Andolana originals

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು 

ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ ಅಧಿಕವಾದರೂ ಅದರ ಇಳುವರಿ ಹೇಳಿ ಕೊಳ್ಳುವಂತೆ ಇಲ್ಲವಾಗಿದೆ. ಕೊಯ್ಲೇ ಮಾಡದೇ ದನ-ಕರು ಬಿಟ್ಟು ಮೇಯಿಸಿದವರೂ ಇದ್ದಾರೆ. ಒಟ್ಟಾರೆ ಈ ಬಾರಿ ಇಳುವರಿ ತರಾವರಿ ಬಂದಿದೆ!

ಕೆಲವರು ಈ ಬಾರಿ ಇಳುವರಿ ತುಂಬಾ ನಷ್ಟ ಎನ್ನುತ್ತಾರೆ. ಅನೇಕರು ಇಳುವರಿ ಸಾಮಾನ್ಯ ಅನ್ನುತ್ತಾರೆ. ಯಾರು ಬೇಗ ಬಿತ್ತನೆ ಮಾಡಿದ್ದರೋ ಅಂತಹ ರೈತರು ಈಗ ಹುರುಳಿ ಕೊಯ್ಲು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕೊಯ್ಲಿಗೆ ಬರುವ ಹುರುಳಿ ಫಲವತ್ತಾಗಿದೆ ಎಂಬ ಸಮಾಧಾನದ ಮಾತುಗಳು ರೈತರಿಂದ ಕೇಳಿಬರುತ್ತಿವೆ. ಆದರೆ ಕೃಷಿ ಇಲಾಖೆ ಅಧಿಕಾರಿಗಳು, ಬಹುತೇಕ ಎಲ್ಲಾ ಕಡೆ ಹುರುಳಿ ಬೆಳೆ ಚೆನ್ನಾಗಿದೆ ಎಂದು ಹೇಳುತ್ತಾರೆ.

ಎಂದಿನಂತೆ ಈ ಬಾರಿಯೂ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ೧೨,೯೦೦ ಹೆಕ್ಟೇರ್ ಪ್ರದೇಶದಲ್ಲಿ ಹುರುಳಿ ಬಿತ್ತನೆಯಾಗಿದ್ದು, ಕೆಲವೆಡೆ ಈಗಾಗಲೇ ಕೊಯ್ಲು ಆರಂಭವಾಗಿದೆ. ಕಬ್ಳಳ್ಳಿ, ಸೀಗೆವಾಡಿ, ಮಾದಾಪಟ್ಟಣ, ಕೊಡಗಾಪುರ, ಬೆಟ್ಟದ ಮಾದಹಳ್ಳಿ, ತಗ್ಗಲೂರು, ಹೊರೆಯಾಲ ಮೊದಲಾದ ಕಡೆ ಅಲ್ಲಲ್ಲಿ ಕೊಯ್ಲು ಶುರುವಾಗಿದೆ. ಇನ್ನು, ಚಾಮರಾಜನಗರ ತಾಲ್ಲೂಕಿನಲ್ಲಿ ೩ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಮಲೆಯೂರು, ಮೂಡ್ನಾಕೂಡು, ಉಡಿಗಾಲ, ಕುಲಗಾಣ, ನಂಜೇದೇವನಪುರ, ಹಳೇಪುರ, ಬೆಟ್ಟದಪುರ ಸೇರಿದಂತೆ ವಿವಿಧ ಕಡೆ ಒಂದು ವಾರದಿಂದ ಹುರುಳಿ ಕೊಯ್ಲು ನಡೆಯುತ್ತಿದೆ.

ಕೊಳ್ಳೇಗಾಲ ಮತ್ತು ಹನೂರು ತಾಲ್ಲೂಕು ಗಳಲ್ಲಿ ತಲಾ ಒಂದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿತ್ತು. ಯಳಂದೂರು ತಾಲ್ಲೂಕಿನಲ್ಲಿ ಕೇವಲ ೨೦೦ ಹೆಕ್ಟೇರ್‌ನಷ್ಟು ಹುರುಳಿ ಬಿತ್ತನೆ ಕಂಡಿತ್ತು. ಅಲ್ಲಲ್ಲಿ ಕೊಯ್ಲು ಕಂಡುಬಂದಿದೆ ಎಂದು ಕೃಷಿ ಇಲಾಖೆಯ ಮೂಲಗಳು ತಿಳಿಸಿವೆ.

ಇದನ್ನು ಓದಿ: ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಹಿಂಗಾರು ಮಳೆಗೆ ಹುರುಳಿ ಬಿಟ್ಟರೆ ಹಸಿಕಡಲೆ ಹಾಕಲಾಗುತ್ತದೆ. ಇವೆರಡೂ ಬೆಳೆಗಳ ಬೆಳವಣಿಗೆ ಗತಿ ಹೇಗೆಂದರೆ ಒಂದು ಹಂತದವರೆಗಷ್ಟೇ ಮಳೆಯನ್ನು ಬೇಡುತ್ತವೆ. ನಂತರದಲ್ಲಿ ಇಬ್ಬನಿ ಮತ್ತು ಚಳಿ ವಾತಾವರಣ ದಲ್ಲೇ ಬೆಳೆ ಬರುತ್ತದೆ. ಪ್ರಾರಂಭದಲ್ಲಿ ಹುರುಳಿಗೆ ಮಳೆ ಕೊರತೆಯಾಯಿತು. ಅದರಿಂದಾಗಿ ಇಳುವರಿ ಕುಂಠಿತವಾಗಿದೆ ಎನ್ನುತ್ತಾರೆ ರೈತರು.

ಕೊಯ್ಲು ಮಾಡದೇ ದನಕರು ಬಿಟ್ಟು ಮೇಯಿಸಿದ ರೈತ:  ಮೂಡ್ನಾಕೂಡು ಗ್ರಾಮದ ಚನ್ನಬಸಪ್ಪ ಅವರು ಕೊಯ್ಲು ಮಾಡಿ ಟ್ರಾಕ್ಟರ್ ನಲ್ಲಿ ತಂದಿದ್ದ ಹುರುಳಿ ಬೆಳೆ ಕಡೆ ಕೈ ಮಾಡಿ ತೋರಿಸಿದರು. ೨ ಎಕರೆಯಲ್ಲಿ ಬಿತ್ತನೆ ಮಾಡಲಾ ಗಿತ್ತು. ಇಷ್ಟು ಇಳುವರಿ ಬಂದಿದೆ ಸಾಕಲ್ವಾ? ಎಂದು ನೋವಿನಿಂದಲೇ ನುಡಿದರು. ಅದೇ ಗ್ರಾಮದ ಮಲ್ಲಪ್ಪ ಅವರು, ತಮ್ಮ ಜಮೀನಿನಲ್ಲಿ ಹುರುಳಿ ಬೆಳೆ ಕೈಗೇ ಸಿಗುತ್ತಿಲ್ಲ. ಅಷ್ಟರ ಮಟ್ಟಿಗೆ ಬೆಳೆ ಕಮರಿಹೋಗಿದೆ. ಹಾಗಾಗಿ ಬೆಳೆಯನ್ನು ಕೊಯ್ಲು ಮಾಡದೇ ದನಕರು ಬಿಟ್ಟು ಮೇಯಿಸುತ್ತಿದ್ದೇನೆ ಎಂದು ಬೇಸರದಿಂದ ನುಡಿದರು.

” ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಹುರುಳಿ ಬಿತ್ತನೆ ಸುಮಾರು ೩ ಸಾವಿರ ಹೆಕ್ಟೇರ್ ಹೆಚ್ಚಾಗಿದ್ದು, ಒಟ್ಟಾರೆ ೧೭ ಸಾವಿರ ಹೆಕ್ಟೇರ್‌ನಲ್ಲಿ ಬೆಳೆಯಲಾಗಿದೆ. ಅಲ್ಲಿ ಇಲ್ಲಿ ಬೆಳೆ ವ್ಯತ್ಯಾಸ ಇರಬಹುದು. ಒಟ್ಟಾಗಿ ನೋಡಿದರೆ ಹುರುಳಿ ಬೆಳೆ ಚೆನ್ನಾಗಿದೆ.”

-ಸುಷ್ಮಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಕ 

” ಹುರುಳಿ ಇಳುವರಿ ಈ ಬಾರಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.೨೦ರಷ್ಟೂ ಇಲ್ಲ. ಮಳೆ ಸಕಾಲಕ್ಕೆ ಆಗದಿರುವುದು ಇದಕ್ಕೆ ಕಾರಣ. ಬೆಳೆ ಹೋದರೆ ದನಕರುಗಳ ಮೇವಿಗೆ ಹುರಳಿ ಕಡ್ಡಿಯಾದರೂ ಆಗುತ್ತಿತ್ತು. ಅದಕ್ಕೂ ಈ ಸಲ ತತ್ವಾರ. ಮೇವಿಗಾಗಿ ನರಸೀಪುರ ತಾಲ್ಲೂಕಿನಿಂದ ಭತ್ತದ ಹುಲ್ಲು ಖರೀದಿಸಿ ತರುವ ಪರಿಸ್ಥಿತಿ ನಿರ್ಮಾಣವಾಗಿದೆ.”

-ಮೂಡ್ನಾಕೂಡು ಮಹೇಶ್, ರೈತ ಮುಖಂಡ

ಆಂದೋಲನ ಡೆಸ್ಕ್

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

6 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

8 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

9 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

9 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

9 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

10 hours ago