ನವೀನ್ ಡಿಸೋಜ
೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ
ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ ಬಿಸಿಲಿನ ತಾಪವೂ ಹೆಚ್ಚಾಗಿದ್ದು, ಸದಾ ತಂಪಾಗಿರುವ ಮಡಿಕೇರಿ ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಈಗಾಗಲೇ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಸಿಲಿನ ಬೇಗೆ ಎದುರಾಗಲಿದೆ.
ಸಾಮಾನ್ಯವಾಗಿ ತಂಪು ಹವಾಮಾನಕ್ಕೆ ಹೆಸರಾಗಿರುವ ಕೊಡಗಿನಲ್ಲಿ ಚಳಿಯಿಂದ ಒಮ್ಮೆಲೇ ಬಿಸಿಲಿನ ತೀವ್ರತೆ ಹೆಚ್ಚಾಗಿರುವುದು ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೂ ಪರಿಣಾಮ ಬೀರಲಿದ್ದು, ಎಚ್ಚರಿ ಕೆಯ ಘಂಟೆ ಮೊಳಗಿಸಿದೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಭಾಗಗಳಲ್ಲಿ ಮಧ್ಯಾಹ್ನದ ತಾಪಮಾನ ೩೧ ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಮಧ್ಯಾಹ್ನದ ಬಿಸಿಲು ದೇಹಕ್ಕೆ ತೀವ್ರವಾಗಿ ತಟ್ಟುತ್ತಿದೆ. ತೀವ್ರ ಚಳಿಯಿಂದ ಕೂಡಿದ್ದ ವಾತಾ ವರಣದಲ್ಲಿ ದಿಢೀರ್ ತಾಪಮಾನ ಏರಿಕೆ ಆತಂಕ ಸೃಷ್ಟಿಸಿದೆ.
ಕೊಡಗಿನಂತಹ ಎತ್ತರ ಪ್ರದೇಶದಲ್ಲೇ ಈ ಮಟ್ಟದ ಉಷ್ಣತೆ ಕಂಡುಬಂದಿರುವುದು ಮುಂದಿನ ತಿಂಗಳಲ್ಲಿ ಬಿಸಿಲು ಇನ್ನಷ್ಟು ಹೆಚ್ಚಾಗುವ ಸೂಚನೆ ಎಂದೂ ಹೇಳಲಾಗುತ್ತಿದೆ. ಹವಾಮಾನ ತಜ್ಞರ ಪ್ರಕಾರ, ಕಳೆದ ಕೆಲವು ವಾರಗಳಲ್ಲಿಮಳೆ ಕೊರತೆ, ಮೋಡ ಕವಿದ ದಿನಗಳ ಸಂಖ್ಯೆ ಕಡಿಮೆಯಾಗಿರುವುದು ಹಾಗೂ ಗಾಳಿಯ ತೇವಾಂಶ ಕುಸಿತ ಇವೆಲ್ಲವೂ ತಾಪಮಾನ ಏರಿಕೆಗೆ ಕಾರಣವಾಗಿವೆ.
ಅಲ್ಲದೆ ಈ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಮುಂದುವರಿಯಲಿದ್ದು, ತಾಪಮಾನವೂ ಏರಿಕೆಯಾಗಲಿದೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಸಾಮಾನ್ಯವಾಗಿ ತಾಪಮಾನ ಇನ್ನೂ ೨ -೩ ಡಿಗ್ರಿ ಏರಿಕೆಯಾಗುವ ಸಂಭವವಿದೆ. ಇದ್ದಕ್ಕಿದ್ದಂತೆ ಉಷ್ಣತೆ ಏರಿಕೆ ಆಗಿರುವುದು ಹಲವು ರೀತಿಯಲ್ಲಿ ಪರಿಣಾಮ ಬೀರುತ್ತದೆ. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಾಂಗಣದಲ್ಲಿ ಕೆಲಸ ಮಾಡುವವರು ಹೆಚ್ಚು ಎಚ್ಚರಿಕೆ ವಹಿಸಬೇಕು ಎನ್ನುತ್ತಾರೆ ವೈದ್ಯರು.
ಕಾಫಿ ಬೆಳೆಗಾರರಿಗೆ ಈ ಸಮಯದ ತೇವಾಂಶ ಕುಸಿತ ಆತಂಕಕಾರಿ. ಹೂ ಬಿಡುವ ಹಂತದಲ್ಲಿರುವ ಕಾಫಿಗೆ ಸೂಕ್ತ ಮಳೆ ಅಗತ್ಯ. ಬಿಸಿಲು ತೀವ್ರವಾದರೆ ಹೂಗುಚ್ಛ ಉದುರುವ ಸಾಧ್ಯತೆ ಇದೆ. ಈಗಾಗಲೇ ಸ್ಪ್ರಿಂಕ್ಲರ್ ಬಳಸಿ ಕಾಫಿಗೆ ನೀರು ಒದಗಿಸುತ್ತಿದ್ದು, ಮಳೆ ಬಾರದಿದ್ದರೆ ಈ ವರ್ಷ ಇದನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಜಿಲ್ಲೆಯ ವಿರಾಜಪೇಟೆ, ನಾಪೋಕ್ಲು, ಚೆಟ್ಟಿಮಾನಿ, ಪೊನ್ನಂಪೇಟೆ ಸೇರಿದಂತೆ ಹಲವೆಡೆ ಈಗಾಗಲೇ ಮಳೆಯಾಗಿದೆ. ಮಳೆಯಾದ ಸಂದರ್ಭದಲ್ಲಿ ತಾಪಮಾನ ಇಳಿಕೆ ಕಂಡಿದ್ದರೂ ಮತ್ತೆ ಏರಿಕೆಯಾಗುತ್ತಿದೆ.
ಕೆರೆಗಳು, ಹೊಳೆಗಳಲ್ಲಿ ನೀರಿನ ಮಟ್ಟ ಇಳಿಕೆಯಾಗಲು ಆರಂಭವಾದರೆ ಬೇಸಿಗೆಯ ಕೊನೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರುವ ಸಾಧ್ಯತೆ ಇದೆ.
” ಕೊಡಗು ಮಾತ್ರವಲ್ಲ ಎಲ್ಲೆಡೆ ತಾಪಮಾನ ಏರಿಕೆಯಾಗುತ್ತಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಸಹಿತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ರಾಜ್ಯದ ದಕ್ಷಿಣ ಒಳನಾಡಿನಮೈಸೂರು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರದಲ್ಲಿ ಯಾವುದೇ ಮಹತ್ವದ ವಿದ್ಯಮಾನಗಳು ಇಲ್ಲದ ಕಾರಣ ಅಧಿಕ ತಾಪಮಾನದ ಹಾಗೂ ವಾತಾವರಣದ ತೇವಾಂಶದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಮಳೆಯಾಗುತ್ತಿದೆ.”
-ಡಾ.ಸುಮಂತ್ಕುಮಾರ್, ತಾಂತ್ರಿಕ ಅಧಿಕಾರಿ, ಕೃಷಿ ಹವಾಮಾನ ಘಟಕ, ನಾಗನಹಳ್ಳಿ
ಆರೋಗ್ಯ ಸಮಸ್ಯೆಗಳು…:
ದೇಹದಲ್ಲಿ ನೀರಿನ ಕೊರತೆ (ಡಿಹೈಡ್ರೇಷನ್) ಹೀಟ್ ಎಕ್ಸಾಷನ್, ಹೀಟ್ ಸ್ಟ್ರೋಕ್, ತಲೆನೋವು, ತಲೆ ತಿರುಗುವುದುರಕ್ತ ದೊತ್ತಡ ಏರುಪೇರು ಚರ್ಮದ ಅಲರ್ಜಿ, ಉರಿ ಮಲಬದ್ಧತೆ, ಅಜೀರ್ಣ ಸಮಸ್ಯೆಗಳು
ಏನು ಮಾಡಬೇಕು?:
ದಿನಕ್ಕೆ ಕನಿಷ್ಠ ೩-೪ ಲೀಟರ್ ನೀರು ಕುಡಿಯಬೇಕು. ಮಧ್ಯಾಹ್ನದ ಕಡುಬಿಸಿಲು ತಪ್ಪಿಸಿಕೊಳ್ಳುವುದು, ಹಗುರವಾದ ಹತ್ತಿ ಬಟ್ಟೆ ಧರಿಸುವುದು. ಮಜ್ಜಿಗೆ, ನಿಂಬೆರಸ, ಎಳ ನೀರು ಸೇವನೆ ಹೆಚ್ಚಿಸುವುದು
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…