Andolana originals

ಕೋಟೆ ಪುರಸಭೆಯ ಸದಸ್ಯರ ಅಧಿಕಾರ ಅವಧಿ ಅಂತ್ಯ

ಮಂಜು ಕೋಟೆ

ಏಳು ವರ್ಷಗಳ ಕಾಲ ಜನಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿದ ಪುರಸಭೆ ಸದಸ್ಯರು 

ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ೨೩ ಚುನಾಯಿತ ಪ್ರತಿನಿಧಿಗಳ ಐದು ವರ್ಷಗಳ ಆಡಳಿತ ಅವಧಿ ಶನಿವಾರ ಮುಕ್ತಾಯಗೊಂಡಿತು.

ಏಳು ವರ್ಷಗಳ ಹಿಂದೆ ಪುರಸಭೆ ವ್ಯಾಪ್ತಿಯ ೨೩ ವಾರ್ಡುಗಳಲ್ಲಿ ಕಾಂಗ್ರೆಸ್,ಜಾ.ದಳ, ಬಿಜೆಪಿ, ಬಿಎಸ್ಪಿ, ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿ ೨೩ ಮಂದಿಪುರಸಭೆಯ ಸದಸ್ಯರುಗಳಾಗಿ ಆಯ್ಕೆಯಾಗಿದ್ದರು.

ಅಂದಿನಿಂದ ಎರಡು ವರ್ಷಗಳ ಕಾಲ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿಯನ್ನು ಸರ್ಕಾರ ನಾನಾ ಕಾರಣಗಳಿಂದಾಗಿ ಪ್ರಕಟಿಸಿರಲಿಲ್ಲ. ಐದು ವರ್ಷಗಳ ಹಿಂದೆ ಪ್ರಕಟಿಸಿದ್ದಮೀಸಲಾತಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಅತಿ ಹೆಚ್ಚು ಇದ್ದರೂ ಎಸ್‌ಟಿ ಮಹಿಳೆ ಮೀಸಲಾತಿ ಅಭ್ಯರ್ಥಿಜಾ.ದಳದಲ್ಲಿ ಮಾತ್ರ ಇದ್ದುದ್ದರಿಂದ ಶಿವಮ್ಮ ಚಾಕಹಳ್ಳಿ ಕೃಷ್ಣ, ಸರೋಜಮ್ಮ ಸೂರಿ, ಅನಿತಾ ನಿಂಗನಾಯಕ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಗೀತ ಗಿರಿಗೌಡ, ಆಸಿಫ್ ಇಕ್ಬಾಲ್, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನರಸಿಂಹಮೂರ್ತಿ,ಐಡಿಯಾ ವೆಂಕಟೇಶ್, ಮಧುಕುಮಾರ್ ಅವರು ಕಾರ್ಯನಿರ್ವಹಿಸಿದ್ದಾರೆ.

ಪುರಸಭೆ ವ್ಯಾಪ್ತಿಯು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಸಮಸ್ಯೆಗಳು ಹೆಚ್ಚಾಗಿವೆ. ಕೆಲಸ ನಿರ್ವಹಿಸಿದ ಸದಸ್ಯರು ಪುರಸಭೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸಿದರೂ ಕೆಲವೊಂದು ಕೆಲಸ ಕಾರ್ಯಗಳನ್ನು ಮಾತ್ರ ಮಾಡಲು ಸಾಧ್ಯವಾಗಿದೆ. ಕೆಲವರು ಸಕ್ರಿಯವಾಗಿ ಕೆಲಸ ನಿರ್ವಹಿಸಿದರೆ ಮತ್ತೆ ಕೆಲವರು ಜನಸಾಮಾನ್ಯರ ಮತ್ತು ವಾರ್ಡ್‌ಗಳ ಸೌಕರ್ಯಗಳಕುರಿತು ಚಿಂತನೆ ಮಾಡಲಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸದಸ್ಯರುಗಳ ಅವಧಿ ಪೂರ್ಣ ಗೊಂಡಿರುವುದರಿಂದ ಮತ್ತೆ ಚುನಾವಣೆಯಲ್ಲಿ ಕೆಲವರು ಸ್ಪರ್ಧಿಸಲು ಮುಂದಾಗಿದ್ದರೆ, ಬಹುತೇಕ ಹೊಸ ಮುಖಗಳು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಆಶಾಭಾವನೆಯನ್ನು ಇಟ್ಟುಕೊಂಡಿದ್ದಾರೆ.

೨೩ ಜನ ಸದಸ್ಯರ ಕಾರ್ಯವೈಖರಿಯನ್ನು ಕಂಡಿರುವ ಸಾರ್ವಜನಿಕರು, ಮುಂದಿನ ದಿನಗಳಲ್ಲಿ ವಾರ್ಡಿಗೆಸೂಕ್ತವಾದ ಸದಸ್ಯರು ಯಾರು ಎಂಬುದನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಲೋಚನೆ ನಡೆಸುತ್ತಿದ್ದಾರೆ. ೭ ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಾಗಿ ಕೆಲಸ ನಿರ್ವಹಿಸಿದ ಏಕೈಕ ಪುರಸಭಾ ಸದಸ್ಯರುಗಳೆಂಬ ಹೆಗ್ಗಳಿಕೆ ಕೋಟೆ ಪುರಸಭೆ ಸದಸ್ಯರದ್ದಾಗಿದೆ.

” ಪುರಸಭಾ ಸದಸ್ಯರ ಅವಧಿ ಪೂರ್ಣಗೊಂಡಿದೆ. ಜಿಲ್ಲಾಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲಿದ್ದಾರೆ. ಎಂದಿನಂತೆ ಎಲ್ಲಾ ಕೆಲಸ ಕಾರ್ಯಗಳು ಸಹ ಅವರ ಮುಖಾಂತರ ನಡೆಯಲಿವೆ.”

-ಪ್ರಿಯದರ್ಶಿನಿ, ಪುರಸಭೆ ಮತ್ತು ಪಪಂಗಳ ಯೋಜನಾ ನಿರ್ದೇಶಕರು

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago