Andolana originals

ಓದುಗರ ಪತ್ರ:  ಥೈಲ್ಯಾಂಡ್ ನ್ಯಾಯಾಲಯದ ಕ್ರಮ ಸ್ವಾಗತಾರ್ಹ

ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಕಾಂಬೋಡಿಯ ದೇಶದೊಂದಿಗಿನ ಗಡಿ ವಿವಾದವನ್ನು ನಿರ್ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಸಾಧಾರಣ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಒಂಬತ್ತು ಮಂದಿ ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠ, ಪ್ರಧಾನ ಮಂತ್ರಿ ಹುದ್ದೆಗೆ ಬೇಕಾದ ನೈತಿಕ ಮಾನದಂಡವನ್ನು ಶೈನವಾತ್ರ ಹೊಂದಿರಲಿಲ್ಲವೆಂದು ಹೇಳಿದೆ.

ಇದನ್ನು ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸ್ಯಾಂಡಲ್‌ವುಡ್‌ ಹಿರಿಯ ನಟಿಯರು: ಕಾರಣ ಇಷ್ಟೇ

ಈ ಮೂಲಕ ಪ್ರಧಾನ ಮಂತ್ರಿಯಂತಹ ಉನ್ನತ ಸ್ಥಾನ ಹೊಂದಿದವರೂ ಕಾನೂನಿನ ಮುಷ್ಠಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲವೆಂಬ ಸಂದೇಶ ನೀಡಿದೆ. ತನ್ಮೂಲಕ ನ್ಯಾಯಾಂಗಕ್ಕಿಂತ ದೊಡ್ಡವರು ಯಾರೂ ಇಲ್ಲವೆಂಬುದನ್ನು ಆ ದೇಶದ ನ್ಯಾಯಾಲಯ ಸ್ಪಷ್ಟಪಡಿಸಿರುವುದು ಸ್ವಾಗತಾರ್ಹ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

1 hour ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

1 hour ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

11 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago