Andolana originals

ಕೋಟೆ ಪುರಸಭೆಯ ಸದಸ್ಯರ ಅಧಿಕಾರ ಅವಧಿ ಅಂತ್ಯ

ಮಂಜು ಕೋಟೆ

ಏಳು ವರ್ಷಗಳ ಕಾಲ ಜನಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿದ ಪುರಸಭೆ ಸದಸ್ಯರು 

ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ೨೩ ಚುನಾಯಿತ ಪ್ರತಿನಿಧಿಗಳ ಐದು ವರ್ಷಗಳ ಆಡಳಿತ ಅವಧಿ ಶನಿವಾರ ಮುಕ್ತಾಯಗೊಂಡಿತು.

ಏಳು ವರ್ಷಗಳ ಹಿಂದೆ ಪುರಸಭೆ ವ್ಯಾಪ್ತಿಯ ೨೩ ವಾರ್ಡುಗಳಲ್ಲಿ ಕಾಂಗ್ರೆಸ್,ಜಾ.ದಳ, ಬಿಜೆಪಿ, ಬಿಎಸ್ಪಿ, ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿ ೨೩ ಮಂದಿಪುರಸಭೆಯ ಸದಸ್ಯರುಗಳಾಗಿ ಆಯ್ಕೆಯಾಗಿದ್ದರು.

ಅಂದಿನಿಂದ ಎರಡು ವರ್ಷಗಳ ಕಾಲ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿಯನ್ನು ಸರ್ಕಾರ ನಾನಾ ಕಾರಣಗಳಿಂದಾಗಿ ಪ್ರಕಟಿಸಿರಲಿಲ್ಲ. ಐದು ವರ್ಷಗಳ ಹಿಂದೆ ಪ್ರಕಟಿಸಿದ್ದಮೀಸಲಾತಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಅತಿ ಹೆಚ್ಚು ಇದ್ದರೂ ಎಸ್‌ಟಿ ಮಹಿಳೆ ಮೀಸಲಾತಿ ಅಭ್ಯರ್ಥಿಜಾ.ದಳದಲ್ಲಿ ಮಾತ್ರ ಇದ್ದುದ್ದರಿಂದ ಶಿವಮ್ಮ ಚಾಕಹಳ್ಳಿ ಕೃಷ್ಣ, ಸರೋಜಮ್ಮ ಸೂರಿ, ಅನಿತಾ ನಿಂಗನಾಯಕ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಗೀತ ಗಿರಿಗೌಡ, ಆಸಿಫ್ ಇಕ್ಬಾಲ್, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನರಸಿಂಹಮೂರ್ತಿ,ಐಡಿಯಾ ವೆಂಕಟೇಶ್, ಮಧುಕುಮಾರ್ ಅವರು ಕಾರ್ಯನಿರ್ವಹಿಸಿದ್ದಾರೆ.

ಪುರಸಭೆ ವ್ಯಾಪ್ತಿಯು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಸಮಸ್ಯೆಗಳು ಹೆಚ್ಚಾಗಿವೆ. ಕೆಲಸ ನಿರ್ವಹಿಸಿದ ಸದಸ್ಯರು ಪುರಸಭೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸಿದರೂ ಕೆಲವೊಂದು ಕೆಲಸ ಕಾರ್ಯಗಳನ್ನು ಮಾತ್ರ ಮಾಡಲು ಸಾಧ್ಯವಾಗಿದೆ. ಕೆಲವರು ಸಕ್ರಿಯವಾಗಿ ಕೆಲಸ ನಿರ್ವಹಿಸಿದರೆ ಮತ್ತೆ ಕೆಲವರು ಜನಸಾಮಾನ್ಯರ ಮತ್ತು ವಾರ್ಡ್‌ಗಳ ಸೌಕರ್ಯಗಳಕುರಿತು ಚಿಂತನೆ ಮಾಡಲಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸದಸ್ಯರುಗಳ ಅವಧಿ ಪೂರ್ಣ ಗೊಂಡಿರುವುದರಿಂದ ಮತ್ತೆ ಚುನಾವಣೆಯಲ್ಲಿ ಕೆಲವರು ಸ್ಪರ್ಧಿಸಲು ಮುಂದಾಗಿದ್ದರೆ, ಬಹುತೇಕ ಹೊಸ ಮುಖಗಳು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಆಶಾಭಾವನೆಯನ್ನು ಇಟ್ಟುಕೊಂಡಿದ್ದಾರೆ.

೨೩ ಜನ ಸದಸ್ಯರ ಕಾರ್ಯವೈಖರಿಯನ್ನು ಕಂಡಿರುವ ಸಾರ್ವಜನಿಕರು, ಮುಂದಿನ ದಿನಗಳಲ್ಲಿ ವಾರ್ಡಿಗೆಸೂಕ್ತವಾದ ಸದಸ್ಯರು ಯಾರು ಎಂಬುದನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಲೋಚನೆ ನಡೆಸುತ್ತಿದ್ದಾರೆ. ೭ ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಾಗಿ ಕೆಲಸ ನಿರ್ವಹಿಸಿದ ಏಕೈಕ ಪುರಸಭಾ ಸದಸ್ಯರುಗಳೆಂಬ ಹೆಗ್ಗಳಿಕೆ ಕೋಟೆ ಪುರಸಭೆ ಸದಸ್ಯರದ್ದಾಗಿದೆ.

” ಪುರಸಭಾ ಸದಸ್ಯರ ಅವಧಿ ಪೂರ್ಣಗೊಂಡಿದೆ. ಜಿಲ್ಲಾಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲಿದ್ದಾರೆ. ಎಂದಿನಂತೆ ಎಲ್ಲಾ ಕೆಲಸ ಕಾರ್ಯಗಳು ಸಹ ಅವರ ಮುಖಾಂತರ ನಡೆಯಲಿವೆ.”

-ಪ್ರಿಯದರ್ಶಿನಿ, ಪುರಸಭೆ ಮತ್ತು ಪಪಂಗಳ ಯೋಜನಾ ನಿರ್ದೇಶಕರು

ಆಂದೋಲನ ಡೆಸ್ಕ್

Recent Posts

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

14 mins ago

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

35 mins ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

1 hour ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

3 hours ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

3 hours ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

3 hours ago