Andolana originals

ಬೆಳೆ ಹಾನಿ ಸಂಬಂಧ ಜಂಟಿ ಸಮೀಕ್ಷೆಗೆ ತಂಡ ರಚನೆ

ನವೀನ್ ಡಿಸೋಜ

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಾಫಿ ಮಂಡಳಿ ಅಧಿಕಾರಿಗಳು, ತಹಸಿಲ್ದಾರ್ ನೇತೃತ್ವದ ತಂಡ; ಶೀಘ್ರ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ಅತಿವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಿ, ಗ್ರಾಮವಾರು, ಹೋಬಳಿವಾರು ಎಷ್ಟು ಹಾನಿಯಾಗಿರುತ್ತದೆ ಎಂಬುದನ್ನು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಹಾಗೂ ಸಂಬಂಧಪಟ್ಟ ಸಂತ್ರಸ್ತರಿಗೆ ಪರಿಹಾರ ಪಾವತಿಸುವ ಸಲುವಾಗಿ ತಂಡ ರಚಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಮೇ ಅಂತ್ಯದಿಂದಲೇ ಮಳೆ-ಶೀತಗಾಳಿ ವಾತಾವರಣ ಕಂಡುಬಂದಿದೆ. ಇದು ಜಿಲ್ಲೆಯ ತೋಟಗಾರಿಕಾ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡಿದ್ದು, ಮುಖ್ಯವಾಗಿ ಕಾಫಿ ಬೆಳೆಗಾರರಿಗೆ ನಷ್ಟದ ಭೀತಿ ಎದುರಾಗಿದೆ. ಇದಲ್ಲದೆ ಕಾಳು ಮೆಣಸು, ಅಡಕೆ, ಇನ್ನಿತರೆ ತೋಟಗಾರಿಕಾ ಬೆಳೆಗಳಿಗೆ ಸಮಸ್ಯೆ ಉಂಟಾಗಿದೆ. ಅತಿಯಾದ ಮಳೆ, ತೇವಾಂಶದ ಪರಿಣಾಮವಾಗಿ ಶಿಲೀಂಧ್ರಗಳು ನಾಶವಾಗಿ ಕೊಳೆರೋಗ ಕಂಡುಬಂದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಸೂರ್ಲಬ್ಬಿ, ಶಾಂತಳ್ಳಿ, ಬಿರುನಾಣಿ, ಗರ್ವಾಲೆ ಮತ್ತು ಮುಕ್ಕೋಡ್ಲು ಸೇರಿದಂತೆ ಪ್ರತಿ ವರ್ಷ ಹೆಚ್ಚು ಮಳೆ ದಾಖಲಾಗುವ ಪ್ರದೇಶಗಳಲ್ಲಿ ಶೇ.೧೫೬ರಷ್ಟು ಮಳೆಯಾಗಿದೆ. ಆದರೆ ಭಾಗಮಂಡಲ, ಕೆಲವು ಕಡೆ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿದೆ. ಈಗ ಹೆಚ್ಚು ಮಳೆಯಾಗಿರುವ ಪ್ರದೇಶಗಳಲ್ಲಿ ಕಾಫಿಗೆ ಕೊಳೆರೋಗ ಬಾಧಿಸಿದ್ದು, ಇಲ್ಲೆಲ್ಲ ಶೇ.೧೫ ಕಾಫಿ ಬೆಳೆ ಉದುರಿದೆ ಎಂದು ಕಾಫಿ ಮಂಡಳಿ ಅಂದಾಜಿಸಿದೆ.

ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲು ತಂಡ ರಚಿಸಲಾಗಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ವಿರಾಜಪೇಟೆಯ ಕಾಫಿ ಮಂಡಳಿ ಉಪ ನಿರ್ದೇಶಕರು ಹಾಗೂ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ಈ ತಾಲ್ಲೂಕುಗಳ ತಹಸಿಲ್ದಾರರು ತಂಡದಲ್ಲಿದ್ದಾರೆ.ಈ ತಂಡವು ಬೆಳೆಹಾನಿಯಾದ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಜತೆ ಜಂಟಿ ಸ್ಥಳ ಪರಿಶೀಲನೆ ನಡೆಸಿ ಛಾಯಾಚಿತ್ರದೊಂದಿಗೆ ಬೆಳೆ ಹಾನಿಯ ಬಗ್ಗೆ ಖಚಿತ ವರದಿ ಸಲ್ಲಿಸಬೇಕಾಗಿದೆ. ತಾಲ್ಲೂಕುವಾರು ತಂಡಗಳನ್ನು ಇಲಾಖೆಗಳ ಸಹಯೋಗದೊಂದಿಗೆ ರಚಿಸಿಕೊಂಡು ವರದಿಯನ್ನು ಕ್ರೋಢೀಕರಿಸಿ ಅ.೬ರೊಳಗೆ ಸಂಬಂಧಿಸಿದ ತಹಸಿಲ್ದಾರರು ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ.

ಇದರೊಂದಿಗೆ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರು ಕಾಫಿ ಬೆಳೆ ಹಾನಿ ಸಮೀಕ್ಷೆಯೊಂದಿಗೆ ಕರಿಮೆಣಸು ಬೆಳೆ ಹಾನಿಯನ್ನೂ ಅಂದಾಜಿಸಿ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

” ಕೊಡಗು ಜಿಲ್ಲೆಯಲ್ಲಿ ಈ ಬಾರಿ ಅತಿವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಲು ತಂಡ ರಚಿಸಲಾಗಿದೆ. ಗ್ರಾಮವಾರು, ಹೋಬಳಿವಾರು ಎಷ್ಟೆಷ್ಟು ಹಾನಿಯಾಗಿರುತ್ತದೆ ಎಂಬುದನ್ನು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಅ.೬ರೊಳಗೆ ಸಮೀಕ್ಷೆ ವರದಿಯನ್ನು ಕ್ರೋಢೀಕರಿಸಿ ಸಲ್ಲಿಸಲು ಆದೇಶಿಸಲಾಗಿದೆ.”

-ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

7 mins ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

1 hour ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

2 hours ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

2 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

4 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

5 hours ago