Andolana originals

ಕೋಟೆ ಪುರಸಭೆಯ ಸದಸ್ಯರ ಅಧಿಕಾರ ಅವಧಿ ಅಂತ್ಯ

ಮಂಜು ಕೋಟೆ

ಏಳು ವರ್ಷಗಳ ಕಾಲ ಜನಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿದ ಪುರಸಭೆ ಸದಸ್ಯರು 

ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ೨೩ ಚುನಾಯಿತ ಪ್ರತಿನಿಧಿಗಳ ಐದು ವರ್ಷಗಳ ಆಡಳಿತ ಅವಧಿ ಶನಿವಾರ ಮುಕ್ತಾಯಗೊಂಡಿತು.

ಏಳು ವರ್ಷಗಳ ಹಿಂದೆ ಪುರಸಭೆ ವ್ಯಾಪ್ತಿಯ ೨೩ ವಾರ್ಡುಗಳಲ್ಲಿ ಕಾಂಗ್ರೆಸ್,ಜಾ.ದಳ, ಬಿಜೆಪಿ, ಬಿಎಸ್ಪಿ, ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿ ೨೩ ಮಂದಿಪುರಸಭೆಯ ಸದಸ್ಯರುಗಳಾಗಿ ಆಯ್ಕೆಯಾಗಿದ್ದರು.

ಅಂದಿನಿಂದ ಎರಡು ವರ್ಷಗಳ ಕಾಲ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿಯನ್ನು ಸರ್ಕಾರ ನಾನಾ ಕಾರಣಗಳಿಂದಾಗಿ ಪ್ರಕಟಿಸಿರಲಿಲ್ಲ. ಐದು ವರ್ಷಗಳ ಹಿಂದೆ ಪ್ರಕಟಿಸಿದ್ದಮೀಸಲಾತಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಅತಿ ಹೆಚ್ಚು ಇದ್ದರೂ ಎಸ್‌ಟಿ ಮಹಿಳೆ ಮೀಸಲಾತಿ ಅಭ್ಯರ್ಥಿಜಾ.ದಳದಲ್ಲಿ ಮಾತ್ರ ಇದ್ದುದ್ದರಿಂದ ಶಿವಮ್ಮ ಚಾಕಹಳ್ಳಿ ಕೃಷ್ಣ, ಸರೋಜಮ್ಮ ಸೂರಿ, ಅನಿತಾ ನಿಂಗನಾಯಕ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಗೀತ ಗಿರಿಗೌಡ, ಆಸಿಫ್ ಇಕ್ಬಾಲ್, ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನರಸಿಂಹಮೂರ್ತಿ,ಐಡಿಯಾ ವೆಂಕಟೇಶ್, ಮಧುಕುಮಾರ್ ಅವರು ಕಾರ್ಯನಿರ್ವಹಿಸಿದ್ದಾರೆ.

ಪುರಸಭೆ ವ್ಯಾಪ್ತಿಯು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಸಮಸ್ಯೆಗಳು ಹೆಚ್ಚಾಗಿವೆ. ಕೆಲಸ ನಿರ್ವಹಿಸಿದ ಸದಸ್ಯರು ಪುರಸಭೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಶ್ರಮಿಸಿದರೂ ಕೆಲವೊಂದು ಕೆಲಸ ಕಾರ್ಯಗಳನ್ನು ಮಾತ್ರ ಮಾಡಲು ಸಾಧ್ಯವಾಗಿದೆ. ಕೆಲವರು ಸಕ್ರಿಯವಾಗಿ ಕೆಲಸ ನಿರ್ವಹಿಸಿದರೆ ಮತ್ತೆ ಕೆಲವರು ಜನಸಾಮಾನ್ಯರ ಮತ್ತು ವಾರ್ಡ್‌ಗಳ ಸೌಕರ್ಯಗಳಕುರಿತು ಚಿಂತನೆ ಮಾಡಲಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸದಸ್ಯರುಗಳ ಅವಧಿ ಪೂರ್ಣ ಗೊಂಡಿರುವುದರಿಂದ ಮತ್ತೆ ಚುನಾವಣೆಯಲ್ಲಿ ಕೆಲವರು ಸ್ಪರ್ಧಿಸಲು ಮುಂದಾಗಿದ್ದರೆ, ಬಹುತೇಕ ಹೊಸ ಮುಖಗಳು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಆಶಾಭಾವನೆಯನ್ನು ಇಟ್ಟುಕೊಂಡಿದ್ದಾರೆ.

೨೩ ಜನ ಸದಸ್ಯರ ಕಾರ್ಯವೈಖರಿಯನ್ನು ಕಂಡಿರುವ ಸಾರ್ವಜನಿಕರು, ಮುಂದಿನ ದಿನಗಳಲ್ಲಿ ವಾರ್ಡಿಗೆಸೂಕ್ತವಾದ ಸದಸ್ಯರು ಯಾರು ಎಂಬುದನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಲೋಚನೆ ನಡೆಸುತ್ತಿದ್ದಾರೆ. ೭ ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಾಗಿ ಕೆಲಸ ನಿರ್ವಹಿಸಿದ ಏಕೈಕ ಪುರಸಭಾ ಸದಸ್ಯರುಗಳೆಂಬ ಹೆಗ್ಗಳಿಕೆ ಕೋಟೆ ಪುರಸಭೆ ಸದಸ್ಯರದ್ದಾಗಿದೆ.

” ಪುರಸಭಾ ಸದಸ್ಯರ ಅವಧಿ ಪೂರ್ಣಗೊಂಡಿದೆ. ಜಿಲ್ಲಾಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲಿದ್ದಾರೆ. ಎಂದಿನಂತೆ ಎಲ್ಲಾ ಕೆಲಸ ಕಾರ್ಯಗಳು ಸಹ ಅವರ ಮುಖಾಂತರ ನಡೆಯಲಿವೆ.”

-ಪ್ರಿಯದರ್ಶಿನಿ, ಪುರಸಭೆ ಮತ್ತು ಪಪಂಗಳ ಯೋಜನಾ ನಿರ್ದೇಶಕರು

ಆಂದೋಲನ ಡೆಸ್ಕ್

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

53 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

11 hours ago