ನವೀನ್ ಡಿಸೋಜ
ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ
ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ ತಂಪಾದ ವಾತಾವರಣ ಹೊಂದಿರುವ ಕೊಡಗು ಜಿಲ್ಲೆಯಲ್ಲಿಯೂ ತಾಪಮಾನ ಹೆಚ್ಚುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಬಿಸಿಲಿನ ತಾಪ ೩೧ ಡಿಗ್ರಿ ದಾಟುತ್ತಿದ್ದು, ಬಿಸಿಲಿನ ಉರಿಗೆ ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಆದರೆ, ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಇಲ್ಲಿ ಹೀಟ್ ಸ್ಟ್ರೋಕ್ನಂತಹ ಸಮಸ್ಯೆ ಸಂಭವಿಸುವ ಸಾಧ್ಯತೆ ಕಡಿಮೆ ಇದೆ. ಆದರೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲಿನ ಜತೆಗೆ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಆತಂಕವೂ ಇದೆ.
ಬಿಸಿಲಿನೊಂದಿಗೆ ಮಳೆಯಾಗುಗುವುದರರಿಂದ ಅಲ್ಲಲ್ಲಿ ನೀರು ಸಂಗ್ರಹವಾಗಿ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೊಳ್ಳೆಗಳು ಹೆಚ್ಚಾಗದಿರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆಯಿಂದ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಈ ಹಿಂದೆ ಹೆಚ್ಚಿನ ಡೆಂಗ್ಯು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ ಈ ಬಾರಿ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ. ಈ ಸಂಬಂಧ ಆತಂಕಪಡುವ ಅಗತ್ಯವಿಲ್ಲ. ಆದರೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಹೇಳಿದ್ದಾರೆ.
ಇನ್ನು ಬೇಸಿಗೆ ಬಿಸಿಲಿಗೆ ಕೇವಲ ಬಳಲಿಕೆ ಮಾತ್ರವಲ್ಲ, ನಿಧಾನವಾಗಿ ಕಾಯಿಲೆಗಳೂ ಬರುವ ಸಾಧ್ಯತೆ ಇದೆ. ಸೂಕ್ತ ರೀತಿಯಲ್ಲಿ ಮುಂಜಾಗ್ರತೆ ವಹಿಸದೇ ಇದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಾಮಾನ್ಯವಾಗಿ ವಾಂತಿ, ಭೇದಿ ಕಾಣಿಸಿಕೊಂಡಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬೇಕು. ಜೊತೆಗೆ ಬೇಸಿಗೆಯ ಸಂದರ್ಭದಲ್ಲಿ ಆಹಾರ, ಪರಿಸರದ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂಬುದು ಆರೋಗ್ಯ ಅಧಿಕಾರಿಗಳ ಸಲಹೆಯಾಗಿದೆ.
ಮುನ್ನೆಚ್ಚರಿಕೆ ಕ್ರಮಗಳು:
* ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು
* ತೆರೆದಿಟ್ಟ ಆಹಾರ ಪದಾರ್ಥ ಸೇವನೆ ಬೇಡ
* ಆಹಾರ ಪದಾರ್ಥಗಳನ್ನು ಜಿರಲೆ, ನೊಣಗಳಿಂದ ರಕ್ಷಿಸಿ ಇಡಬೇಕು
* ವಾಂತಿ, ಭೇದಿ ಕಾಣಿಸಿಕೊಂಡರೆ ತಕ್ಷಣವೇ ವೈದ್ಯರ ಸಲಹೆ ಪಡೆಯಬೇಕು
* ಬಿಸಿ ಇರುವ ಆಹಾರವನ್ನೇ ಸೇವಿಸಬೇಕು
* ಮೀನು, ಮಾಂಸವನ್ನು ಸಮರ್ಪಕವಾಗಿ ಬೇಯಿಸಿ ತಿನ್ನಬೇಕು.
* ಸೊಳ್ಳೆ, ನೊಣಗಳಿಂದ ರಕ್ಷಿಸಿಕೊಳ್ಳಬೇಕು
* ಎಳನೀರು, ಓಆರ್ಎಸ್, ತಾಜಾ ಹಣ್ಣಿನ ರಸ, ಮಜ್ಜಿಗೆಯನ್ನು ಸೇವಿಸಬೇಕು
* ವಾಂತಿ ಭೇದಿ ಕಂಡುಬಂದಾಗ ಮೂಢನಂಬಿಕೆಗಳನ್ನು ಅನುಸರಿಸಬಾರದು
” ಬೇಸಿಗೆಯಲ್ಲಿ ವಾಂತಿ ಭೇದಿ ಯಂತಹ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಸದ್ಯ ಜಿಲ್ಲೆ ಯಲ್ಲಿ ಇಂತಹ ಯಾವುದೇ ಪ್ರಕರಣ ಕಂಡುಬಂದಿಲ್ಲ. ಸಭೆ ಸಮಾರಂಭಗಳಿಗೆ ನೀರಿನ ಬಳಕೆ ವೇಳೆ ಎಚ್ಚರವಹಿಸಬೇಕು. ಈ ಸಂಬಂಧ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜನ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಮನೆ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಹೆಚ್ಚಾಗಿ ನೀರು ಕುಡಿಯಬೇಕು.”
-ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…