Andolana originals

ಓದುಗರ ಪತ್ರ: ಜಿಲ್ಲಾಧಿಕಾರಿಗಳ ನಡೆ ಶ್ಲಾಘನೀಯ

ಹೆಚ್.ಡಿ.ಕೋಟೆ ಪುರಸಭೆ ಸದಸ್ಯರ ಮನೆ ಮುಂಭಾಗದಲ್ಲಿ ನಡೆದ ರಸ್ತೆ ಕಾಮಗಾರಿಯೇ ಕಳಪೆಯಿಂದ ಕೂಡಿದ್ದು, ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಪರಿಶೀಲನೆ ನಡೆಸಿ ಇಂಜಿನಿಯರನ್ನು ಅಮಾನತ್ತುಗೊಳಿಸಿರುವುದಾಗಿ ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದೆ. ಇದು ಜಿಲ್ಲಾಧಿಕಾರಿಗಳ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಇಂತಹ ಕೆಲಸಗಳಿಂದ ಅವರು ಸಾರ್ವಜನಿಕರ ವಿಶ್ವಾಸ ಗಳಿಸುವ ಜತೆಗೆ ಇತರೆ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿದಂತಾಗಿದೆ. ಬಹುತೇಕ ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಗೆ ಒಳಪಡುವ ರಸ್ತೆ, ಚರಂಡಿ ಹಾಗೂ ಇನ್ನಿತರ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು, ಇದರಿಂದ ಬೇಸತ್ತ ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುವಂತಾಗಿದೆ. ಮುಂದಿನ ದಿನಗಳಲ್ಲಿಯೂ ಕಾಮಗಾರಿಗಳು ನಡೆಯುವ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಇದೇ ರೀತಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ.
ಬಿ.ಎಸ್.ಸುನಿಲ್ ಕುಮಾರ್, ಬನ್ನೂರು, ತಿ.ನರಸೀಪುರ ತಾ.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

21 seconds ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

5 mins ago

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

11 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

11 hours ago