Andolana originals

ಖಾಸಗಿ ಬಡಾವಣೆಗಾಗಿ ನಾಲೆಯ ಪಥವೇ ಬದಲು

ಎಸ್.ಎಸ್.ಭಟ್

ಅಧಿಕಾರಿಗಳಿಗೆ ಚಳಿ ಬಿಡಿಸಿದ ಗ್ರಾಮಸ್ಥರು; ಮಾರ್ಗ ಬದಲಾದರೆ ಜಮೀನಿಗೆ ನೀರಿನ ಕೊರತೆಯ ಆತಂಕ 

ನಂಜನಗೂಡು: ರೈತರ ಜಮೀನಿಗೆ ನೀರು ಹರಿಯಲೆಂದು ಸರ್ಕಾರ ನಾಲೆಗಳನ್ನು ನಿರ್ಮಿಸಿದೆ. ಅದೇ ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯ ನಿರ್ಮಾಣದಾರರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡು-ಹುಲ್ಲಹಳ್ಳಿ ರಸ್ತೆಯ ದೇಬೂರಿನಲ್ಲಿ ಹೊಸ ಬಡಾವಣೆ ನಿರ್ಮಾಣವಾಗುತ್ತಿದ್ದು, ಆ ಬಡಾವಣೆಯ ಅನುಕೂಲಕ್ಕಾಗಿ ೪೦ ವರ್ಷಗಳ ಹಿಂದೆ ನಿರ್ಮಿಸಿದ್ದ ಹಳೆಯ ನಾಲೆಯನ್ನು ಈಗ ಮುಚ್ಚಿ, ಅದಕ್ಕೆ ಬದಲಿಯಾಗಿ ಚಿಕ್ಕ ಕೊಳವೆ ಹಾಕುವ ಕಾಮಗಾರಿ ಭರದಿಂದ ನಡೆಯುತ್ತಿದೆ.

ನಾಲೆಯ ಮಾರ್ಗ ಬದಲಾದರೆ ರೈತರ ಜಮೀನಿಗೆ ನೀರಿನ ಆತಂಕ ಎದುರಾಗಲಿದೆ. ಅದನ್ನು ತಡೆಯಿರಿ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಅನೇಕ ಬಾರಿ ತಿಳಿಸಿದರೂ ಪ್ರಯೋಜನವಾಗದಿದ್ದಾಗ ದೇಬೂರಿನ ಜನತೆ ತಹಸಿಲ್ದಾರರಿಗೆ ಈ ಕುರಿತು ದೂರು ನೀಡಿದ್ದಾರೆ. ನಾಲೆಯ ಪಥದ ಬದಲಾವಣೆಯಿಂದ ಆಗಬಹುದಾದ ಸಂಕಷ್ಟಗಳ ಬಗ್ಗೆ ಗ್ರಾಮಸ್ಥರು ತಹಸಿಲ್ದಾರ್ ಅವರಿಗೆ ವಿವರಿಸಿದರು.

ದೂರು ಆಲಿಸಿದ ತಹಸಿಲ್ದಾರ್ ಶಿವಕುಮಾರ್, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಈ ಸಮಸ್ಯೆ ಕುರಿತಂತೆ ಕಂದಾಯ ಅಧಿಕಾರಿ ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಜಂಟಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಈ ಮಧ್ಯೆ ನೀರಾವರಿ ಅಧಿಕಾರಿಗಳ ಅಂತರಂಗದ ಬೆಂಬಲದೊಂದಿಗೆ ಬಡಾವಣೆಯ ಮಾಲೀಕರು ಹಳೆಯ ನಾಲೆಯನ್ನು ಮುಚ್ಚಿ ಬದಲಿ ಮಾರ್ಗಕ್ಕೆ ಕೊಳವೆ ಜೋಡಿಸುವ ಕಾಮಗಾರಿ ಆರಂಭಿಸಿದ ಘಟನೆಯೂ ನಡೆದಿದೆ.

ಸೋಮವಾರ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಕಬಿನಿ ನಾಲಾ ಇಂಜಿನಿಯರ್ ದರ್ಶನ್ ಅವರನ್ನು ತರಾಟೆಗೆ ತೆಗೆದುಕೊಂಡ ದೇಬೂರು ಗ್ರಾಮಸ್ಥರು, ಕೋಟ್ಯಂತರ ರೂ. ಮೌಲ್ಯದ ನಾಲಾ ಮಣ್ಣನ್ನು ಖಾಸಗಿ ರೆಸಾರ್ಟ್ ನಿರ್ಮಿಸಲು ಅಕ್ರಮವಾಗಿ ಸಾಗಿಸಿದ್ದೀರಿ. ಈಗ ಖಾಸಗಿ ಬಡಾವಣೆಯ ೪ ದಶಕಗಳ ಹಿಂದಿನ ನಾಲೆಯನ್ನೇ ಮುಚ್ಚುತ್ತಿದ್ದೀರಿ. ನೀವಿರುವುದು ಸರ್ಕಾರದ ಆಸ್ತಿ ಉಳಿಸಲೋ ಅಥವಾ ಅಕ್ರಮ ಹಣ ದೋಚಲೋ ಎಂದು ತರಾಟೆಗೆ ತೆಗೆದುಕೊಂಡರು.

ನಾಲೆ ಮುಚ್ಚುವ ಅಥವಾ ಬದಲಿಸುವ ಅಧಿಕಾರ ಯಾರಿಗಿದೆ?: ಇದರಿಂದಾಗಿ ಜಮೀನಿಗೆ ನೀರು ಹರಿಯದೆ ಆಗಬಹುದಾದ ನಷ್ಟಕ್ಕೆ ಯಾರು ಹೊಣೆ? ಯಾವ ಕಾರಣಕ್ಕೆ ನಾಲೆಯ ಪಥ ಬದಲಾಗುತ್ತಿದೆ ಎಂಬ ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲಾಗದ ನೀರಾವರಿ ನಿಗಮದ ಇಂಜಿನಿಯರ್ ದರ್ಶನ್ ಕಕ್ಕಾ ಬಿಕ್ಕಿಯಾಗಿ ವಾಪಸಾದರು.

” ನೀರಾವರಿ ನಾಲೆ ಸರ್ಕಾರಿ ಆಸ್ತಿ. ಅದನ್ನು ಮುಚ್ಚುವುದು ಕ್ರಿಮಿನಲ್ ಅಪರಾಧವಾಗಿದ್ದು, ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.”

– ಶಿವಕುಮಾರ್ ಕ್ಯಾಸನೂರ, ತಹಸಿಲ್ದಾರ್

ಆಂದೋಲನ ಡೆಸ್ಕ್

Recent Posts

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

52 mins ago

ಕೆಎಸ್‌ಐಸಿ: ೧೫ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯ

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…

57 mins ago

28 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ…

1 hour ago

ರಾಗಿ ಖರೀದಿ ಕೇಂದ್ರದಲ್ಲಿ ಹೆಚ್ಚುತ್ತಿರುವ ಅಕ್ರಮ: ಆರೋಪ

ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…

1 hour ago

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

10 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

11 hours ago