Andolana originals

ಖಾಸಗಿ ಬಡಾವಣೆಗಾಗಿ ನಾಲೆಯ ಪಥವೇ ಬದಲು

ಎಸ್.ಎಸ್.ಭಟ್

ಅಧಿಕಾರಿಗಳಿಗೆ ಚಳಿ ಬಿಡಿಸಿದ ಗ್ರಾಮಸ್ಥರು; ಮಾರ್ಗ ಬದಲಾದರೆ ಜಮೀನಿಗೆ ನೀರಿನ ಕೊರತೆಯ ಆತಂಕ 

ನಂಜನಗೂಡು: ರೈತರ ಜಮೀನಿಗೆ ನೀರು ಹರಿಯಲೆಂದು ಸರ್ಕಾರ ನಾಲೆಗಳನ್ನು ನಿರ್ಮಿಸಿದೆ. ಅದೇ ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯ ನಿರ್ಮಾಣದಾರರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡು-ಹುಲ್ಲಹಳ್ಳಿ ರಸ್ತೆಯ ದೇಬೂರಿನಲ್ಲಿ ಹೊಸ ಬಡಾವಣೆ ನಿರ್ಮಾಣವಾಗುತ್ತಿದ್ದು, ಆ ಬಡಾವಣೆಯ ಅನುಕೂಲಕ್ಕಾಗಿ ೪೦ ವರ್ಷಗಳ ಹಿಂದೆ ನಿರ್ಮಿಸಿದ್ದ ಹಳೆಯ ನಾಲೆಯನ್ನು ಈಗ ಮುಚ್ಚಿ, ಅದಕ್ಕೆ ಬದಲಿಯಾಗಿ ಚಿಕ್ಕ ಕೊಳವೆ ಹಾಕುವ ಕಾಮಗಾರಿ ಭರದಿಂದ ನಡೆಯುತ್ತಿದೆ.

ನಾಲೆಯ ಮಾರ್ಗ ಬದಲಾದರೆ ರೈತರ ಜಮೀನಿಗೆ ನೀರಿನ ಆತಂಕ ಎದುರಾಗಲಿದೆ. ಅದನ್ನು ತಡೆಯಿರಿ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಅನೇಕ ಬಾರಿ ತಿಳಿಸಿದರೂ ಪ್ರಯೋಜನವಾಗದಿದ್ದಾಗ ದೇಬೂರಿನ ಜನತೆ ತಹಸಿಲ್ದಾರರಿಗೆ ಈ ಕುರಿತು ದೂರು ನೀಡಿದ್ದಾರೆ. ನಾಲೆಯ ಪಥದ ಬದಲಾವಣೆಯಿಂದ ಆಗಬಹುದಾದ ಸಂಕಷ್ಟಗಳ ಬಗ್ಗೆ ಗ್ರಾಮಸ್ಥರು ತಹಸಿಲ್ದಾರ್ ಅವರಿಗೆ ವಿವರಿಸಿದರು.

ದೂರು ಆಲಿಸಿದ ತಹಸಿಲ್ದಾರ್ ಶಿವಕುಮಾರ್, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಈ ಸಮಸ್ಯೆ ಕುರಿತಂತೆ ಕಂದಾಯ ಅಧಿಕಾರಿ ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಜಂಟಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಈ ಮಧ್ಯೆ ನೀರಾವರಿ ಅಧಿಕಾರಿಗಳ ಅಂತರಂಗದ ಬೆಂಬಲದೊಂದಿಗೆ ಬಡಾವಣೆಯ ಮಾಲೀಕರು ಹಳೆಯ ನಾಲೆಯನ್ನು ಮುಚ್ಚಿ ಬದಲಿ ಮಾರ್ಗಕ್ಕೆ ಕೊಳವೆ ಜೋಡಿಸುವ ಕಾಮಗಾರಿ ಆರಂಭಿಸಿದ ಘಟನೆಯೂ ನಡೆದಿದೆ.

ಸೋಮವಾರ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಕಬಿನಿ ನಾಲಾ ಇಂಜಿನಿಯರ್ ದರ್ಶನ್ ಅವರನ್ನು ತರಾಟೆಗೆ ತೆಗೆದುಕೊಂಡ ದೇಬೂರು ಗ್ರಾಮಸ್ಥರು, ಕೋಟ್ಯಂತರ ರೂ. ಮೌಲ್ಯದ ನಾಲಾ ಮಣ್ಣನ್ನು ಖಾಸಗಿ ರೆಸಾರ್ಟ್ ನಿರ್ಮಿಸಲು ಅಕ್ರಮವಾಗಿ ಸಾಗಿಸಿದ್ದೀರಿ. ಈಗ ಖಾಸಗಿ ಬಡಾವಣೆಯ ೪ ದಶಕಗಳ ಹಿಂದಿನ ನಾಲೆಯನ್ನೇ ಮುಚ್ಚುತ್ತಿದ್ದೀರಿ. ನೀವಿರುವುದು ಸರ್ಕಾರದ ಆಸ್ತಿ ಉಳಿಸಲೋ ಅಥವಾ ಅಕ್ರಮ ಹಣ ದೋಚಲೋ ಎಂದು ತರಾಟೆಗೆ ತೆಗೆದುಕೊಂಡರು.

ನಾಲೆ ಮುಚ್ಚುವ ಅಥವಾ ಬದಲಿಸುವ ಅಧಿಕಾರ ಯಾರಿಗಿದೆ?: ಇದರಿಂದಾಗಿ ಜಮೀನಿಗೆ ನೀರು ಹರಿಯದೆ ಆಗಬಹುದಾದ ನಷ್ಟಕ್ಕೆ ಯಾರು ಹೊಣೆ? ಯಾವ ಕಾರಣಕ್ಕೆ ನಾಲೆಯ ಪಥ ಬದಲಾಗುತ್ತಿದೆ ಎಂಬ ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲಾಗದ ನೀರಾವರಿ ನಿಗಮದ ಇಂಜಿನಿಯರ್ ದರ್ಶನ್ ಕಕ್ಕಾ ಬಿಕ್ಕಿಯಾಗಿ ವಾಪಸಾದರು.

” ನೀರಾವರಿ ನಾಲೆ ಸರ್ಕಾರಿ ಆಸ್ತಿ. ಅದನ್ನು ಮುಚ್ಚುವುದು ಕ್ರಿಮಿನಲ್ ಅಪರಾಧವಾಗಿದ್ದು, ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.”

– ಶಿವಕುಮಾರ್ ಕ್ಯಾಸನೂರ, ತಹಸಿಲ್ದಾರ್

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

2 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

4 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

4 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

5 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

9 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

9 hours ago