Andolana originals

ಅರಳುತ್ತಿರುವ ಬಾಲಪ್ರತಿಭೆ ಕೆ.ಎಸ್.ಆದಿತ್ಯ

ಕೆ.ಟಿ.ಮೋಹನ್‌ಕುಮಾರ್

ಸಾಮಾನ್ಯಜ್ಞಾನದ ಪ್ರಶ್ನೆಗಳನ್ನು ಕೇಳಿದರೆ ಥಟ್ ಅಂತ ಉತ್ತರ ಹೇಳುವ ಬಾಲಕ, ಗ್ರಾಮೀಣ ಪ್ರತಿಭೆಗೆ ಎಲ್ಲೆಡೆ ಮೆಚ್ಚುಗೆ 

ಸಾಲಿಗ್ರಾಮ: ಸಾಮಾನ್ಯ ಜ್ಞಾನಕ್ಕೆ ಸಂಬಂಧಪಟ್ಟ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದರೆ ಪಟಪಟನೆ ಉತ್ತರ ಹೇಳು ವಂತಹ ಚೂಟಿ, ಪ್ರಸ್ತುತ ವಿದ್ಯಮಾನ, ಇತಿಹಾಸ, ರಾಷ್ಟ್ರ, ರಾಜ್ಯ, ವಿದೇಶ, ಕ್ರೀಡೆ ಹೀಗೆ ವಿವಿಧ ಪ್ರಕಾರಗಳಿಗೆ ಸಂಬಂಧಪಟ್ಟ ವಿಷಯಗಳ ಕುರಿತು ಯಾರೇ ಪ್ರಶ್ನೆ ಕೇಳಿದರೂ ಥಟ್ ಅಂತ ಉತ್ತರ ಹೇಳುವ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ಗ್ರಾಮೀಣ ಪ್ರತಿಭೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ರೈತ ಕುಟುಂಬದ ಅಭಿಲಾಷ ಮತ್ತು ಸುಧಾಕರ್ ದಂಪತಿಯ ಪುತ್ರ ಕೆ.ಎಸ್.ಆದಿತ್ಯ.

ಪ್ರಸ್ತುತ ದಿನಗಳಲ್ಲಿ ತಮ್ಮ ಮಕ್ಕಳು ಚೆನ್ನಾಗಿ ಕಲಿತು ದೊಡ್ಡ ವ್ಯಕ್ತಿಗಳಾಗಬೇಕು ಎಂಬ ಉದ್ದೇಶದಿಂದ ಬಹುಪಾಲು ಜನರು ಸರ್ಕಾರಿ ಶಾಲೆಗಳ ಬದಲು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ಸಾಮಾನ್ಯವಾಗಿದೆ.

ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಕೃಷಿಕ ಕುಟುಂಬದಲ್ಲಿ ಜನಿಸಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಕೆ.ಎಸ್.ಆದಿತ್ಯ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿ. ಸ್ವಗ್ರಾಮ ಕಾಳಮ್ಮನಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೧ರಿಂದ ೫ನೇ ತರಗತಿಯವರೆಗೆ ವ್ಯಾಸಂಗ ಮಾಡಿದ್ದು, ಪ್ರಸ್ತುತ ಸಾಲಿಗ್ರಾಮ ತಾಲ್ಲೂಕಿನ ರಾಂಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ೮ನೇ ತರಗತಿಯನ್ನು ಅಭ್ಯಾಸ ಮಾಡುತ್ತಿದ್ದಾನೆ. ಈ ವಿದ್ಯಾರ್ಥಿಯ ಸಾಮಾನ್ಯ ಜ್ಞಾನದ ಮಟ್ಟ ಇತರರಿಗೆ ಒಂದೆಡೆ ಮಾದರಿಯಾದರೆ ಮತ್ತೊಂದೆಡೆ ಎಲ್ಲರನ್ನೂ ಹುಬ್ಬೇರಿಸುವಂತಿದೆ.

ಈ ವಿದ್ಯಾರ್ಥಿಯು ಶಾಲೆಯಲ್ಲಿ ನಡೆಯುವ ಟೆಸ್ಟ್‌ಗಳು ಹಾಗೂ ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಆದರ್ಶ ವಿದ್ಯಾರ್ಥಿ ಅನಿಸಿಕೊಂಡಿದ್ದಾನೆ. ಆ ಮೂಲಕ ಶಾಲೆಗೆ, ಕಲಿಸಿದ ಗುರುಗಳಿಗೆ, ಹೆತ್ತವರಿಗೆ, ಹುಟ್ಟಿದ ಊರಿಗೆ ಕೀರ್ತಿ ತರುತ್ತಿದ್ದಾನೆ.

ದಾರಿ ದೀಪವಾದ ಶಿಕ್ಷಕ ವೃಂದ:  ಕೆ.ಎಸ್.ಆದಿತ್ಯ ಓದುತ್ತಿರುವ ಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಎನ್.ಮರಯ್ಯ ಹಾಗೂ ಶಿಕ್ಷಕ ವೃಂದದವರು ಈತನಿಗೆ ಉತ್ತಮ ಮಾರ್ಗದರ್ಶನ ನೀಡುತ್ತಾ ಅವನ ಆಶೋತ್ತರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅವನ ಸಾಧನೆಗೆ ದಾರಿ ದೀಪವಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

6 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

8 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

8 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

9 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

10 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

12 hours ago