Andolana originals

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಆಗಿರುವ ಮಳೆ ಕಾರಣದಿಂದ ತಾಪಮಾನದಲ್ಲಿ ಬದಲಾವಣೆಯಾಗಿ ಚಳಿಯ ಪ್ರಮಾಣ ತಗ್ಗಿದೆ. ಅಲ್ಲದೇ, ದಿಢೀರ್ ಮಳೆಯಿಂದ ಬೆಳೆದ ಫಸಲು ಒಕ್ಕಣೆ ಮಾಡಲಾಗದೇ ರೈತರು ಪೇಚಿಗೆ ಸಿಲುಕಿದ್ದಾರೆ!

ಚಾ.ನಗರ, ಮರಿಯಾಲ, ಕಾಡಳ್ಳಿ, ಬಿಸಲವಾಡಿ, ಕೋಡಿಉಗನೆ ಹೀಗೆ ಜಿಲ್ಲೆಯ ಹಲವೆಡೆ ಶುಕ್ರವಾರ ಬೆಳಿಗ್ಗೆ ಮಳೆಯಾಗಿದೆ. ನಗರದಲ್ಲಿ ರಸ್ತೆಯಲ್ಲಿ ನೀರು ಹರಿದಾಡುವ ಮಟ್ಟಿಗೆ ಮಳೆ ಸುರಿದಿದೆ. ಗುರುವಾರ ಸಂಜೆಯೂ ಇದೇ ರೀತಿ ಜಿಲ್ಲೆಯ ನಾನಾ ಕಡೆ ಮಳೆ ಬಿದ್ದಿತ್ತು.

ರಾಗಿ, ಹುರುಳಿ, ಅರಿಶಿನ, ತೊಗರಿ, ಅಲಸಂದೆ, ಮೆಕ್ಕೆ ಜೋಳಗಳ ಕಟಾವು ನಡೆಯುತ್ತಿದ್ದು ಚಳಿಗಾಲದ ಈ ದಿನಗಳಲ್ಲಿ ಮಳೆ ಯಾಗುವ ಸಂಭವ ತೀರಾ ಕಡಿಮೆ. ಆದರೆ ಇದ್ದಕ್ಕಿದ್ದಂತೆ ಮಳೆಯಾಗಿ ಒಕ್ಕಣೆಯಲ್ಲಿ ತೊಡಗಿದ್ದ ರೈತರನ್ನು ಅಕ್ಷರಶಃ ಪರದಾಡುವಂತೆ ಮಾಡಿತು. ಕೊಯ್ಲು ಮಾಡಿರುವ ತೆನೆಯನ್ನು ಒಂದೆಡೆ ಪೇರಿಸಿ ಟಾರ್ಪಾಲುಗಳಿಂದ ಮುಚ್ಚಿಟ್ಟುಕೊಂಡಿದ್ದು ಮಳೆ ಮತ್ತು ಮೋಡ ಕವಿದ ವಾತಾವರಣ ಸರಿದ ಮೇಲೆ ಒಕ್ಕಣೆ ಮಾಡುವ ಆಲೋಚನೆಯಲ್ಲಿ ರೈತರು ಇದ್ದಾರೆ.

ಕಟಾವು ಮಾಡಿರುವುದರ ಮೇಲೆ ಹನಿ ಬಿದ್ದರೆ ಅಂತಹ ಬೆಳೆ ಕಪ್ಪಾಗಿ ಮಾರುಕಟ್ಟೆಯಲ್ಲಿ ಧಾರಣೆ ತೀವ್ರ ಕುಸಿತವಾಗುತ್ತದೆ. ಕಟಾವಿಗೆ ಬಂದು ಕೊಯ್ಲಾಗದ ಹುರುಳಿ ಮತ್ತು ರಾಗಿ ಬೆಳೆಗಳ ಮೇಲೆ ಹನಿ ಬಿದ್ದರೂ ರಾಗಿ ತೆನೆ ಕಪ್ಪಾಗುವ, ಹುರುಳಿ ಮೊಳಕೆ ಬರುವ ಅಪಾಯವಿದೆ. ಇನ್ನು, ಹಸಿಕಡಲೆ ಹಾಗೂ ಕೊತ್ತಂಬರಿ ಬೆಳೆಗಳಿಗೆ ಈ ಹಂತದಲ್ಲಿ ಮಳೆ ಬೇಕಿಲ್ಲ. ಈಗ ಏನಿದ್ದರೂ ಈ ಬೆಳೆಗಳು ಚಳಿ ಮತ್ತು ಇಬ್ಬನಿ ವಾತಾವರಣದಿಂದಲೇ ಬೆಳೆಯುವಂಥವು. ಈಗಿನ ಮಳೆ ಈ ಬೆಳೆಗಳಿಗೂ ಮಾರಕ ಎನ್ನುತ್ತಾರೆ ರೈತರು. ಟೊಮೆಟೊ, ಕೋಸು, ಬಾಳೆಯಂತಹ ತೋಟಗಾರಿಕೆ ಬೆಳೆಗಳಿಗೂ ಈಅಕಾಲಿಕ ಮಳೆ ರೋಗ ರುಜಿನ ತಂದೊಡ್ಡುತ್ತದೆ ಎಂಬುದು ರೈತಾಪಿಗಳ ಆತಂಕ.

ಹವಾಮಾನ ಇಲಾಖೆ ಪ್ರಕಾರ, ಶ್ರೀಲಂಕಾದಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ಚಳಿಗಾಲದಲ್ಲಿ ಯಾರೂ ನಿರೀಕ್ಷೆ ಮಾಡದ ಈ ಮಳೆ ಬಿದ್ದಿದೆ. ಶುಕ್ರವಾರ ಬೆಳಿಗ್ಗೆ ೮.೩೦ರಿಂದ ಮಧ್ಯಾಹ್ನ ೨.೨೦ ನಡುವೆ ಬಂಡೀಪುರಕ್ಕೆ ೫ ಮಿ.ಮೀ. ಮಳೆಯಾಗಿದ್ದು, ಇದೇ ಅವಧಿಯಲ್ಲಿ ಬಾಗಳಿ ಗ್ರಾಮಕ್ಕೆ ೯ ಮಿ.ಮೀ., ಸಂತೇಮರಹಳ್ಳಿ ಗೆ ೮ ಮಿ.ಮೀ, ಕೂಡ್ಲೂರಿಗೆ ೬ ಮಿ.ಮೀ., ಮಂಗಲ ಗ್ರಾಮಕ್ಕೆ ೫.೫೦ ಮಿ.ಮೀ. ಮಳೆ ಬಿದ್ದಿರುವುದಾಗಿ ಕೃಷಿ ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

” ಎರಡು ಎಕರೆಯಲ್ಲಿ ಮುಸುಕಿನ ಜೋಳವನ್ನು ತಾವು ಬೆಳೆದಿದ್ದು ಅದನ್ನು ಒಕ್ಕಣೆ ಮಾಡುವ ಸಂದರ್ಭದಲ್ಲಿ ಗುರುವಾರ ಮಳೆ ಬೀಳಲಾಗಿ ಬಹಳ ತೊಂದರೆ ಪಡಬೇಕಾಯಿತು. ಹವಾಮಾನ ಇಲಾಖೆಯ ಮಳೆ ಮಾಹಿತಿ ಮೇರೆಗೆ ಕೊಯ್ಲಾಗಿರುವ ಜೋಳವನ್ನು ಒಣಗಲು ಹಾಕಿರಲಿಲ್ಲ. ಒಣಗಲು ಹಾಕಿದ್ದರೆ ಶುಕ್ರವಾರ ಬೆಳಿಗ್ಗೆ ೫.೩೦ರಿಂದ ೧೦ ಗಂಟೆತನಕ ಬಿದ್ದ ಮಳೆಗೆ ಸಿಲುಕಿ ಜೋಳ ಹಾಳಾಗುವ ಅಪಾಯ ಇತ್ತು. ಕೊಯ್ಲಾಗಿರುವ ಜೋಳವನ್ನೆಲ್ಲಾ ಒಂದೆಡೆ ರಾಶಿ ಹಾಕಿ ಟಾರ್ಪಾ ಲ್‌ಗಳಿಂದ ಮುಚ್ಚಿ ಮಳೆ ಹನಿ ಬಿದ್ದರೂ ಏನೂ ಆಗದಂತೆ ರಕ್ಷಣೆ ಮಾಡಿಟ್ಟಿದ್ದೇನೆ.”

ಶಿವರುದ್ರಸ್ವಾಮಿ, ಕಾಡಳ್ಳಿ ಗ್ರಾಮ

” ಕನಿಷ್ಠ ತಾಪಮಾನ ಜಿಲ್ಲೆಯಲ್ಲಿ ಬುಧವಾರ (ಡಿ.೩೧) ಕನಿಷ್ಠ ತಾಪಮಾನ ೧೬.೬ ಡಿಗ್ರಿ ಸೆಲ್ಸಿಯಸ್ ದಾಖಲಾ ಗಿದೆ. ಅದಕ್ಕೂ ಹಿಂದೆ ೧೨ ರಿಂದ ೧೩ ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಇದ್ದು, ತೀವ್ರ ಚಳಿ ತಲೆದೋರಿತ್ತು. ಮಳೆ, ಮೋಡದ ಕಾರಣ ತಾಪಮಾನದಲ್ಲಿ ಏರಿಕೆ ಕಂಡು ಬರಲಾಗಿ ಚಳಿ ಪ್ರಮಾಣ ಈಗ ತಗ್ಗಿದೆ. ಶುಕ್ರವಾರ ಬೆಳಿಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಹಿಂದಿನ ೨೪ ಗಂಟೆಗಳ ಅವಽಯಲ್ಲಿ ಗುಂಡ್ಲುಪೇಟೆ ತಾ.೧೮.೭, ಹನೂರು ತಾ.ನಲ್ಲಿ ೨೦.೯, ಕೊಳ್ಳೇಗಾಲ ತಾ.ನಲ್ಲಿ ೨೨, ಯಳಂದೂರು ತಾ.ನಲ್ಲಿ ೨೧.೯ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ವರದಿಯಾಗಿದೆ.”

ಒಕ್ಕಣೆ ಮುಂದೂಡಲು ಸಲಹೆ : ಜಿಲ್ಲೆಯ ಅಲ್ಲಲ್ಲಿ ಶನಿವಾರವೂ ತುಂತುರು ಹಾಗೂ ಚದುರಿದ ಮಳೆ ಆಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ರೈತರು ಒಕ್ಕಣೆ, ಬೆಳೆ ಕಟಾವನ್ನು ಮುಂದೂಡುವುದು ಒಳ್ಳೆಯದು. ಮಳೆ ಮತ್ತು ಮೋಡದ ಕಾರಣ ಹಿಂದಿಗಿಂತ ಚಳಿ ಈಗ ಕಡಿಮೆಯಾಗಿದೆ.”

ಹೆಚ್.ಪಿ.ರಜತ್,  ಕೃಷಿ ಹವಾಮಾನ ತಜ್ಞರು, ಹರದನಹಳ್ಳಿ, ಕೆವಿಕೆ

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

4 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

5 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

5 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

5 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

6 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

6 hours ago