Andolana originals

ಹರಾಜಾಗಿದ್ದ ನಿವೇಶನ ಮತ್ತೊಬ್ಬರಿಗೆ ಮಂಜೂರು

ಕೆ. ಬಿ. ರಮೇಶನಾಯಕ
ಮೈಸೂರು: ೫೦:೫೦ ಅನುಪಾತದಡಿ ನಿವೇಶನ ಹಂಚಿಕೆ ಹಗರಣದಿಂದ ದೊಡ್ಡ ಸದ್ದು ಮಾಡುತ್ತಿ ರುವ ಮುಡಾದಲ್ಲಿ ಒಂದಿಲ್ಲೊಂದು ಅಕ್ರಮ ಹೊರ ಬರುತ್ತಲೇ ಇದ್ದು, ಇ-ಹರಾಜಿನಲ್ಲಿ ಖರೀದಿಸಿದ್ದ ಮುಡಾ ಕ್ರಯಪತ್ರ ಮಾಡಿಕೊಟ್ಟಿ ದ್ದರೂ, ಮತ್ತೊಬ್ಬರಿಗೆ ಅದನ್ನೇ ಬದಲಿ ನಿವೇಶನ ವನ್ನಾಗಿಯೂ ಮಂಜೂರು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮುಡಾ ಅಧಿಕಾರಿಗಳ ಕೈ ಚಳಕದಿಂದಾಗಿ ಇಂತಹದೊಂದು ಅಕ್ರಮ ನಡೆದಿದ್ದು, ಒಂದೇ ನಿವೇಶನಕ್ಕಾಗಿ ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸಿದ್ದ ಮಾಲೀಕ ಹಾಗೂ ಬದಲಿ ನಿವೇಶನ ವನ್ನಾಗಿಯೂ ಪಡೆದುಕೊಂಡಿರುವ ನಿವೇಶನ ದಾರರು ಹೋರಾಟ ಮಾಡುವಂತಾಗಿದೆ.

ನಗರದ ದಟ್ಟಗಳ್ಳಿಯ ನಿವಾಸಿ ಟಿ. ಪಿ. ಸುಹಾಸ್ ಅವರು ಮೈಸೂರು ನಗರಾಭಿವೃದ್ಧಿ ಪ್ರಾಽಕಾರವು ನಿರ್ಮಿಸಿರುವ ಲಲಿತಾದ್ರಿಪುರ (ದಕ್ಷಿಣ) ಬಡಾವಣೆಯಲ್ಲಿ ಸಂಖ್ಯೆ ೧೨೮೦ರ ನಿವೇಶನವನ್ನು ೨೦೨೨ರ ಮಾರ್ಚ್ ೧೮ರಂದು ಮುಡಾ ಇ-ಹರಾಜಿ ನಲ್ಲಿ ಭಾಗವಹಿಸಿ ಖರೀದಿಸಿದ್ದರು.

ನಂತರ, ಮುಡಾಕ್ಕೆ ನಿವೇಶನದ ಮೊತ್ತ ೮೨. ೧೭ ಲಕ್ಷ ರೂ. ಪಾವತಿಸಿದ ಮೇಲೆ ೨೦೨೨ ಡಿ. ೨೬ ರಂದು ಕ್ರಯಪತ್ರ ಮಾಡಲಾಗಿದೆ. ಆಯುಕ್ತರು, ವಿಶೇಷ ತಹಸಿಲ್ದಾರ್ ಕ್ರಯಪತ್ರಕ್ಕೆ ಸಹಿ ಮಾಡಿದ ನಂತರ ನಿವೇಶನ ಖಾತಾ, ಕಂದಾಯ ಪತ್ರ ಪಡೆದುಕೊಂಡಿದ್ದಾರೆ.

ನಂತರ, ಸುಹಾಸ್ ನಿವೇಶನದ ದಾಖಲೆಗಳನ್ನು ಹಾಜರುಪಡಿಸಿ ಬ್ಯಾಂಕಿನಲ್ಲಿ ಸಾಲವನ್ನೂ ಪಡೆದಿ ದ್ದಾರೆ. ಈ ವೇಳೆ ಉದ್ಯೋಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಕಳೆದ ಆಗಸ್ಟ್ ತಿಂಗಳಲ್ಲಿ ವಾಪಸ್ ಮೈಸೂರಿಗೆ ಬಂದು ನಿವೇಶನ ವನ್ನು ಶುಚಿಗೊಳಿಸಿ ಮನೆ ಕಟ್ಟುವ ಕಾರ್ಯಕ್ಕೆ ಸಿದ್ಧತೆ ಆರಂಭಿಸಿದಾಗಲೇ ಅವರಿಗೆ ಅಚ್ಚರಿ ಕಾದಿತ್ತು. ಇದೇ ಸಂಖ್ಯೆಯ ನಿವೇಶನವನ್ನು ಮುಡಾ ಅಽಕಾರಿಗಳು ಡಾ. ಕುಮಾರ್ ಎಂಬವರಿಗೆ ಬದಲಿ ನಿವೇಶನವ ನ್ನಾಗಿ ಮಂಜೂರು ಮಾಡಿದ್ದಾರೆ.

ಡಾ. ಕುಮಾರ್ ಅವರಿಗೆ ಬೇರೆ ಜಾಗದಲ್ಲಿ ಬದಲಿ ನಿವೇಶನ ಮಂಜೂರು ಮಾಡಿಕೊಡ ಬೇಕಾದ ಅಧಿಕಾರಿಗಳು ೨೦೨೨ರಲ್ಲಿ ಇ-ಹರಾಜಿ ನಲ್ಲಿ ಮಾರಾಟ ಮಾಡಲಾಗಿರುವ ನಿವೇಶನ ಎಂಬುದನ್ನು ಪರಿಶೀಲಿಸದೆ ಕಣ್ಮುಚ್ಚಿ ಕೊಂಡು ೨೦೨೩ ಜೂನ್ ನಲ್ಲಿ ಬದಲಿ ನಿವೇಶನವನ್ನಾಗಿ ನೀಡಿರುವುದರಿಂದ ಈಗ ಇಬ್ಬರೂ ಸಮಸ್ಯೆ ಎದುರಿಸುವಂತಾಗಿದೆ. ಇ-ಹರಾಜಿನಲ್ಲಿ ಖರೀದಿಸಿರುವ ನಿವೇಶನವನ್ನು ತಮಗೆ ಬದಲಿ ನಿವೇಶನವಾಗಿ ಮಂಜೂರಾತಿ ಮಾಡಿಕೊಡಲಾಗಿದ್ದು, ಬೇರೆ ನಿವೇಶನ ಅಲಾಟ್ ಮೆಂಟ್ ಮಾಡಿಸುವಂತೆ ಕುಮಾರ್ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದೀಗ ಈ ವಿಚಾರಣೆಯು ನ್ಯಾಯಾಲಯದಲ್ಲಿ ಇದೆ.

ಬ್ಯಾಂಕಿಗೆ ೧೩ ಲಕ್ಷ ರೂ. ಬಡ್ಡಿ: ಇ-ಹರಾಜಿನಲ್ಲಿ ಖರೀದಿ ಮಾಡಲು ೮೨ ಲಕ್ಷ ರೂಪಾಯಿ ಪಾವತಿಸಿರುವ ಟಿ. ಪಿ. ಸುಹಾಸ್ ಅವರು ಎಚ್‌ಡಿಎ-ಸಿ ಬ್ಯಾಂಕಿಗೆ ನಿವೇಶನದ ದಾಖಲೆಗಳನ್ನು ಸಲ್ಲಿಸಿ ಸಾಲ ಪಡೆದುಕೊಂಡಿದ್ದಾರೆ. ಬ್ಯಾಂಕ್ ಸಾಲಕ್ಕೆ ಎರಡು ವರ್ಷಗಳಿಂದ ೧೩ ಲಕ್ಷ ರೂಪಾಯಿ ಬಡ್ಡಿ ಕಟ್ಟಿರುವ ಮಾಲೀಕರಿಗೆ ನಿವೇಶನದ ಗೊಂದಲ ದೊಡ್ಡ ಆತಂಕವನ್ನುಂಟು ಮಾಡಿ ಕೊಟ್ಟಿದೆ. ಡಾ. ಕುಮಾರ್ ಅವರು ನ್ಯಾಯಾಲಯದ ಮೊರೆ ಹೋಗಿರುವ ಕಾರಣ ತಮಗೆ ಕ್ರಯಪತ್ರ ಮಾಡಿಕೊಟ್ಟಿದ್ದರೂ ಮನೆ ಕಟ್ಟಿಸಲು ಸಾಧ್ಯವಾಗದೆ ಕೈಚೆಲ್ಲಿ ಕುಳಿತುಕೊಳ್ಳುವಂತಾಗಿದೆ.

 

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಲ್ಲಿ 11.86 ಕೋಟಿ ರೂ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು…

53 mins ago

ಸಂಸತ್‌ ವಿಶೇಷ ಅಧಿವೇಶನ: ಮೂರು ಮಹತ್ವದ ಮಸೂದೆ ಮಂಡನೆ

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…

1 hour ago

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…

2 hours ago

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…

2 hours ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

3 hours ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

3 hours ago