Andolana originals

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ

ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ

ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಕೊಡವ ಅಭಿವೃದ್ಧಿ ನಿಗಮ ಕೊಡವರ ಸಮಗ್ರ ಶ್ರೇಯೋಭಿವೃದ್ಧಿಗೆ ಸಹಕಾರಿಯಾಗಲಿದೆ. ಇದು ಕೊಡವ ಸಮುದಾಯದ ದೀರ್ಘಕಾಲದ ಬೇಡಿಕೆಗೆ ಸಿಕ್ಕ ಸ್ಪಂದನೆಯಾಗಿದೆ. ಶಾಸಕ ಎ.ಎಸ್. ಪೊನ್ನಣ್ಣ ಅವರ ಪ್ರಯತ್ನದ ಫಲವಾಗಿ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಮಂಜು ಚಿಣ್ಣಪ್ಪ ನೇತೃತ್ವದ ಯುನೈಟೆಡ್ ಕೊಡವ ಆರ್ಗನೈಸೇಷನ್‌ನ ದಶಕದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಕ್ಕಿದ್ದು, ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ.

ಕೊಡವ ಜನಾಂಗ ಇತರೇ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದು, ರಾಜ್ಯ ಒಳಮೀಸಲಾತಿಯ ಅನ್ವಯ ಒಬಿಸಿ ೩ಎ ನಲ್ಲಿ ವರ್ಗೀಕರಿಸಲಾಗಿದೆ. ಇದರಲ್ಲಿ ಕೊಡವ, ಬಲಿಜ, ಒಕ್ಕಲಿಗ ಸೇರಿದಂತೆ ಇನ್ನೂ ಕೆಲವು ಸಮುದಾಯಗಳೂ ಸೇರಿವೆ. ಅಂದಾಜು ೧ ಕೋಟಿಗೂ ಹೆಚ್ಚು ಸಂಖ್ಯೆ ಇರುವ ಒಕ್ಕಲಿಗ ಜನಾಂಗ ಮತ್ತು ಅಂದಾಜು ೨೫ ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿರುವ ಬಲಿಜ ಜನಾಂಗಗಳ ಜತೆ ಕೇವಲ ಲಕ್ಷ ಜನಸಂಖ್ಯೆ ಇರುವ ಕೊಡವ ಜನಾಂಗ ಮೀಸಲಾತಿಗಾಗಿ ಸ್ಪರ್ಧಿಸಬೇಕಿತ್ತು. ಒಟ್ಟಾರೆ ಇರುವ ಶೇ.೪ರಷ್ಟು ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿಯಲ್ಲಿ ಹೆಚ್ಚಿನ ಜನಸಂಖ್ಯೆಯಿರುವ ಸಮುದಾಯಗಳಿಗೆ ಹೆಚ್ಚಿನ ಪಾಲು ಸಿಗುತ್ತಿದೆ. ಇದರಿಂದ ಕೊಡವ ಜನಾಂಗದ ಶ್ರೇಯೋಭಿವೃದ್ಧಿ ಕಷ್ಟವಾಗಿತ್ತು. ರಾಜ್ಯ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸುವಾಗ ಸಣ್ಣ ಸಮುದಾಯವಾದ ಕೊಡವ ಜನಾಂಗದ ಅಭಿವೃದ್ಧಿಗೆ ಹೆಚ್ಚಿನ ಯೋಜನೆಗಳು ಸಿಗುತ್ತಿರಲಿಲ್ಲ. ಇವೆಲ್ಲದರ ನಡುವೆ ಕೊಡವ ಜನಾಂಗದ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆಯ ಅನಿವಾರ್ಯತೆಯನ್ನು ಮನಗಂಡು ಯುನೈಟೆಡ್ ಕೊಡವ ಆರ್ಗನೈಸೇಷನ್ ಇದಕ್ಕಾಗಿ ನಿರಂತರ ಹೋರಾಟ ನಡೆಸಿತ್ತು.

ಇದೀಗ ನಿಗಮ ಸ್ಥಾಪನೆ ಘೋಷಣೆಯಾಗಿದ್ದು, ಮುಂದಿನ ಹಂತದಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಬೇಕಿದೆ. ನೋಂದಣಿ ಪ್ರಕ್ರಿಯೆ ಬಳಿಕ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ ನೇಮಕವಾಗಲಿದ್ದು, ಬಳಿಕ ನಿರ್ದೇಶಕರನ್ನೊಳ ಗೊಂಡ ಮಂಡಳಿ ರಚನೆಯಾಗಬೇಕಿದೆ. ನಿಗಮಕ್ಕೆ ಕಚೇರಿ ಮತ್ತು ಆಡಳಿತ ವ್ಯವಸ್ಥೆಯಾಬೇಕಿದ್ದು, ಈ ಪ್ರಕ್ರಿಯೆಗಳು ಪೂರ್ಣಗೊಂಡ ನಂತರವೇ ನಿಗಮ ಕಾರ್ಯಾರಂಭ ಮಾಡಲಿದೆ.

ಕೊಡವ ಅಭಿವೃದ್ಧಿ ನಿಗಮದಿಂದ ಅಂದಾಜು ೧ ಲಕ್ಷದಷ್ಟೇ ಇರುವ ಸಣ್ಣ ಜನಾಂಗವಾದ ಕೊಡವರ ಸಮಗ್ರ ಶ್ರೇಯೋಭಿವೃದ್ಧಿಗೆ ಅನೇಕ ಅನುಕೂಲಗಳಾಗಲಿವೆ. ಮಹಿಳಾ ಸಬಲೀಕರಣ, ಯುವಜನ ಸಬಲೀಕರಣ, ವಿದ್ಯಾಭ್ಯಾಸ, ಕೌಶಲಾಭಿವೃದ್ಧಿ, ಸಂಸ್ಕೃತಿಯ ರಕ್ಷಣೆಗಾಗಿ ಕಾರ್ಯಕ್ರಮಗಳು, ಐನ್‌ಮನೆ, ಮಂದ್-ಮಾನಿಗಳು, ಪೂಜಾ ಕ್ಷೇತ್ರಗಳ ಪುನಶ್ಚೇತನಕ್ಕೆ ಯೋಜನೆಗಳನ್ನು ರೂಪಿಸಿ ಅನುದಾನವನ್ನು ತರಲು ಸಹಕಾರಿಯಾಗಲಿದೆ. ಅತಿ ಸಣ್ಣ ಜನಾಂಗ ಗಳಲ್ಲೊಂದಾದ ಕೊಡವರ ಏಳಿಗೆಗಾಗಿ ಈ ಅಭಿವೃದ್ಧಿ ನಿಗಮ ಕಾರ್ಯನಿರ್ವಹಿಸಲಿದೆ.

” ೨೦೧೪ರಲ್ಲಿ ಯುಕೋ ಸಂಘಟನೆಯಿಂದ ಮೊದಲ ಬಾರಿಗೆ ಮಂದ್ ನಮ್ಮೆ ನಡೆಸುವ ಸಂದರ್ಭದಲ್ಲಿ ಐನ್‌ಮನೆ ಮಂದ್-ಮಾನಿಗಳ ಪುನಶ್ಚೇತನಕ್ಕೆ ಪ್ರಯತ್ನಿಸಲಾಯಿತು. ಆದರೆ ಇದಕ್ಕೆ ಸರ್ಕಾರದ ಯಾವುದೇ ಅನುದಾನ ದುರ್ಲಭವಾಗಿತ್ತು. ಆ ಸಂದರ್ಭದಲ್ಲಿ ಅಭಿವೃದ್ಧಿ ನಿಗಮಕ್ಕಾಗಿ ಬೇಡಿಕೆ ಇಡಲು ನಿರ್ಧರಿಸಲಾಯಿತು. ಈ ಹಿಂದಿನ ಶಾಸಕರೂ ನಮ್ಮ ಪ್ರಯತ್ನಕ್ಕೆ ಸಾಥ್ ನೀಡಿದ್ದಾರೆ. ಹಲವು ಬಾರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗಿದೆ. ಕೊನೆಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ನಿಗಮ ಸ್ಥಾಪನೆಯಾಗಿದೆ.

– ಮಂಜು ಚಿಣ್ಣಪ್ಪ, ಯುಕೋ ಅಧ್ಯಕ್ಷ 

 

 

ಆಂದೋಲನ ಡೆಸ್ಕ್

Recent Posts

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

1 min ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

29 mins ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

56 mins ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

4 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

5 hours ago