Andolana originals

ಖಾಸಗಿ ಬಡಾವಣೆಗಾಗಿ ನಾಲೆಯ ಪಥವೇ ಬದಲು

ಎಸ್.ಎಸ್.ಭಟ್

ಅಧಿಕಾರಿಗಳಿಗೆ ಚಳಿ ಬಿಡಿಸಿದ ಗ್ರಾಮಸ್ಥರು; ಮಾರ್ಗ ಬದಲಾದರೆ ಜಮೀನಿಗೆ ನೀರಿನ ಕೊರತೆಯ ಆತಂಕ 

ನಂಜನಗೂಡು: ರೈತರ ಜಮೀನಿಗೆ ನೀರು ಹರಿಯಲೆಂದು ಸರ್ಕಾರ ನಾಲೆಗಳನ್ನು ನಿರ್ಮಿಸಿದೆ. ಅದೇ ಸರ್ಕಾರದ ಅಧಿಕಾರಿಗಳು ಖಾಸಗಿ ಬಡಾವಣೆಯ ನಿರ್ಮಾಣದಾರರ ಆಮಿಷಕ್ಕೆ ಒಳಗಾಗಿ ಜಮೀನಿನ ಹಿತ ಮರೆತು ನಾಲೆಯ ಪಥವನ್ನೇ ಬದಲಾಯಿಸಲು ಹೊರಟಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡು-ಹುಲ್ಲಹಳ್ಳಿ ರಸ್ತೆಯ ದೇಬೂರಿನಲ್ಲಿ ಹೊಸ ಬಡಾವಣೆ ನಿರ್ಮಾಣವಾಗುತ್ತಿದ್ದು, ಆ ಬಡಾವಣೆಯ ಅನುಕೂಲಕ್ಕಾಗಿ ೪೦ ವರ್ಷಗಳ ಹಿಂದೆ ನಿರ್ಮಿಸಿದ್ದ ಹಳೆಯ ನಾಲೆಯನ್ನು ಈಗ ಮುಚ್ಚಿ, ಅದಕ್ಕೆ ಬದಲಿಯಾಗಿ ಚಿಕ್ಕ ಕೊಳವೆ ಹಾಕುವ ಕಾಮಗಾರಿ ಭರದಿಂದ ನಡೆಯುತ್ತಿದೆ.

ನಾಲೆಯ ಮಾರ್ಗ ಬದಲಾದರೆ ರೈತರ ಜಮೀನಿಗೆ ನೀರಿನ ಆತಂಕ ಎದುರಾಗಲಿದೆ. ಅದನ್ನು ತಡೆಯಿರಿ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಅನೇಕ ಬಾರಿ ತಿಳಿಸಿದರೂ ಪ್ರಯೋಜನವಾಗದಿದ್ದಾಗ ದೇಬೂರಿನ ಜನತೆ ತಹಸಿಲ್ದಾರರಿಗೆ ಈ ಕುರಿತು ದೂರು ನೀಡಿದ್ದಾರೆ. ನಾಲೆಯ ಪಥದ ಬದಲಾವಣೆಯಿಂದ ಆಗಬಹುದಾದ ಸಂಕಷ್ಟಗಳ ಬಗ್ಗೆ ಗ್ರಾಮಸ್ಥರು ತಹಸಿಲ್ದಾರ್ ಅವರಿಗೆ ವಿವರಿಸಿದರು.

ದೂರು ಆಲಿಸಿದ ತಹಸಿಲ್ದಾರ್ ಶಿವಕುಮಾರ್, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಈ ಸಮಸ್ಯೆ ಕುರಿತಂತೆ ಕಂದಾಯ ಅಧಿಕಾರಿ ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಜಂಟಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಈ ಮಧ್ಯೆ ನೀರಾವರಿ ಅಧಿಕಾರಿಗಳ ಅಂತರಂಗದ ಬೆಂಬಲದೊಂದಿಗೆ ಬಡಾವಣೆಯ ಮಾಲೀಕರು ಹಳೆಯ ನಾಲೆಯನ್ನು ಮುಚ್ಚಿ ಬದಲಿ ಮಾರ್ಗಕ್ಕೆ ಕೊಳವೆ ಜೋಡಿಸುವ ಕಾಮಗಾರಿ ಆರಂಭಿಸಿದ ಘಟನೆಯೂ ನಡೆದಿದೆ.

ಸೋಮವಾರ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಕಬಿನಿ ನಾಲಾ ಇಂಜಿನಿಯರ್ ದರ್ಶನ್ ಅವರನ್ನು ತರಾಟೆಗೆ ತೆಗೆದುಕೊಂಡ ದೇಬೂರು ಗ್ರಾಮಸ್ಥರು, ಕೋಟ್ಯಂತರ ರೂ. ಮೌಲ್ಯದ ನಾಲಾ ಮಣ್ಣನ್ನು ಖಾಸಗಿ ರೆಸಾರ್ಟ್ ನಿರ್ಮಿಸಲು ಅಕ್ರಮವಾಗಿ ಸಾಗಿಸಿದ್ದೀರಿ. ಈಗ ಖಾಸಗಿ ಬಡಾವಣೆಯ ೪ ದಶಕಗಳ ಹಿಂದಿನ ನಾಲೆಯನ್ನೇ ಮುಚ್ಚುತ್ತಿದ್ದೀರಿ. ನೀವಿರುವುದು ಸರ್ಕಾರದ ಆಸ್ತಿ ಉಳಿಸಲೋ ಅಥವಾ ಅಕ್ರಮ ಹಣ ದೋಚಲೋ ಎಂದು ತರಾಟೆಗೆ ತೆಗೆದುಕೊಂಡರು.

ನಾಲೆ ಮುಚ್ಚುವ ಅಥವಾ ಬದಲಿಸುವ ಅಧಿಕಾರ ಯಾರಿಗಿದೆ?: ಇದರಿಂದಾಗಿ ಜಮೀನಿಗೆ ನೀರು ಹರಿಯದೆ ಆಗಬಹುದಾದ ನಷ್ಟಕ್ಕೆ ಯಾರು ಹೊಣೆ? ಯಾವ ಕಾರಣಕ್ಕೆ ನಾಲೆಯ ಪಥ ಬದಲಾಗುತ್ತಿದೆ ಎಂಬ ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲಾಗದ ನೀರಾವರಿ ನಿಗಮದ ಇಂಜಿನಿಯರ್ ದರ್ಶನ್ ಕಕ್ಕಾ ಬಿಕ್ಕಿಯಾಗಿ ವಾಪಸಾದರು.

” ನೀರಾವರಿ ನಾಲೆ ಸರ್ಕಾರಿ ಆಸ್ತಿ. ಅದನ್ನು ಮುಚ್ಚುವುದು ಕ್ರಿಮಿನಲ್ ಅಪರಾಧವಾಗಿದ್ದು, ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.”

– ಶಿವಕುಮಾರ್ ಕ್ಯಾಸನೂರ, ತಹಸಿಲ್ದಾರ್

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

19 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

19 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

19 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

19 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

19 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago