Andolana originals

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ

ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ

ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ 

ಮಡಿಕೇರಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಜಾಗತಿಕ ಸರಕು ಸರಬರಾಜು ಸರಪಳಿಗೆ ಹೊಡೆತ ಬಿದ್ದಿದ್ದು, ಕಾಫಿ ಕೃಷಿ, ಉದ್ಯಮದ ಮೇಲೆಯೂ ಪರಿಣಾಮ ಬೀರಿದೆ. ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಈ ಎಲ್ಲಾ ಅಂಶಗಳು ಸೇರಿ ಕಾಫಿ ವಲಯದಲ್ಲಿ ಗೊಂದಲದ ವಾತಾವರಣವನ್ನು ನಿರ್ಮಾಣ ಮಾಡಿವೆ.

ಕೊಡಗು ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ಭಾರತದ ಕಾಫಿ ಉದ್ಯಮ ಬಹುಪಾಲು ರಫ್ತಿನ ಮೇಲೆ ಅವಲಂಬಿತವಾಗಿದೆ. ಯುರೋಪ್ ಮತ್ತು ಮಧ್ಯಪ್ರಾಚ್ಯ ದೇಶಗಳು ಪ್ರಮುಖ ಮಾರುಕಟ್ಟೆಗಳಾಗಿದ್ದು, ಈಗಿನ ಪರಿಸ್ಥಿತಿಯಲ್ಲಿ ಸಾಗಣೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿರುವುದರಿಂದ ವ್ಯಾಪಾರ ಚಟುವಟಿಕೆಗಳು ನಿಧಾನಗತಿಯಲ್ಲಿ ಸಾಗಿವೆ. ಹಡಗುಗಳು ಸಮಯಕ್ಕೆ ಸರಿಯಾಗಿ ಲಭ್ಯವಾಗದ ಕಾರಣ, ರಫ್ತು ಆದೇಶಗಳು ಮುಂದೂಡಲ್ಪಡುತ್ತಿದ್ದು, ಇದು ಆರ್ಥಿಕ ಚಟುವಟಿಕೆಯ ಮೇಲೂ ಪರಿಣಾಮ ಬೀರಿದೆ.

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡ ಸಮುದ್ರ ಮಾರ್ಗಗಳ ಮೇಲೆ ಕವಿದಿದೆ. ಹಾಗಾಗಿ ಸಮುದ್ರ ಮಾರ್ಗದಲ್ಲಿ ಸಂಚರಿಸುವ ಹಡಗುಗಳಿಗೆ ವಿಮಾ ಕಂಪೆನಿಗಳು ಹೆಚ್ಚುವರಿ ಪ್ರೀಮಿಯಂ ವಿಽಸುತ್ತಿವೆ. ಇದರಿಂದ ಶಿಪ್ಪಿಂಗ್ ಇನ್ಶೂರೆನ್ಸ್ ವೆಚ್ಚ ಏರಿಕೆಯಾಗಿ, ಒಟ್ಟು ರಫ್ತು ವೆಚ್ಚವೂ ಹೆಚ್ಚಾಗಿದೆ. ಈ ಹೆಚ್ಚುವರಿ ವೆಚ್ಚವನ್ನು ಕೆಲವೊಮ್ಮೆ ರಫ್ತುದಾರರು ಹೊತ್ತುಕೊಂಡರೆ, ಕೆಲವೊಮ್ಮೆ ಖರೀದಿದಾರರಿಗೆ ಇದು ಹೊರೆಯಾಗುತ್ತದೆ. ಇದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಅಸ್ಥಿರತೆ ಉಂಟಾಗುತ್ತಿದೆ.

ರೋಸ್ಟಿಂಗ್ ಘಟಕಗಳು ಶೇ.೯೦ಕ್ಕೂ ಹೆಚ್ಚು ಎಲ್‌ಪಿಜಿ ಮೇಲೆ ಅವಲಂಬಿತವಾಗಿದೆ. ಈಗಾಗಲೇ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗಿದ್ದು, ರೋಸ್ಟಿಂಗ್ ಘಟಕಗಳು ಸಂಕಷ್ಟಕ್ಕೆ ಸಿಲುಕಿವೆ. ರೋಸ್ಟಿಂಗ್ ಉದ್ಯಮಕ್ಕೆ ಹೊಡೆತ ಬಿದ್ದಿರುವುದರಿಂದ ಮೌಲ್ಯವಽತ ಉತ್ಪನ್ನಗಳ ಉತ್ಪಾದನೆ ಕುಂಠಿತವಾಗಿದ್ದು, ಡೊಮೆಸ್ಟಿಕ್ ಮಾರುಕಟ್ಟೆಗೆ ಕಾಫಿ ಪೂರೈಕೆ ಕಷ್ಟವಾಗುತ್ತಿದೆ. ಭಾರತದಲ್ಲಿ ಬಹುಪಾಲು ಹೋಟೆಲ್‌ಗಳಲ್ಲಿ ಫಿಲ್ಟರ್‌ಕಾಫಿ ಬಳಸುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಬೆಲೆ ಏರಿಕೆ ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಕಾಫಿ ಉತ್ಪಾದನೆ ಕುಸಿತ ಸಾಧ್ಯತೆ..!: 

ರಸಗೊಬ್ಬರದ ವಿಚಾರದಲ್ಲಿಯೂ ಸಂಕಷ್ಟ ಸ್ಥಿತಿ ನಿರ್ಮಾಣವಾಗಿದೆ. ಯುರೋಪ್‌ನಿಂದ ಆಗುವ ಆಮದು ವ್ಯತ್ಯಯಗೊಂಡರೆ, ಮುಂದಿನ ಕಾಫಿ ಹಂಗಾಮಿನಲ್ಲಿ ಉತ್ಪಾದನೆ ಕುಸಿತ ಕಾಣುವ ಸಾಧ್ಯತೆ ಇದೆ. ಈಗಾಗಲೇ ಕೃಷಿ ಉತ್ಪಾದನಾ ವೆಚ್ಚಗಳು ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ರಸಗೊಬ್ಬರದ ಬೆಲೆಯೂ ಏರಿಕೆ ಕಂಡರೆ ಬೆಳೆಗಾರರ ಮೇಲೆ ಮತ್ತಷ್ಟು ಒತ್ತಡವನ್ನು ಉಂಟುಮಾಡಲಿದೆ. ಮಧ್ಯಪ್ರಾಚ್ಯದ ದೇಶಗಳು ಜಾಗತಿಕ ಇಂಧನ ಸರಬರಾಜಿನ ಪ್ರಮುಖ ಕೇಂದ್ರವಾಗಿರುವುದರಿಂದ, ಅಲ್ಲಿ ಉಂಟಾಗುವ ಯಾವುದೇ ಅಸ್ಥಿರತೆಯು ಡೀಸೆಲ್ ಮತ್ತು ಎಲ್‌ಪಿಜಿ ಬೆಲೆ ಹಾಗೂ ಲಭ್ಯತೆಯ ಮೇಲೆ ಪರಿಣಾಮ ಬೀರುತ್ತದೆ. ಕೊಡಗು ಜಿಲ್ಲೆಯಂತಹ ಗುಡ್ಡಗಾಡು ಪ್ರದೇಶದಲ್ಲಿ ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಡೀಸೆಲ್ ಮೇಲೆ ಅವಲಂಬಿತವಾಗಿರುವುದರಿಂದ, ಇಂಧನದ ಅಭಾವ ಉಂಟಾದರೆ ಕೃಷಿ ಉತ್ಪನ್ನಗಳನ್ನು ಸಾಗಣೆ ಮಾಡುವುದು ದೊಡ್ಡ ಸವಾಲಾಗುತ್ತದೆ.

” ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಕಾಫಿ ಕೃಷಿ ಮೇಲೆಯೂ ಆಗತೊಡಗಿದೆ. ಸದ್ಯ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರವಾಗಿದೆಯಾದರೂ ಯಾವ ಕ್ಷಣದಲ್ಲಾದರೂ ಏರುಪೇರಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ವಿಮಾ ಹೆಚ್ಚಳ, ಕಂಟೇನರ್ ಅಲಭ್ಯತೆಯ ಸಮಸ್ಯೆಗಳು ಒಂದೆಡೆಯಾದರೆ, ಎಲ್‌ಪಿಜಿ ಅಲಭ್ಯತೆ ರೋಸ್ಟಿಂಗ್ ಉದ್ಯಮದ ಮೇಲೆ ಆಗಿದೆ. ದೇಶಿ ಮಾರುಕಟ್ಟೆಯಲ್ಲೂ ಸಮಸ್ಯೆ ಉಂಟಾಗುತ್ತಿದೆ.”

-ವಿಶ್ವನಾಥ್, ಉಪಾಧ್ಯಕ್ಷರು, ರಾಜ್ಯ ಬೆಳೆಗಾರರ ಒಕ್ಕೂಟ

 

 

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

2 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

7 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

7 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

7 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

8 hours ago