Andolana originals

ಓದುಗರ ಪತ್ರ:  ಥೈಲ್ಯಾಂಡ್ ನ್ಯಾಯಾಲಯದ ಕ್ರಮ ಸ್ವಾಗತಾರ್ಹ

ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಕಾಂಬೋಡಿಯ ದೇಶದೊಂದಿಗಿನ ಗಡಿ ವಿವಾದವನ್ನು ನಿರ್ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಸಾಧಾರಣ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಒಂಬತ್ತು ಮಂದಿ ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠ, ಪ್ರಧಾನ ಮಂತ್ರಿ ಹುದ್ದೆಗೆ ಬೇಕಾದ ನೈತಿಕ ಮಾನದಂಡವನ್ನು ಶೈನವಾತ್ರ ಹೊಂದಿರಲಿಲ್ಲವೆಂದು ಹೇಳಿದೆ.

ಇದನ್ನು ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸ್ಯಾಂಡಲ್‌ವುಡ್‌ ಹಿರಿಯ ನಟಿಯರು: ಕಾರಣ ಇಷ್ಟೇ

ಈ ಮೂಲಕ ಪ್ರಧಾನ ಮಂತ್ರಿಯಂತಹ ಉನ್ನತ ಸ್ಥಾನ ಹೊಂದಿದವರೂ ಕಾನೂನಿನ ಮುಷ್ಠಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲವೆಂಬ ಸಂದೇಶ ನೀಡಿದೆ. ತನ್ಮೂಲಕ ನ್ಯಾಯಾಂಗಕ್ಕಿಂತ ದೊಡ್ಡವರು ಯಾರೂ ಇಲ್ಲವೆಂಬುದನ್ನು ಆ ದೇಶದ ನ್ಯಾಯಾಲಯ ಸ್ಪಷ್ಟಪಡಿಸಿರುವುದು ಸ್ವಾಗತಾರ್ಹ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

10 mins ago

ಕಾವೇರಿ ನದಿ ದಂಡೆಯಲ್ಲಿ ಹೆಚ್ಚುತ್ತಿರುವ ವಾಮಾಚಾರ

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ…

17 mins ago

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

8 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

9 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

9 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

9 hours ago