ಓದುಗರ ಪತ್ರ
ಥೈಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಪೇಟೊಂಗ್ಟಾರ್ನ್ ಶೈನವಾತ್ರ ಹಾಗೂ ಅವರ ಸಚಿವ ಸಂಪುಟವನ್ನು ಆ ದೇಶದ ಸಾಂವಿಧಾನಿಕ ನ್ಯಾಯಾಲಯ ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಾಂಬೋಡಿಯ ದೇಶದೊಂದಿಗಿನ ಗಡಿ ವಿವಾದವನ್ನು ನಿರ್ವಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಸಾಧಾರಣ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. ಒಂಬತ್ತು ಮಂದಿ ನ್ಯಾಯಾಧೀಶರನ್ನು ಒಳಗೊಂಡ ಸಾಂವಿಧಾನಿಕ ಪೀಠ, ಪ್ರಧಾನ ಮಂತ್ರಿ ಹುದ್ದೆಗೆ ಬೇಕಾದ ನೈತಿಕ ಮಾನದಂಡವನ್ನು ಶೈನವಾತ್ರ ಹೊಂದಿರಲಿಲ್ಲವೆಂದು ಹೇಳಿದೆ.
ಇದನ್ನು ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸ್ಯಾಂಡಲ್ವುಡ್ ಹಿರಿಯ ನಟಿಯರು: ಕಾರಣ ಇಷ್ಟೇ
ಈ ಮೂಲಕ ಪ್ರಧಾನ ಮಂತ್ರಿಯಂತಹ ಉನ್ನತ ಸ್ಥಾನ ಹೊಂದಿದವರೂ ಕಾನೂನಿನ ಮುಷ್ಠಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲವೆಂಬ ಸಂದೇಶ ನೀಡಿದೆ. ತನ್ಮೂಲಕ ನ್ಯಾಯಾಂಗಕ್ಕಿಂತ ದೊಡ್ಡವರು ಯಾರೂ ಇಲ್ಲವೆಂಬುದನ್ನು ಆ ದೇಶದ ನ್ಯಾಯಾಲಯ ಸ್ಪಷ್ಟಪಡಿಸಿರುವುದು ಸ್ವಾಗತಾರ್ಹ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…