ಓದುಗರ ಪತ್ರ
ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಾಂಬೋಡಿಯ ದೇಶದೊಂದಿಗಿನ ಗಡಿ ವಿವಾದವನ್ನು ನಿರ್ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಸಾಧಾರಣ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಒಂಬತ್ತು ಮಂದಿ ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠ, ಪ್ರಧಾನ ಮಂತ್ರಿ ಹುದ್ದೆಗೆ ಬೇಕಾದ ನೈತಿಕ ಮಾನದಂಡವನ್ನು ಶೈನವಾತ್ರ ಹೊಂದಿರಲಿಲ್ಲವೆಂದು ಹೇಳಿದೆ.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸ್ಯಾಂಡಲ್ವುಡ್ ಹಿರಿಯ ನಟಿಯರು: ಕಾರಣ ಇಷ್ಟೇ
ಈ ಮೂಲಕ ಪ್ರಧಾನ ಮಂತ್ರಿಯಂತಹ ಉನ್ನತ ಸ್ಥಾನ ಹೊಂದಿದವರೂ ಕಾನೂನಿನ ಮುಷ್ಠಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲವೆಂಬ ಸಂದೇಶ ನೀಡಿದೆ. ತನ್ಮೂಲಕ ನ್ಯಾಯಾಂಗಕ್ಕಿಂತ ದೊಡ್ಡವರು ಯಾರೂ ಇಲ್ಲವೆಂಬುದನ್ನು ಆ ದೇಶದ ನ್ಯಾಯಾಲಯ ಸ್ಪಷ್ಟಪಡಿಸಿರುವುದು ಸ್ವಾಗತಾರ್ಹ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…