ ಡಿಸೋಜ

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಾಫಿ ಮಂಡಳಿ ಅಧಿಕಾರಿಗಳು, ತಹಸಿಲ್ದಾರ್ ನೇತೃತ್ವದ ತಂಡ; ಶೀಘ್ರ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ಅತಿವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಿ, ಗ್ರಾಮವಾರು, ಹೋಬಳಿವಾರು ಎಷ್ಟು ಹಾನಿಯಾಗಿರುತ್ತದೆ ಎಂಬುದನ್ನು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಹಾಗೂ ಸಂಬಂಧಪಟ್ಟ ಸಂತ್ರಸ್ತರಿಗೆ ಪರಿಹಾರ ಪಾವತಿಸುವ ಸಲುವಾಗಿ ತಂಡ ರಚಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಮೇ ಅಂತ್ಯದಿಂದಲೇ ಮಳೆ-ಶೀತಗಾಳಿ ವಾತಾವರಣ ಕಂಡುಬಂದಿದೆ. ಇದು ಜಿಲ್ಲೆಯ ತೋಟಗಾರಿಕಾ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡಿದ್ದು, ಮುಖ್ಯವಾಗಿ ಕಾಫಿ ಬೆಳೆಗಾರರಿಗೆ ನಷ್ಟದ ಭೀತಿ ಎದುರಾಗಿದೆ. ಇದಲ್ಲದೆ ಕಾಳು ಮೆಣಸು, ಅಡಕೆ, ಇನ್ನಿತರೆ ತೋಟಗಾರಿಕಾ ಬೆಳೆಗಳಿಗೆ ಸಮಸ್ಯೆ ಉಂಟಾಗಿದೆ. ಅತಿಯಾದ ಮಳೆ, ತೇವಾಂಶದ ಪರಿಣಾಮವಾಗಿ ಶಿಲೀಂಧ್ರಗಳು ನಾಶವಾಗಿ ಕೊಳೆರೋಗ ಕಂಡುಬಂದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಸೂರ್ಲಬ್ಬಿ, ಶಾಂತಳ್ಳಿ, ಬಿರುನಾಣಿ, ಗರ್ವಾಲೆ ಮತ್ತು ಮುಕ್ಕೋಡ್ಲು ಸೇರಿದಂತೆ ಪ್ರತಿ ವರ್ಷ ಹೆಚ್ಚು ಮಳೆ ದಾಖಲಾಗುವ ಪ್ರದೇಶಗಳಲ್ಲಿ ಶೇ.೧೫೬ರಷ್ಟು ಮಳೆಯಾಗಿದೆ. ಆದರೆ ಭಾಗಮಂಡಲ, ಕೆಲವು ಕಡೆ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿದೆ. ಈಗ ಹೆಚ್ಚು ಮಳೆಯಾಗಿರುವ ಪ್ರದೇಶಗಳಲ್ಲಿ ಕಾಫಿಗೆ ಕೊಳೆರೋಗ ಬಾಧಿಸಿದ್ದು, ಇಲ್ಲೆಲ್ಲ ಶೇ.೧೫ ಕಾಫಿ ಬೆಳೆ ಉದುರಿದೆ ಎಂದು ಕಾಫಿ ಮಂಡಳಿ ಅಂದಾಜಿಸಿದೆ.

ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲು ತಂಡ ರಚಿಸಲಾಗಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ವಿರಾಜಪೇಟೆಯ ಕಾಫಿ ಮಂಡಳಿ ಉಪ ನಿರ್ದೇಶಕರು ಹಾಗೂ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ಈ ತಾಲ್ಲೂಕುಗಳ ತಹಸಿಲ್ದಾರರು ತಂಡದಲ್ಲಿದ್ದಾರೆ.ಈ ತಂಡವು ಬೆಳೆಹಾನಿಯಾದ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಜತೆ ಜಂಟಿ ಸ್ಥಳ ಪರಿಶೀಲನೆ ನಡೆಸಿ ಛಾಯಾಚಿತ್ರದೊಂದಿಗೆ ಬೆಳೆ ಹಾನಿಯ ಬಗ್ಗೆ ಖಚಿತ ವರದಿ ಸಲ್ಲಿಸಬೇಕಾಗಿದೆ. ತಾಲ್ಲೂಕುವಾರು ತಂಡಗಳನ್ನು ಇಲಾಖೆಗಳ ಸಹಯೋಗದೊಂದಿಗೆ ರಚಿಸಿಕೊಂಡು ವರದಿಯನ್ನು ಕ್ರೋಢೀಕರಿಸಿ ಅ.೬ರೊಳಗೆ ಸಂಬಂಧಿಸಿದ ತಹಸಿಲ್ದಾರರು ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ.

ಇದರೊಂದಿಗೆ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರು ಕಾಫಿ ಬೆಳೆ ಹಾನಿ ಸಮೀಕ್ಷೆಯೊಂದಿಗೆ ಕರಿಮೆಣಸು ಬೆಳೆ ಹಾನಿಯನ್ನೂ ಅಂದಾಜಿಸಿ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

” ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅತಿವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಲು ತಂಡ ರಚಿಸಲಾಗಿದೆ. ಗ್ರಾಮವಾರು, ಹೋಬಳಿವಾರು ಎಷ್ಟೆಷ್ಟು ಹಾನಿಯಾಗಿರುತ್ತದೆ ಎಂಬುದನ್ನು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಅ.೬ರೊಳಗೆ ಸಮೀಕ್ಷೆ ವರದಿಯನ್ನು ಕ್ರೋಢೀಕರಿಸಿ ಸಲ್ಲಿಸಲು ಆದೇಶಿಸಲಾಗಿದೆ.”

-ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

8 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

9 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

10 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

11 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

11 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

11 hours ago