Andolana originals

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ

ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ

ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ ಹಿನ್ನೀರಿಗೆ ಹೊಸ ವರ್ಷದ ಸಂದರ್ಭದಲ್ಲಿ ನದಿ ರೀವ (ರಿವರ್ ಟರ್ನ್) ಎಂಬ ಅತ್ಯಂತ ಸುಂದರವಾದ, ಚುರುಕಾದ ಜಲಪಕ್ಷಿ ಆಗಮಿಸಿ ಪಕ್ಷಿಪ್ರಿಯರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಕಬಿನಿ, ತಾರಕ, ಹೆಬ್ಬಾಳ ಜಲಾಶಯಗಳ ಹಿನ್ನೀರಿನ ವ್ಯಾಪ್ತಿಗಳಲ್ಲಿ ಜನವರಿ ತಿಂಗಳ ಆರಂಭದಲ್ಲಿ ಹಿಮಾಲಯ ಮತ್ತು ಇನ್ನಿತರ ಪ್ರದೇಶಗಳಿಂದ ಈ ನದಿ ರೀವ (ರಿವರ್ ಟರ್ನ್) ಪಕ್ಷಿಗಳು ಗುಂಪು ಗುಂಪಾಗಿ ಬಂದು ವಾಸ್ತವ್ಯ ಹೂಡುತ್ತವೆ.

ಈ ಪಕ್ಷಿಗಳು ನೀರಿನ ಮೇಲೆ ಹಾರುತ್ತಾ, ಮೀನು ಕಂಡ ತಕ್ಷಣ ಕ್ಷಣಾರ್ಧದಲ್ಲಿ ನೀರಿನೊಳಗೆ ಧುಮುಕಿ (ಪ್ಲಂಗ್ ಡೈವ್) ಮೀನನ್ನು ಹಿಡಿಯುವ ಕೌಶಲ ಹೊಂದಿವೆ. ಗಂಡು ಹಕ್ಕಿಯು ಹೆಣ್ಣು ಹಕ್ಕಿಯನ್ನು ಒಲಿಸಿಕೊಳ್ಳಲು ಮೀನನ್ನು ಬೇಟೆಯಾಡಿ ತಂದು ಉಡುಗೊರೆಯಾಗಿ ನೀಡುತ್ತದೆ. ಹೆಣ್ಣು ಹಕ್ಕಿಯು ಮೀನನ್ನು ಸ್ವೀಕರಿಸಿದರೆ ಮಾತ್ರ ಅದು ತನ್ನ ಸಂಗಾತಿಯಾಗಲು ಒಪ್ಪಿದೆ ಎಂದು ಅರ್ಥ! ಇವುಗಳು ಈ ತಾಲ್ಲೂಕಿನ ಜಲಾಶಯಗಳ ಮತ್ತು ನದಿಗಳ ಮರಳು ದಿಬ್ಬಗಳ ಮೇಲೆ ಮೊಟ್ಟೆಗಳನ್ನು ಇಡುತ್ತವೆ.

ಮರಿ ಮಾಡಿ ನಂತರ ಹೊರ ರಾಜ್ಯದತ್ತ ಪ್ರಯಾಣ ಬೆಳೆಸಿ ಮುಂದಿನ ಹೊಸ ವರ್ಷದ ಸಂದರ್ಭದಲ್ಲಿ ಇದರ ಜೊತೆ ಇನ್ನಿತರ ಪಕ್ಷಿಗಳನ್ನು ಕರೆದುಕೊಂಡು ಬರುತ್ತವೆ. ಪ್ರಾಣಿ ಪ್ರಿಯರಿಗೆ ಮತ್ತು ಪ್ರವಾಸಿಗರಿಗೆ ಈ ಪಕ್ಷಿಗಳು ತೀವ್ರ ಆಕರ್ಷಣೆಯ ಕೇಂದ್ರಬಿಂದುವಾಗಿವೆ. ಇತ್ತೀಚಿನ ದಿನಗಳಲ್ಲಿ ನದಿಗಳ ನೀರು ಕಲುಷಿತವಾಗುತ್ತಿರುವುದರಿಂದ ಹಾಗೂ ಕೆಲ ಬೇಟೆಗಾರರ, ಪುಂಡರ ಹಾವಳಿ ಯಿಂದಾಗಿ ಅಪರೂಪದ ಈ ಪಕ್ಷಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇಂತಹ ಅಪರೂಪದ ಹಕ್ಕಿಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ.

” ತಾಲ್ಲೂಕಿನಲ್ಲಿರುವ ಕಾಡು ಮತ್ತು ನದಿ, ಪರಿಸರ, ತಂಪಾದ ವಾತಾವರಣ ರಾಜ್ಯ, ದೇಶ-ವಿದೇಶಗಳ ವಿಶೇಷ ಪಕ್ಷಿಗಳಿಗೆ ಪ್ರಿಯವಾಗಿದೆ. ಆದ್ದರಿಂದ ಅನೇಕ ತರದ ಪಕ್ಷಿಗಳು ಜಲಾಶಯದ ಹಿನ್ನೀರಿಗೆ ಆಗಮಿಸುತ್ತಿದ್ದು ಇವುಗಳ ಕಲರವ ಪ್ರತಿಯೊಬ್ಬರನ್ನೂ ಸೆಳೆಯುತ್ತಿದೆ.”

-ಮನೋಜ್ ಗನ್ನ, ವನ್ಯಜೀವಿ ಛಾಯಾಗ್ರಾಹಕ, ಕೋಟೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

1 hour ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

1 hour ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

2 hours ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

2 hours ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

2 hours ago

ಬದಲಾದ ಋತುಮಾನ: ಹೆಚ್ಚಿದ ಮದ್ರಾಸ್ ಐ ಪ್ರಕರಣ

ಗಿರೀಶ್ ಹುಣಸೂರು ನಿರ್ಲಕ್ಷ್ಯ ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ಮೈಸೂರು: ರಾಜ್ಯದಲ್ಲಿ ಚಳಿಗಾಲದ ಪರಿಣಾಮ ಶೀತಗಾಳಿ…

2 hours ago