Andolana originals

ಖಾಸಗಿ ಬಡಾವಣೆಗಾಗಿ ನಾಲೆಯ ಪಥವೇ ಬದಲು

ಎಸ್.ಎಸ್.ಭಟ್

ಅಧಿಕಾರಿಗಳಿಗೆ ಚಳಿ ಬಿಡಿಸಿದ ಗ್ರಾಮಸ್ಥರು; ಮಾರ್ಗ ಬದಲಾದರೆ ಜಮೀನಿಗೆ ನೀರಿನ ಕೊರತೆಯ ಆತಂಕ 

ನಂಜನಗೂಡು: ರೈತರ ಜಮೀನಿಗೆ ನೀರು ಹರಿಯಲೆಂದು ಸರ್ಕಾರ ನಾಲೆಗಳನ್ನು ನಿರ್ಮಿಸಿದೆ. ಅದೇ ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯ ನಿರ್ಮಾಣದಾರರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡು-ಹುಲ್ಲಹಳ್ಳಿ ರಸ್ತೆಯ ದೇಬೂರಿನಲ್ಲಿ ಹೊಸ ಬಡಾವಣೆ ನಿರ್ಮಾಣವಾಗುತ್ತಿದ್ದು, ಆ ಬಡಾವಣೆಯ ಅನುಕೂಲಕ್ಕಾಗಿ ೪೦ ವರ್ಷಗಳ ಹಿಂದೆ ನಿರ್ಮಿಸಿದ್ದ ಹಳೆಯ ನಾಲೆಯನ್ನು ಈಗ ಮುಚ್ಚಿ, ಅದಕ್ಕೆ ಬದಲಿಯಾಗಿ ಚಿಕ್ಕ ಕೊಳವೆ ಹಾಕುವ ಕಾಮಗಾರಿ ಭರದಿಂದ ನಡೆಯುತ್ತಿದೆ.

ನಾಲೆಯ ಮಾರ್ಗ ಬದಲಾದರೆ ರೈತರ ಜಮೀನಿಗೆ ನೀರಿನ ಆತಂಕ ಎದುರಾಗಲಿದೆ. ಅದನ್ನು ತಡೆಯಿರಿ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಅನೇಕ ಬಾರಿ ತಿಳಿಸಿದರೂ ಪ್ರಯೋಜನವಾಗದಿದ್ದಾಗ ದೇಬೂರಿನ ಜನತೆ ತಹಸಿಲ್ದಾರರಿಗೆ ಈ ಕುರಿತು ದೂರು ನೀಡಿದ್ದಾರೆ. ನಾಲೆಯ ಪಥದ ಬದಲಾವಣೆಯಿಂದ ಆಗಬಹುದಾದ ಸಂಕಷ್ಟಗಳ ಬಗ್ಗೆ ಗ್ರಾಮಸ್ಥರು ತಹಸಿಲ್ದಾರ್ ಅವರಿಗೆ ವಿವರಿಸಿದರು.

ದೂರು ಆಲಿಸಿದ ತಹಸಿಲ್ದಾರ್ ಶಿವಕುಮಾರ್, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಈ ಸಮಸ್ಯೆ ಕುರಿತಂತೆ ಕಂದಾಯ ಅಧಿಕಾರಿ ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಜಂಟಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಈ ಮಧ್ಯೆ ನೀರಾವರಿ ಅಧಿಕಾರಿಗಳ ಅಂತರಂಗದ ಬೆಂಬಲದೊಂದಿಗೆ ಬಡಾವಣೆಯ ಮಾಲೀಕರು ಹಳೆಯ ನಾಲೆಯನ್ನು ಮುಚ್ಚಿ ಬದಲಿ ಮಾರ್ಗಕ್ಕೆ ಕೊಳವೆ ಜೋಡಿಸುವ ಕಾಮಗಾರಿ ಆರಂಭಿಸಿದ ಘಟನೆಯೂ ನಡೆದಿದೆ.

ಸೋಮವಾರ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಕಬಿನಿ ನಾಲಾ ಇಂಜಿನಿಯರ್ ದರ್ಶನ್ ಅವರನ್ನು ತರಾಟೆಗೆ ತೆಗೆದುಕೊಂಡ ದೇಬೂರು ಗ್ರಾಮಸ್ಥರು, ಕೋಟ್ಯಂತರ ರೂ. ಮೌಲ್ಯದ ನಾಲಾ ಮಣ್ಣನ್ನು ಖಾಸಗಿ ರೆಸಾರ್ಟ್ ನಿರ್ಮಿಸಲು ಅಕ್ರಮವಾಗಿ ಸಾಗಿಸಿದ್ದೀರಿ. ಈಗ ಖಾಸಗಿ ಬಡಾವಣೆಯ ೪ ದಶಕಗಳ ಹಿಂದಿನ ನಾಲೆಯನ್ನೇ ಮುಚ್ಚುತ್ತಿದ್ದೀರಿ. ನೀವಿರುವುದು ಸರ್ಕಾರದ ಆಸ್ತಿ ಉಳಿಸಲೋ ಅಥವಾ ಅಕ್ರಮ ಹಣ ದೋಚಲೋ ಎಂದು ತರಾಟೆಗೆ ತೆಗೆದುಕೊಂಡರು.

ನಾಲೆ ಮುಚ್ಚುವ ಅಥವಾ ಬದಲಿಸುವ ಅಧಿಕಾರ ಯಾರಿಗಿದೆ?: ಇದರಿಂದಾಗಿ ಜಮೀನಿಗೆ ನೀರು ಹರಿಯದೆ ಆಗಬಹುದಾದ ನಷ್ಟಕ್ಕೆ ಯಾರು ಹೊಣೆ? ಯಾವ ಕಾರಣಕ್ಕೆ ನಾಲೆಯ ಪಥ ಬದಲಾಗುತ್ತಿದೆ ಎಂಬ ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲಾಗದ ನೀರಾವರಿ ನಿಗಮದ ಇಂಜಿನಿಯರ್ ದರ್ಶನ್ ಕಕ್ಕಾ ಬಿಕ್ಕಿಯಾಗಿ ವಾಪಸಾದರು.

” ನೀರಾವರಿ ನಾಲೆ ಸರ್ಕಾರಿ ಆಸ್ತಿ. ಅದನ್ನು ಮುಚ್ಚುವುದು ಕ್ರಿಮಿನಲ್ ಅಪರಾಧವಾಗಿದ್ದು, ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.”

– ಶಿವಕುಮಾರ್ ಕ್ಯಾಸನೂರ, ತಹಸಿಲ್ದಾರ್

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

13 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

13 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

13 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

13 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

13 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

13 hours ago