Andolana originals

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ

ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ 

ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ ತಂಪಾದ ವಾತಾವರಣ ಹೊಂದಿರುವ ಕೊಡಗು ಜಿಲ್ಲೆಯಲ್ಲಿಯೂ ತಾಪಮಾನ ಹೆಚ್ಚುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಿಸಿಲಿನ ತಾಪ ೩೧ ಡಿಗ್ರಿ ದಾಟುತ್ತಿದ್ದು, ಬಿಸಿಲಿನ ಉರಿಗೆ ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಆದರೆ, ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಇಲ್ಲಿ ಹೀಟ್ ಸ್ಟ್ರೋಕ್‌ನಂತಹ ಸಮಸ್ಯೆ ಸಂಭವಿಸುವ ಸಾಧ್ಯತೆ ಕಡಿಮೆ ಇದೆ. ಆದರೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲಿನ ಜತೆಗೆ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಆತಂಕವೂ ಇದೆ.

ಬಿಸಿಲಿನೊಂದಿಗೆ ಮಳೆಯಾಗುಗುವುದರರಿಂದ ಅಲ್ಲಲ್ಲಿ ನೀರು ಸಂಗ್ರಹವಾಗಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೊಳ್ಳೆಗಳು ಹೆಚ್ಚಾಗದಿರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆಯಿಂದ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಈ ಹಿಂದೆ ಹೆಚ್ಚಿನ ಡೆಂಗ್ಯು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ ಈ ಬಾರಿ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ. ಈ ಸಂಬಂಧ ಆತಂಕಪಡುವ ಅಗತ್ಯವಿಲ್ಲ. ಆದರೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಹೇಳಿದ್ದಾರೆ.

ಇನ್ನು ಬೇಸಿಗೆ ಬಿಸಿಲಿಗೆ ಕೇವಲ ಬಳಲಿಕೆ ಮಾತ್ರವಲ್ಲ, ನಿಧಾನವಾಗಿ ಕಾಯಿಲೆಗಳೂ ಬರುವ ಸಾಧ್ಯತೆ ಇದೆ. ಸೂಕ್ತ ರೀತಿಯಲ್ಲಿ ಮುಂಜಾಗ್ರತೆ ವಹಿಸದೇ ಇದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಾಮಾನ್ಯವಾಗಿ ವಾಂತಿ, ಭೇದಿ ಕಾಣಿಸಿಕೊಂಡಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬೇಕು. ಜೊತೆಗೆ ಬೇಸಿಗೆಯ ಸಂದರ್ಭದಲ್ಲಿ ಆಹಾರ, ಪರಿಸರದ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂಬುದು ಆರೋಗ್ಯ ಅಧಿಕಾರಿಗಳ ಸಲಹೆಯಾಗಿದೆ.

ಮುನ್ನೆಚ್ಚರಿಕೆ ಕ್ರಮಗಳು:

* ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು

* ತೆರೆದಿಟ್ಟ ಆಹಾರ ಪದಾರ್ಥ ಸೇವನೆ ಬೇಡ

* ಆಹಾರ ಪದಾರ್ಥಗಳನ್ನು ಜಿರಲೆ, ನೊಣಗಳಿಂದ ರಕ್ಷಿಸಿ ಇಡಬೇಕು

* ವಾಂತಿ, ಭೇದಿ ಕಾಣಿಸಿಕೊಂಡರೆ ತಕ್ಷಣವೇ ವೈದ್ಯರ ಸಲಹೆ ಪಡೆಯಬೇಕು

* ಬಿಸಿ ಇರುವ ಆಹಾರವನ್ನೇ ಸೇವಿಸಬೇಕು

* ಮೀನು, ಮಾಂಸವನ್ನು ಸಮರ್ಪಕವಾಗಿ ಬೇಯಿಸಿ ತಿನ್ನಬೇಕು.

* ಸೊಳ್ಳೆ, ನೊಣಗಳಿಂದ ರಕ್ಷಿಸಿಕೊಳ್ಳಬೇಕು

* ಎಳನೀರು, ಓಆರ್‌ಎಸ್, ತಾಜಾ ಹಣ್ಣಿನ ರಸ, ಮಜ್ಜಿಗೆಯನ್ನು ಸೇವಿಸಬೇಕು

* ವಾಂತಿ ಭೇದಿ ಕಂಡುಬಂದಾಗ ಮೂಢನಂಬಿಕೆಗಳನ್ನು ಅನುಸರಿಸಬಾರದು

” ಬೇಸಿಗೆಯಲ್ಲಿ ವಾಂತಿ ಭೇದಿ ಯಂತಹ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಸದ್ಯ ಜಿಲ್ಲೆ ಯಲ್ಲಿ ಇಂತಹ ಯಾವುದೇ ಪ್ರಕರಣ ಕಂಡುಬಂದಿಲ್ಲ. ಸಭೆ ಸಮಾರಂಭಗಳಿಗೆ ನೀರಿನ ಬಳಕೆ ವೇಳೆ ಎಚ್ಚರವಹಿಸಬೇಕು. ಈ ಸಂಬಂಧ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜನ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಮನೆ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಹೆಚ್ಚಾಗಿ ನೀರು ಕುಡಿಯಬೇಕು.”

-ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago