Andolana originals

ಪಂಜಿನ ಕವಾಯತಿನೊಂದಿಗೆ ದಸರಾಕ್ಕೆ ವರ್ಣರಂಜಿತ ತೆರೆ

ಮೈಸೂರು: ಆಕರ್ಷಕ ಪರೇಡ್, ಅನೇಕ ರೋಚಕ, ಸಾಹಸ ಪ್ರದರ್ಶನಗಳು, ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ ರೂಪಕ, ಹಾಡು, ಚಂಡೆ ಮದ್ದಳೆ, ಮನಮೋಹಕ ಪಂಜಿನ ಕವಾಯತು, ಡ್ರೋನ್ ಪ್ರದರ್ಶನ ಇವುಗಳೊಂದಿಗೆ 10 ದಿನಗಳ ನಾಡಹಬ್ಬ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ ಬಿದ್ದಿತು.
ಶನಿವಾರ ಬನ್ನಿಮಂಟಪ ಮೈದಾನದಲ್ಲಿ ನಡೆದ ಪಂಜಿನ ಕವಾಯತು ಪ್ರದರ್ಶನ (ಟಾರ್ಚ್‌ ಲೈಟ್ ಪರೇಡ್)ದಲ್ಲಿ ಕಲೆಯ ಅನೇಕ ಪ್ರಕಾರಗಳು ಅನಾವರ ಣಗೊಂಡವು. ಸುಬೇದಾರ್ ಎಂ.ಕೆ.ಸಿಂಗ್ ನೇತೃತ್ವದಲ್ಲಿ ನಡೆದ ರೋಚಕ ಬೈಕ್ ಶೋ ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿತು.

ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಪ್ರಾರಂಭವಾಗುವ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಪಂಜಿನ ಕವಾಯತು ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ಅಶ್ವಾರೋಹಿ ದಳದ ಸಾಹಸ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು.

ಅಶ್ವಾರೋಹಿ ದಳದ ಸಾಹಸ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು. ಇದಕ್ಕೂ ಮುನ್ನ ಸಾಂಪ್ರದಾಯಿಕವಾಗಿ ರಾಜ್ಯಪಾಲ ಥಾವರ್‌ಚಂದ್‌ ಗೆಲ್ಲೋಟ್ ಅವರು ತೆರೆದ ವಾಹನದಲ್ಲಿ ಪಥ ಸಂಚಲನದ ಪರಿವೀಕ್ಷಣೆ ಮಾಡಿದರು. ಅಶ್ವಾರೋಹಿ ಪಡೆಯ ತುಕಡಿಗಳು, ಕೆಎಸ್‌ಆರ್‌ ಪಿಯ ತುಕಡಿಗಳು, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕ ದಳ, ನೌಕದಳ, ವಾಯುದಳ, ಸೌಟ್ಸ್ ಮತ್ತು ಗೈಡ್ಸ್ ಬಾಲಕಿ ಯರು, ಸೇವಾದಳ ಸೇರಿದಂತೆ ಶಸ್ತ್ರಸಜ್ಜಿತ ತುಕಡಿಗಳಿಂದ ನಡೆದ ಪರೇಡ್
ಗಮನ ಸೆಳೆಯಿತು.

ಖ್ಯಾತ ಕಲಾವಿದರಾದ ಅನನ್ಯ ಭಟ್ ಮತ್ತು ತಂಡದವರು ನಾಡಗೀತೆ ಹಾಡಿದರೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಾದ್ಯವೃಂದದವರು ರಾಷ್ಟ್ರ ಗೀತೆ ನುಡಿಸಿದರು. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ವತಿಯಿಂದ ಮೊದಲ ಬಾರಿಗೆ ಆಯೋಜಿಸಿದ್ದ ‘ಬೃಹತ್ ಡೋನ್ ಶೋ’ ನಲ್ಲಿ ಬಾನಂಗಳದಲ್ಲಿ ಮೂಡಿದ ಚಿತ್ತಾರಗಳನ್ನು ನೋಡಿ ಜನರು ಸಂಭ್ರಮಿಸಿದರು. ರೋಚಕ ಬೈಕ್ ಶೋ ಪ್ರೇಕ್ಷಕರನ್ನು ಕುತೂಹಲದ ಜತೆಗೆ ಎದೆ ಝಲ್ಲೆನಿಸುವಂತೆ ಮಾಡಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಹಿರಿಯ ಅಧಿ ಕಾರಿಗಳು, ಗಣ್ಯರು,ಜನಪ್ರತಿನಿಧಿಗಳು ಹಾಜರಾಗಿ ಪಂಜಿನ ಕವಾಯತು ಪ್ರದರ್ಶನವನ್ನು ವೀಕ್ಷಿಸಿದರು.

ಪಾಸ್ ಇದ್ದರೂ ಗೊಂದಲ: ಜಂಬೂಸವಾರಿ ವೀಕ್ಷಿಸಿದ್ದ ಗಣ್ಯರು ಬನ್ನಿಮಂಟಪದ ಕಡೆಗೆ ಆಗಮಿಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತ ವಾಯಿತು. ಪಾಸ್‌ ಇದ್ದರೂ ಯಾವ ಗೇಟ್‌ನಿಂದ ಒಳಗೆ ಹೋಗ ಬೇಕು ಎನ್ನುವ ಗೊಂದಲದಿಂದ ಹಲವರು ಪರದಾಡಿದರೆ, ಪಾಸ್ ಇಲ್ಲದಿದ್ದರೂ ಕೆಲವರು ಒಳನುಗ್ಗಿ ಅಡ್ಡಾಡಿಕೊಂಡು ವೀಕ್ಷಣೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago