Andolana originals

ಟ್ರಾಫಿಕ್‌ ಸಮಸ್ಯೆಗೆ ತಾತ್ಕಾಲಿಕ ಮುಕ್ತಿ

ನಿಯಮ ಪಾಲನೆಗೆ ಖಡಕ್ ಸೂಚನೆ: ಇಲಾಖೆ ನಡೆಗೆ ಸಾರ್ವಜನಿಕರು ಮೆಚ್ಚುಗೆ 

ಸಿದ್ದಾಪುರ: ಸಿದ್ದಾಪುರ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದ ಜನರಿಗೆ ಇಲಾಖೆ ತೆಗದುಕೊಂಡ ಕಟ್ಟುನಿಟ್ಟಿನ ಕ್ರಮದಿಂದ ತಾತ್ಕಾಲಿಕ ಮುಕ್ತಿ ಸಿಕ್ಕಂತಾಗಿದೆ.

ಹೌದು, ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿರುವ ಪಟ್ಟಣಕ್ಕೆ ಪ್ರತಿನಿತ್ಯ ಸಾವಿರಾರು ವಾಹನಗಳು ಬರುತ್ತಿದ್ದು, ಟ್ರಾಫಿಕ್ ಸಮಸ್ಯೆಯಿಂದ ಜನ ಹೈರಾಣಾಗಿದ್ದರು. ಸಿದ್ದಾಪುರ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿ ಮಂಜುನಾಥ್ ಅಧಿಕಾರ ಸ್ವೀಕರಿಸಿದ ತಕ್ಷಣ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರ ಭಾಗವಾಗಿ ಟ್ರಾಫಿಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರೆತ್ತಿದ್ದು, ಅಧಿಕಾರಿಗಳ ನಡೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ವಾಹನ ಚಾಲಕರ ಸಭೆ ನಡೆಸಿದ ಅಧಿಕಾರಿ ವಾಹನ ಚಾಲಕರು ತಮ್ಮ ದಾಖಲೆ ಪತ್ರಗಳಾದ ಚಾಲನಾ ಪರವಾನಗಿ, ವಾಹನ ವಿಮೆ ದಾಖಲಾತಿ, ಮಾಲಿನ್ಯ ತಪಾಸಣೆ ದಾಖಲಾತಿ, ಟ್ಯಾಕ್ಸಿ ಚಾಲಕರು ಸಮವಸ್ತ್ರ ಧರಿಸುವುದು, ದ್ವಿಚಕ್ರ ವಾಹನ ಚಾಲಕರು ಹೆಲ್ಮೆಟ್ ಕಡ್ಡಾಯವಾಗಿ ಧರಿಸುವುದು ಹಾಗೂ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಿದರು. ದಾಖಲೆ ಪತ್ರ ಸರಿಪಡಿಸಿಕೊಳ್ಳಲು ಹದಿನೈದು ದಿನಗಳ ಗಡುವು ನೀಡಿದ್ದು, ತಪ್ಪಿದಲ್ಲಿ ಬಾರಿ ಮೊತ್ತದ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.

ಪಟ್ಟಣದಲ್ಲಿ ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಥಳದ ಕೊರತೆ ಇದ್ದು, ಇರುವ ಸ್ಥಳದಲ್ಲಿ ಚಾಲಕರು ಗಾಡಿಗಳನ್ನು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ಸಮಸ್ಯೆ ಸೃಷ್ಟಿಯಾಗಿತ್ತು. ಸಿಬ್ಬಂದಿ ಕೊರತೆಯ ನಡುವೆಯೂ ಇರುವ ಸಿಬ್ಬಂದಿಗಳ ನೇತೃತ್ವದಲ್ಲಿ ಸಂತೆ ದಿನವಾದ ಭಾನುವಾರದಂದು ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

ಈ ಹಿಂದೆ ಪಟ್ಟಣದ ಮಧ್ಯೆ ಎಲ್ಲೆಂದರಲ್ಲಿ ಆಟೋ ಚಾಲಕರು ಸವಾರರನ್ನು ತಾವೇ ಕೂಗಿ ಕರೆದು ಕೂರಿಸಿಕೊಂಡು ಹೋಗಲಾಗುತ್ತಿದ್ದು ಇದಕ್ಕೆ ತಡೆ ನೀಡಿದ ಠಾಣಾಧಿಕಾರಿ, ಆಟೋ ಚಾಲಕರು ತಮ್ಮ ನಿಲ್ದಾಣಗಳಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ಹೋಗಬೇಕೆಂದು ತಾಕೀತು ಮಾಡಿದರು. ಇವರ ನಿರ್ಧಾರಗಳಿಗೆ ಸಂತೆ ದಿನವಾದ ಭಾನುವಾರದಂದು ಸೂಕ್ತ ಸ್ಪಂದನೆ ದೊರೆತಿದೆ. ಬೆಳಿಗ್ಗೆಯಿಂದಲೇ ಪೊಲೀಸ್ ತಂಡ ಸಿದ್ದಾಪುರ, ನೆಲ್ಯಾಹುದಿಕೇರಿ ಪಟ್ಟಣದಲ್ಲಿ ನಿಯಮ ಪಾಲಿಸದವರಿಗೆ ಖಡಕ್ ಸೂಚನೆ ನೀಡಿತು.

ಖಾಸಗಿ ವಾಹನಗಳು ತಮಗೆ ನಿಗದಿಪಡಿಸಿದ ಸ್ಥಳದಲ್ಲಿ ಸರತಿ ಸಾಲಿನಲ್ಲಿ ಅಚ್ಚುಕಟ್ಟಾಗಿ ನಿಲ್ಲಿಸಿದ್ದರಿಂದ ಗ್ರಾಹಕರು ಸುಗಮವಾಗಿ ನಿರ್ಭೀತಿಯಿಂದ ದಿನಸಿ ಖರೀದಿಸಿ ಮನೆ ತೆರಳಿದರು. ಮುಂದಿನ ದಿನಗಳಲ್ಲಿ ಇದೇ ರೀತಿ ಅಧಿಕಾರಿಗಳು ಕರ್ತವ್ಯ ನಿಭಾಯಿಸಿದಲ್ಲಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ದೊರಕುವ ವಿಶ್ವಾಸವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದರು.

“ವರ್ತಕರು ಪಾದಾಚಾರಿ ರಸ್ತೆಗಳ ಮೇಲೆ ತಮ್ಮ ವ್ಯಾಪಾರ ಸಾಮಗ್ರಿಗಳ ಜೋಡಣೆ ಮಾಡುತ್ತಿದ್ದಾರೆ, ಅಂಗಡಿ ಮಾಲೀಕರು ತಮ್ಮ ವಾಹನಗಳನ್ನು ಮಳಿಗೆ ಮುಂದೆಯೇ ನಿಲ್ಲಿಸುತ್ತಿದ್ದಾರೆ. ನಾಲ್ಕು ಚಕ್ರ ವಾಹನಗಳ ನಿಲುಗಡೆ ಸ್ಥಳದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಲಾಗುತ್ತಿದ್ದು, ಇವುಗಳ ಬಗ್ಗೆ ಮುಂದಿನ ದಿನಗಳಲ್ಲಿ ಸಭೆ ಕರೆದು ಮಾಹಿತಿ ನೀಡಲಾಗುವುದು. ಯಾವುದೇ ವಾಹನವು ೧.೩೦ ಗಂಟೆಗಿಂತ ಹೆಚ್ಚು ಸಮಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದಲ್ಲಿ ದಂಡ ವಿಧಿಸಲಾಗುವುದು. ಪದೇ ಪದೇ ತಪ್ಪುಗಳು ಮರುಕಳಿಸುತ್ತಿದ್ದಲ್ಲಿ ಅಂತಹ ವಾಹನವನ್ನು ನಿಯಮಾನುಸಾರ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.”  – ಮಂಜುನಾಥ್, ಸಬ್‌ಇನ್‌ಸ್ಪೆಕ್ಟರ್, ಸಿದ್ದಾಪುರ ಪೊಲೀಸ್ ಠಾಣೆ

“ಟ್ರಾಫಿಕ್ ನಿಯಂತ್ರಣಕ್ಕೆ ಠಾಣಾಧಿಕಾರಿ ಕೈಗೊಂಡ ನಿರ್ಧಾರ ಸ್ವಾಗತಾರ್ಹ. ಪಟ್ಟಣದ ರಸ್ತೆ ಅಗಲೀಕರಣವಾಗದ ಕಾರಣ ದಿನದಿಂದ ದಿನಕ್ಕೆ ವಾಹನ ಸಂಖ್ಯೆಯು ಹೆಚ್ಚುತ್ತಿರುವುದರಿಂದ ನಿಲುಗಡೆಗೆ ಸಮಸ್ಯೆ ಉಂಟಾಗಿದ್ದು, ಇಲಾಖೆ ಕ್ರಮಗಳಿಗೆ ಚಾಲಕರು ಸಹಕರಿಸಲಿದ್ದೇವೆ.”  – ಸುರೇಶ್, ಜಿಲ್ಲಾ ಸಂಚಾಲಕರು, ಕರ್ನಾಟಕ ಚಾಲಕರ ಒಕ್ಕೂಟ

– ಕೃಷ್ಣ ಸಿದ್ದಾಪುರ

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago