Andolana originals

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ

ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ

ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ ಹಿನ್ನೀರಿಗೆ ಹೊಸ ವರ್ಷದ ಸಂದರ್ಭದಲ್ಲಿ ನದಿ ರೀವ (ರಿವರ್ ಟರ್ನ್) ಎಂಬ ಅತ್ಯಂತ ಸುಂದರವಾದ, ಚುರುಕಾದ ಜಲಪಕ್ಷಿ ಆಗಮಿಸಿ ಪಕ್ಷಿಪ್ರಿಯರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಕಬಿನಿ, ತಾರಕ, ಹೆಬ್ಬಾಳ ಜಲಾಶಯಗಳ ಹಿನ್ನೀರಿನ ವ್ಯಾಪ್ತಿಗಳಲ್ಲಿ ಜನವರಿ ತಿಂಗಳ ಆರಂಭದಲ್ಲಿ ಹಿಮಾಲಯ ಮತ್ತು ಇನ್ನಿತರ ಪ್ರದೇಶಗಳಿಂದ ಈ ನದಿ ರೀವ (ರಿವರ್ ಟರ್ನ್) ಪಕ್ಷಿಗಳು ಗುಂಪು ಗುಂಪಾಗಿ ಬಂದು ವಾಸ್ತವ್ಯ ಹೂಡುತ್ತವೆ.

ಈ ಪಕ್ಷಿಗಳು ನೀರಿನ ಮೇಲೆ ಹಾರುತ್ತಾ, ಮೀನು ಕಂಡ ತಕ್ಷಣ ಕ್ಷಣಾರ್ಧದಲ್ಲಿ ನೀರಿನೊಳಗೆ ಧುಮುಕಿ (ಪ್ಲಂಗ್ ಡೈವ್) ಮೀನನ್ನು ಹಿಡಿಯುವ ಕೌಶಲ ಹೊಂದಿವೆ. ಗಂಡು ಹಕ್ಕಿಯು ಹೆಣ್ಣು ಹಕ್ಕಿಯನ್ನು ಒಲಿಸಿಕೊಳ್ಳಲು ಮೀನನ್ನು ಬೇಟೆಯಾಡಿ ತಂದು ಉಡುಗೊರೆಯಾಗಿ ನೀಡುತ್ತದೆ. ಹೆಣ್ಣು ಹಕ್ಕಿಯು ಮೀನನ್ನು ಸ್ವೀಕರಿಸಿದರೆ ಮಾತ್ರ ಅದು ತನ್ನ ಸಂಗಾತಿಯಾಗಲು ಒಪ್ಪಿದೆ ಎಂದು ಅರ್ಥ! ಇವುಗಳು ಈ ತಾಲ್ಲೂಕಿನ ಜಲಾಶಯಗಳ ಮತ್ತು ನದಿಗಳ ಮರಳು ದಿಬ್ಬಗಳ ಮೇಲೆ ಮೊಟ್ಟೆಗಳನ್ನು ಇಡುತ್ತವೆ.

ಮರಿ ಮಾಡಿ ನಂತರ ಹೊರ ರಾಜ್ಯದತ್ತ ಪ್ರಯಾಣ ಬೆಳೆಸಿ ಮುಂದಿನ ಹೊಸ ವರ್ಷದ ಸಂದರ್ಭದಲ್ಲಿ ಇದರ ಜೊತೆ ಇನ್ನಿತರ ಪಕ್ಷಿಗಳನ್ನು ಕರೆದುಕೊಂಡು ಬರುತ್ತವೆ. ಪ್ರಾಣಿ ಪ್ರಿಯರಿಗೆ ಮತ್ತು ಪ್ರವಾಸಿಗರಿಗೆ ಈ ಪಕ್ಷಿಗಳು ತೀವ್ರ ಆಕರ್ಷಣೆಯ ಕೇಂದ್ರಬಿಂದುವಾಗಿವೆ. ಇತ್ತೀಚಿನ ದಿನಗಳಲ್ಲಿ ನದಿಗಳ ನೀರು ಕಲುಷಿತವಾಗುತ್ತಿರುವುದರಿಂದ ಹಾಗೂ ಕೆಲ ಬೇಟೆಗಾರರ, ಪುಂಡರ ಹಾವಳಿ ಯಿಂದಾಗಿ ಅಪರೂಪದ ಈ ಪಕ್ಷಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇಂತಹ ಅಪರೂಪದ ಹಕ್ಕಿಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ.

” ತಾಲ್ಲೂಕಿನಲ್ಲಿರುವ ಕಾಡು ಮತ್ತು ನದಿ, ಪರಿಸರ, ತಂಪಾದ ವಾತಾವರಣ ರಾಜ್ಯ, ದೇಶ-ವಿದೇಶಗಳ ವಿಶೇಷ ಪಕ್ಷಿಗಳಿಗೆ ಪ್ರಿಯವಾಗಿದೆ. ಆದ್ದರಿಂದ ಅನೇಕ ತರದ ಪಕ್ಷಿಗಳು ಜಲಾಶಯದ ಹಿನ್ನೀರಿಗೆ ಆಗಮಿಸುತ್ತಿದ್ದು ಇವುಗಳ ಕಲರವ ಪ್ರತಿಯೊಬ್ಬರನ್ನೂ ಸೆಳೆಯುತ್ತಿದೆ.”

-ಮನೋಜ್ ಗನ್ನ, ವನ್ಯಜೀವಿ ಛಾಯಾಗ್ರಾಹಕ, ಕೋಟೆ

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

7 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

7 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

7 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

7 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

8 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

8 hours ago